ಅರಳಿ ಮರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ವಿವಿಧ ಸಂಘಟನೆಗಳು
ಮೈಸೂರು, ಮಾರ್ಚ್ 2: ಇತ್ತೀಚಿನ ದಿನಗಳಲ್ಲಿ ಪರಿಸರ ಸಂರಕ್ಷಣೆಗೆ ಸರ್ಕಾರ, ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರೂ ಶ್ರಮಿಸುತ್ತಿದ್ದಾರೆ. ಪರಿಸರ ಉಳಿಸುವ ಆಂದೋಲನಕ್ಕಾಗಿಯೇ ಸರ್ಕಾರ ವಾರ್ಷಿಕ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳುಮರಗಳನ್ನು ಕಡಿಯಬೇಡಿ, ಸಸಿಗಳನ್ನು ನೆಡಿ' ಎಂಬ ಜಾಗೃತಿ ಕಾರ್ಯಕ್ರಮಕ್ಕೆ ಕೋಟ್ಯಾಂತರ ರುಪಾಯಿ ವೆಚ್ಚ ಮಾಡುತ್ತಿದೆ. ಈ ನಡುವೆ ಅಲ್ಲಲ್ಲಿ ಸರ್ಕಾರದ ಅಧಿಕಾರಿಗಳು ಮತ್ತು ಜನರೇ ಮರಗಳನ್ನು ಕಡಿದಿರುವ ಪ್ರಕರಣಗಳೂ ವರದಿ ಆಗುತ್ತಿವೆ.
ಮೈಸೂರು ನಗರದ ಶ್ರೀರಾಂಪುರದ ಬೆಮೆಲ್ ಲೇಔಟ್ನ ಗಣಪತಿ ದೇವಾಲಯದ ಬಳಿ ಬೃಹತ್ ಅರಳಿ ಮರವೊಂದನ್ನು ಎರಡು ದಿನಗಳ ಹಿಂದೆ ಕಡಿದು ಹಾಕಲಾಗಿದೆ. ಈ ಕುರಿತು ಮಾತನಾಡಿದ ಪರಿಸರವಾದಿ, ಸ್ಥಳೀಯರಾದ ಭಾಮಿ ಶೆಣೈ ಅವರು, ""ಅರಣ್ಯ ಇಲಾಖೆಯೇ ಹಿಂದೆ ಮುಂದೆ ನೋಡದೆ ಮರ ಕಡಿಯಲು ಅನುಮತಿ ನೀಡಿದೆ'' ಎಂದು ಆರೋಪಿಸಿದರು.

"ಸುಮಾರು 35 ವರ್ಷಗಳ ಬೃಹತ್ ಮರ ಇಷ್ಟು ವರ್ಷ ಗಾಳಿ, ನೆರಳು ನೀಡುತ್ತಿತ್ತು. ಆದರೆ ಎದುರು ಮನೆಯವರು ಬೇರು ಬರುತ್ತದೆ ಎಂದು ಹೇಳಿ ಕಡಿಸಿ ಹಾಕಿದ್ದಾರೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಬಹುದಿತ್ತು, ಇಲಾಖೆ ಅನುಮತಿ ಕೊಟ್ಟಿದ್ದೇ ತಪ್ಪು'' ಎಂದರು.

"ಮರ ಕಡಿದಿರುವುದನ್ನು ಖಂಡಿಸಿ ಇಂದು ಕದಂಬ ಸೇನೆ, ಪರಿಸರ ಹಿತರಕ್ಷಣಾ ವೇದಿಕೆ, ಕನ್ನಡ ಸ್ವಾಭಿಮಾನ ಬಳಗದವರು ಶ್ರದ್ಧಾಂಜಲಿ ಸಲ್ಲಿಸಿ ಮರಗಳನ್ನು ಕಡಿಯದಂತೆ ಮನವಿ ಮಾಡಿದರು. ಇದಲ್ಲದೆ ಬೆಮೆಲ್ ಲೇಔಟಿನಲ್ಲಿ ಮನೆಗಳ ಮುಂದೆ ಬೆಳೆದಿದ್ದ 4-5 ಮರಗಳನ್ನೂ ಕಡಿದಿದ್ದಾರೆ. ಇದಕ್ಕೆ ಕಡಿವಾಣ ಹಾಕುವಂತೆ'' ಸರ್ಕಾರ ಮತ್ತು ಅರಣ್ಯ ಇಲಾಖೆಯನ್ನು ಒತ್ತಾಯಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications