ಮೈಸೂರಿನಲ್ಲಿ ದಸರಾ ಆನೆಗಳಿಗೆ ತೂಕ ಪರೀಕ್ಷೆ: ಈ ಬಾರಿಯೂ ಅರ್ಜುನನೇ ಬಲಶಾಲಿ
Recommended Video

ಮೈಸೂರು, ಸೆಪ್ಟೆಂಬರ್.06: ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಗಜಪಡೆಗೆ ತೂಕ ಪರೀಕ್ಷೆ ಮಾಡಲಾಯಿತು. ತೂಕ ಪರೀಕ್ಷೆಯಲ್ಲಿ ಈ ಬಾರಿಯು ಅಂಬಾರಿ ಆನೆ ಅರ್ಜುನನೇ ಬಲಶಾಲಿಯಾಗಿದ್ದು, ಬರೋಬ್ಬರಿ 5,650 ಕೆಜಿ ತೂಗಿದ್ದಾನೆ.
ಕಳೆದ ವರ್ಷ 5,250 ಕೆಜಿ ತೂಕವಿದ್ದ ಕ್ಯಾಪ್ಟೆನ್ ಅರ್ಜುನ ಈ ಬಾರಿ 400 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾನೆ. ಕಳೆದ ವರ್ಷ 2,830 ಕೆಜಿ ತೂಕ ಇದ್ದ ವರಲಕ್ಷ್ಮೀ ಆನೆ ಬರುವಾಗಲೇ 290 ಕೆಜಿ ತೂಕ ಹೆಚ್ಚಿಸಿಕೊಂಡಿದೆ.
ಇನ್ನು ಕ್ರಮವಾಗಿ ವಿಕ್ರಮ 3,985 ಕೆಜಿ, ಧನಂಜಯ 4,045 ಕೆಜಿ, ಗೋಪಿ 4,435 ಕೆಜಿ, ಚೈತ್ರ 2,920 ಕೆಜಿ ಇದ್ದು, ಕಳೆದ ವರ್ಷ ಎರಡನೇ ತಂಡದಲ್ಲಿ ಆಗಮಿಸಿದ್ದರು. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಧನಂಜಯ ತೂಕ ಹಾಕಿಸಿಕೊಂಡಿದ್ದಾನೆ.

ದಸರಾ ಸಂದರ್ಭದಲ್ಲಿ ಆನೆಗಳ ಆರೋಗ್ಯ, ಅವುಗಳಿಗೆ ನೀಡಬೇಕಾದ ಪೌಷ್ಠಿಕಾಂಶ ಎಷ್ಟು ನೀಡಬೇಕು, ಯಾವ ರೀತಿಯ ಆಹಾರ ನೀಡಬೇಕು ಎಂಬುದನ್ನು ನಿರ್ಧರಿಸುವ ನಿಟ್ಟಿನಲ್ಲಿ ದಸರಾದಲ್ಲಿ ಪಾಲ್ಗೊಳ್ಳಲು ಬಂದ ಆನೆಗಳಿಗೆ ಅರಮನೆಯ ಸ್ವಾಗತದ ನಂತದ ದಿನವೇ ತೂಕ ಮಾಡಿಸಲಾಗುತ್ತದೆ.

ಆನೆಗಳ ಆರೈಕೆಗಾಗಿ ಭತ್ತದ ಹುಲ್ಲು ಬೆಣ್ಣೆ, ಕಬ್ಬು, ಬೆಲ್ಲ, ಕೊಬ್ಬರಿ, ವಿವಿಧ ರೀತಿಯ ಸೊಪ್ಪುಗಳನ್ನು ಅವುಗಳ ತೂಕದ ಆಧಾರದ ಮೇಲೆ ನೀಡಲಾಗುತ್ತದೆ. ಜಂಬೂ ಸವಾರಿಗೆ ಎರಡು ದಿನ ಬಾಕಿ ಇರುವಾಗ ಚಿನ್ನದ ಅಂಬಾರಿ ಹೊರುವ ಅರ್ಜುನನಿಗೆ ಮತ್ತೊಮ್ಮೆ ತೂಕ ಮಾಡಿಸಿ ಎಷ್ಟು ಪೌಷ್ಠಿಕಾಂಶ ನೀಡಬೇಕು ಎಂಬುದನ್ನು ನಿರ್ಧರಿಸಿ ಆಹಾರ ನೀಡಲಾಗುತ್ತದೆ.

ಕಾಡಿನಿಂದ ನಾಡಿಗೆ ಬಂದಿರುವ ಆನೆಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುವುದು, ಶಬ್ದ, ಜನಸಂದಣಿ ಪರಿಚಯ ಮಾಡಿಸುವ ಸಲುವಾಗಿ ಇಂದಿನಿಂದ ಬೆಳಗ್ಗೆ ಹಾಗೂ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಕರೆದೊಯ್ಯಲಾಗುತ್ತದೆ.

ಕೆಲ ದಿನ ಕಳೆದ ನಂತರ ಅವುಗಳ ಬೆನ್ನಿನ ಮೇಲೆ ಮರಳಿನ ಮೂಟೆ ಭಾರ ಹೊರುವ ತಾಲೀಮು ನೀಡಲಾಗುತ್ತದೆ. ಅರಮನೆ ಆವರಣದಲ್ಲಿ ನಿರ್ಮಿಸಿರುವ ಶೆಡ್ ಗಳಲ್ಲಿ ಬೀಡು ಬಿಟ್ಟಿರುವ ಈ ಆನೆಗಳಿಗೆ ಸ್ನಾನ ಮಾಡಿಸಿ ಉಪಚಾರ ಮಾಡಲಾಗುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications