ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿದ್ದ ಬಾಹುಬಲಿ ಮೇಣದ ಪ್ರತಿಮೆ ತೆರವು, ಏಕೆ?, ಇಲ್ಲಿದೆ ನೋಡಿ ಸಂಪೂರ್ಣ ವಿವರ
ಮೈಸೂರು, ಸೆಪ್ಟೆಂಬರ್, 26: ಬಾಹುಬಲಿ ಸಿನಿಮಾ ಇಡೀ ಭಾರತ ಮಾತ್ರವಲ್ಲ, ಪ್ರಪಂಚದಾದ್ಯಂತ ಸದ್ದು ಮಾಡಿತ್ತು. ಅದರಲ್ಲೂ ಬಾಹುಬಲಿಯಾಗಿ ಪ್ರಭಾಸ್ ನಟನೆ ಅದ್ಭುತವಾಗಿತ್ತು ಎಂಬ ಮೆಚ್ಚುಗೆ ವಿಮರ್ಶಕರಿಂದ ಬಂದಿತ್ತು. ಇದೀಗ ಬಾಹುಬಲಿ ಮೇಣದ ಪ್ರತಿಮೆ ವಿವಾದಕ್ಕೆ ಸಿಲುಕಿದ್ದು, ನಿರ್ಮಾಪಕರ ಆಕ್ಷೇಪದ ಮೇರೆಗೆ ವ್ಯಾಕ್ಸ್ ಮ್ಯೂಸಿಯಂ ಪ್ರತಿಮೆಯನ್ನು ತೆರವುಗೊಳಿಸಿದೆ.
ಅಂದಹಾಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ "ಚಾಮುಂಡೇಶ್ವರಿ ಸೆಲೆಬ್ರಿಟಿ ವ್ಯಾಕ್ಸ್ ಮ್ಯೂಸಿಯಂ" ಇದೆ. ಇಲ್ಲಿ ಸಾಕಷ್ಟು ಮಹನೀಯರು ಹಾಗೂ ಸಿನಿಮಾ ಸೆಲೆಬ್ರಿಟಿಗಳ ಪ್ರತಿಮೆಯನ್ನು ಮಾಡಿ ಪ್ರದರ್ಶನಕ್ಕೆ ಇಡಲಾಗಿದೆ. ಈ ಮ್ಯೂಸಿಯಂಗೆ ನಿತ್ಯ ಸಾಕಷ್ಟು ಪ್ರವಾಸಿಗರು ಬರುತ್ತಾರೆ. ಈ ನಿಟ್ಟಿನಲ್ಲಿ ಇತ್ತೀಚಿಗೆ ಬಾಹುಬಲಿ ಪ್ರಭಾಸ್ ಅವರ ಮೇಣದ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ಆದರೆ, ಇದೇ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಪ್ರತಿಮೆ ಸ್ಥಾಪನೆಯಾದ ಕೆಲವೇ ದಿನಗಳಲ್ಲಿ ಅದನ್ನು ತೆರವುಗೊಳಿಸಲಾಗಿದೆ.

ಏನಿದು ವಿವಾದ?
ವ್ಯಾಕ್ಸ್ ಮ್ಯೂಸಿಯಂನಲ್ಲಿ ಮೂರು ವರ್ಷದ ಹಿಂದೆ ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಅವರ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿತ್ತು. ಇದರ ಚಿತ್ರವನ್ನು ತೆಗೆದು ಅಭಿಯಾನಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಪ್ರಭಾಸ್ ನೆಟ್ವರ್ಕ್ ಮತ್ತು ಎಕ್ಸ್ ಪೇಜ್ನಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿತ್ತು. ಆದರೆ, ಆ ಚಿತ್ರ ಬಾಹುಬಲಿಯನ್ನು ಹೋಲುತ್ತಿಲ್ಲ ಎಂದು ಹಲವು ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಪ್ರಭಾಸ್ ರೀತಿ ಇಲ್ಲ. ಡೇವಿಡ್ ವಾರ್ನರ್ ರೀತಿ ಇದೆ ಎಂದು ಬೇಸರ ಹೊರ ಹಾಕಿದ್ದರು.
ನಿರ್ಮಾಪಕರಿಂದ ಆಕ್ಷೇಪ
ಇದು ಪ್ರಭಾಸ್ ಅವರನ್ನು ಹೋಲುತ್ತಿಲ್ಲ, ಬಾಹುಬಲಿ ಅವತಾರ ನೋಡಿಯಷ್ಟೇ ಪ್ರಭಾಸ್ ಎಂದು ಗುರುತಿಸಬಹುದು ಎಂದು ಹಲವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಚರ್ಚೆ ಆಗುತ್ತಿರುವುದು ಬಾಹುಬಲಿ ಸಿನಿಮಾದ ನಿರ್ಮಾಪಕ ಶೋಭು ಯರ್ಲಗಡ್ಡ ಅವರ ಗಮನಿಸಿದ್ದಾರೆ. ಮೇಣದ ಪ್ರತಿಮೆ ನೋಡಿ ಬೇಸರಗೊಂಡಿದ್ದಾರೆ. "ಮ್ಯೂಸಿಯಂನಲ್ಲಿರುವ ಮೇಣದ ಪ್ರತಿಮೆ ಉತ್ತಮ ಗುಣಮಟ್ಟದಿಂದ ಕೂಡಿಲ್ಲ. ಇದರ ಕಸ್ಟ್ಯೂಮ್ ಸರಿ ಇಲ್ಲ. ಪ್ರಭಾಸ್ ಅನ್ನು ಇದು ಹೋಲುತ್ತಿಲ್ಲ" ಎಂದು ಬೇಸರ ವ್ಯಕ್ತಪಡಿಸಿದ್ದರು.
ತೆರವಾಯ್ತು ಪ್ರತಿಮೆ
ಬಾಹುಬಲಿ ನಿರ್ಮಾಪಕ ಮೇಣದ ಪ್ರತಿಮೆಗೆ ಆಕ್ಷೇಪ ವ್ಯಕ್ತಪಡಿಸಿದ್ದಷ್ಟೇ ಅಲ್ಲದೆ, ವ್ಯಾಕ್ಸ್ ಮ್ಯೂಸಿಯಂಗೆ ಕರೆ ಮಾಡಿ ಪ್ರತಿಮೆ ತೆರವುಗೊಳಿಸುವಂತೆ ಸೂಚಿಸಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಸಂಸ್ಥೆಯು ಸೋಮವಾರ ಪ್ರಭಾಸ್ ಪ್ರತಿಮೆಯನ್ನು ತೆರವುಗೊಳಿಸಿದೆ. ನಾವು ಅವರಿಂದ ಅನುಮತಿ ಪಡೆಯದ ಕಾರಣ ಹಾಗೂ ಪ್ರತಿಮೆ ಬಗ್ಗೆ ಆಕ್ಷೇಪ ಎತ್ತಿದ ಕಾರಣ ತೆರವುಗೊಳಿಸಿದ್ದೇವೆ ಎಂದು ವ್ಯಾಕ್ಸ್ ಮ್ಯೂಸಿಯಂ ಮ್ಯಾನೇಜರ್ ಸ್ಪಷ್ಟಪಡಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications