ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಸಿಎಂ ಭಾಗಿ
ಇಂದು ಮೈಸೂರು ಅರಮನೆ ಸೇರಿದಂತೆ ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ ಮುಗಿಲುಮುಟ್ಟಿದೆ. ಬೆಳಿಗ್ಗೆ 5.30ಕ್ಕೆ ಚಂಡಿಹೋಮದೊಂದಿಗೆ ಮೈಸೂರು ಅರಮನೆಯಲ್ಲಿ ಪೂಜೆಗಳು ಆರಂಭಗೊಂಡಿವೆ. 9.30ಕ್ಕೆ ಚಂಡಿಹೋಮಪೂರ್ಣಾಹುತಿ ಕಾರ್ಯಕ್ರಮ ಮುಕ್ತಾಯವಾಗಲಿದೆ. ಇದನ್ನು ಕಣ್ತುಂಬಿಕೊಳ್ಳಲು ಭಕ್ತ ಸಾಗರವೇ ಹರಿದು ಬರಲಿದೆ.
ಬೆಳಿಗ್ಗೆ 11.45ಕ್ಕೆ ಕಲ್ಯಾಣ ಮಂಟಪಕ್ಕೆ ಪಟ್ಟಣದ ಆನೆ, ಕುದುರೆ, ಪಟ್ಟದ ಹಸು ಆಗಮಿಸಲಿದೆ. ಮಧ್ಯಾಹ್ನ 12.20 ನಿಮಿಷದಿಂದ ಮಧ್ಯಾಹ್ನ 12.45 ನಿಮಿಷದವರೆಗೆ ಆಯುಧ ಪೂಜೆ ನಡೆಯಲಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದೆ. ಇದೊಂದು ಹಿಂದೂ ಹಬ್ಬವಾಗಿದ್ದು, ಇದನ್ನು ಸಾಂಪ್ರದಾಯಿಕವಾಗಿ ಭಾರತದಲ್ಲಿ ಆಚರಿಸಲಾಗುತ್ತದೆ.

ಇದನ್ನು 'ಅಸ್ತ್ರ ಪೂಜಾ' ಎಂದೂ ಕರೆಯಲಾಗುತ್ತದೆ. ದಸರಾ ಹಬ್ಬದ ಒಂಬತ್ತನೇ ದಿನ ಶಸ್ತ್ರಾಸ್ತ್ರ ಮತ್ತು ಸಾಧನಗಳನ್ನು ಪೂಜಿಸಲಾಗುತ್ತದೆ. ಅಶ್ವಿನಿ ಮಾಸದ ಶುಕ್ಲಪಕ್ಷದ ನವಮಿ ದಿನ ಶಸ್ತ್ರಾಸ್ತ್ರ, ವಾಹನ ಹಾಗೂ ಯಂತ್ರಗಳ ಪೂಜೆಯನ್ನು ಮಾಡಿದರೆ ಶುಭವಾಗಲಿದೆ ಎಂದು ನಂಬಲಾಗುತ್ತದೆ.
ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧಪೂಜೆ ನೆರವೇರಿಸಲಿದ್ದಾರೆ. ಯದುವೀರ ಅವರು ಶುಭ್ರವಸ್ತ್ರಧಾರಿಯಾಗಿ ಅರಮನೆಯಲ್ಲಿನ ಆಯುಧಗಳಿಗೆ ಪೂಜೆ ನೆರವೇರಿಸಿ, ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಯದುವೀರ ಅವರು ಶುಭ್ರವಸ್ತ್ರಧಾರಿಯಾಗಿ ಅರಮನೆಯಲ್ಲಿನ ಆಯುಧಗಳಿಗೆ ಪೂಜೆ ನೆರವೇರಿಸಿ, ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಈ ಮಧ್ಯೆ, ಮಂಗಳವಾರ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ನಡೆಯಲಿದ್ದು, ಇದರೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರದಾಯಿಕವಾಗಿ ನಡೆಯುತ್ತಿರುವ ನಾಡಹಬ್ಬಕ್ಕೆ ತೆರೆ ಬೀಳಲಿದೆ.
ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು, ಚಿನ್ನದ ಅಂಬಾರಿಯಲ್ಲಿ ಸಾಗುವ ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದಿಂದ ನಮಿಸಲು ದೇಶ-ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಸಾಂಸ್ಕೃತಿಕ ನಗರಿಯತ್ತ ಧಾವಿಸಲಿದ್ದಾರೆ. ಇದಕ್ಕಾಗಿ ಅರಮನೆ ನಗರಿ ರಂಗೇರುತ್ತಿದೆ.
ಸಿಎಂ ಭಾಗಿ
ಮೈಸೂರು ದಸರಾ ಸಂಭ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಳ್ಳಲಿರುವ ಸಿಎಂ ಇಂದು ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ನಗರದ ಬನ್ನಿಮಂಟಪದಲ್ಲಿ ನಡೆಸಲಿರುವ ವೈಮಾನಿಕ ಪ್ರದರ್ಶನ ವೀಕ್ಷಿಸಲಿದ್ದಾರೆ. ಇನ್ನು ನಾಳೆ ಬೆಳಗ್ಗೆ ಎಂಟು ಗಂಟೆಗೆ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಏರ್ ಶೋ
ಜೊತೆಗೆ ಇಂದು ಮೈಸೂರಿನಲ್ಲಿ ಏರ್ಶೋ ನಡೆಯಲಿದ್ದು, ಸಿಎಂ ಇದಕ್ಕೆ ಸಾಕ್ಷಿಯಾಗಲಿದ್ದಾರೆ. ಭಾರತೀಯ ವಾಯುಪಡೆ ವತಿಯಿಂದ ಏರ್ ಶೋ ನಡೆಯುತ್ತಿದ್ದು, ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬನ್ನಿ ಮಂಟಪದಲ್ಲಿ ಯುದ್ಧ ವಿಮಾನಗಳು ಪ್ರದರ್ಶನ ನಡೆಯಲಿದೆ. ಜಂಬೂಸವಾರಿ ವೀಕ್ಷಣೆಗೆ ಆಗಮಿಸುವ ಅತಿ ಗಣ್ಯರು, ಗಣ್ಯರು, ಆಹ್ವಾನಿತರು, ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಹೊಂದಿರುವವರಿಗೆ ಅರಮನೆ ಆವರಣದಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications