ಆಗಷ್ಟೇ ಹುಟ್ಟಿದ ಹೆಣ್ಣು ಕೂಸಿನ ಕತ್ತು ಸೀಳಿ, ಚರಂಡಿಗೆ ಎಸೆದವರು ಯಾರು?
ಮೈಸೂರು, ಸೆಪ್ಟೆಂಬರ್ 4: ನವಜಾತ ಶಿಶುವಿನ ಕತ್ತು ಸೀಳಿ, ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ. ಹುಣಸೂರಿನ ಹನಗೋಡು ಗ್ರಾಮದ ಚರಂಡಿಯೊಂದರಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.
ಮಗುವಿನ ದೇಹವಿಡೀ ರಕ್ತದಲ್ಲಿ ತೊಯ್ದಿದೆ. ತುಂಡು ಬಟ್ಟೆಯನ್ನೂ ಹಾಕಿಲ್ಲ. ಸತ್ತ ಆ ಮಗುವನ್ನು ಚರಂಡಿಯಲ್ಲಿ ಕಂಡ ದಾರಿ ಹೋಕರೊಬ್ಬರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಪೊಲೀಸರು ಮಗುವಿನ ಮೃತ ದೇಹವನ್ನು ಹೊರತೆಗೆದು ಪರೀಕ್ಷೆಗೆ ಕಳುಹಿಸಿದ್ದಾರೆ.
"ನಿರ್ಜನ ಪ್ರದೇಶದಲ್ಲಿ ಮಗುವಿನ ದೇಹ ಪತ್ತೆಯಾಗಿದ್ದು, ಹೆಣ್ಣು ಮಗು ಎಂಬ ಕಾರಣಕ್ಕೆ ಹೀಗೆ ಮಾಡಿರಬಹುದು. ಮಗುವಿನ ಕತ್ತನ್ನು ಸೀಳಲಾಗಿದ್ದು, ರಕ್ತಸ್ರಾವವಾಗಿ ಮಗು ಸಾವನ್ನಪ್ಪಿದೆ. ಮಗು ಹುಟ್ಟಿದ ಒಂದು ದಿನದ ಒಳಗೇ ಈ ಕೃತ್ಯ ನಡೆದಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

ಕೊಳವಿಗೆ ರಸ್ತೆಯಲ್ಲಿ ನಿವಾಸಿಯೊಬ್ಬರು ಮಗುವಿನ ಮೃತದೇಹ ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಚರಂಡಿಗೆ ಬಿಸಾಡಿರುವ ಸಾಧ್ಯತೆಯಿದೆ. ಈ ಸಂಬಂಧ ಗ್ರಾಮ ಪಂಚಾಯಿತಿ ಸದಸ್ಯ ಇಮ್ತಿಯಾಜ್ ಪಾಶಾ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications