ಮೈಸೂರಿನಲ್ಲಿ ಕಳೆಗಟ್ಟಿದ 'ಬಹುರೂಪಿ' ನಾಟಕೋತ್ಸವದ ರಂಗು!
ಮೈಸೂರು, ಜನವರಿ 12 : ರಂಗಾಯಣದ ಆವರಣದಲ್ಲಿ ಬಹುರೂಪಿ ಅಂತರಾರಾಷ್ಟ್ರೀಯ ಬಹುಭಾಷಾ ನಾಟಕೋತ್ಸವಕ್ಕೆ ಸಿದ್ದತೆಗಳು ಪೂರ್ಣಗೊಂಡಿದ್ದು ಪ್ರದರ್ಶನಕ್ಕೆ ಮುದುವಣಗಿತ್ತಿಯಂತೆ ಸಜ್ಜಾಗಿದೆ. ನಾಳೆಯಿಂದ(ಜ 13) 18ರವರೆಗೆ 6 ದಿನಗಳ ಕಾಲ ನಡೆಯಲಿರುವ ನಾಟಕೋತ್ಸವಕ್ಕೆ ರಂಗಾಯಣ ಹಾಗು ಕಲಾಮಂದಿರದ ಸುತ್ತ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.[ಜ.13ರಿಂದ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ನಾಟಕೋತ್ಸವ]
ಬಹುರೂಪಿ ಹತ್ತಿರುವಾಗುತ್ತಿದ್ದಂತೆ ರಂಗಾಯಣದ ಆವರಣ ಸ್ವರೂಪವೇ ಬದಲಾಗಿ ವಿವಿಧ ಆಕರ್ಷಣೀಯ ಬಣ್ಣಗಳಿಂದ ಸಿಂಗಾರಗೊಂಡಿದೆ. ರಂಗಸಂಗೀತ, ದೇಶ, ವಿದೇಶದ ನಾಟಕಗಳು, ಚಲನಚಿತ್ರೋತ್ಸವ, ಬಿತ್ತಿ ಚಿತ್ರ ಪ್ರದರ್ಶನ, ಕರಕುಶಲ ವಸ್ತುಗಳ ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣ ಸೇರಿದಂತೆ ವಿವಿಧ ವಿಶೇಷ ಕಾರ್ಯಕ್ರಮಗಳು ಬಹುರೂಪಿಗೆ ಮೆರಗು ನೀಡಲಿವೆ.[ಮೈಸೂರು ಬಹುರೂಪಿ ರಂಗೋತ್ಸವಕ್ಕೆ ಓಂ ಪುರಿ ಬರಬೇಕಿತ್ತಾ?]
ನಾಟಕ ನಡೆಯುವ ಭೂಮಿಗೀತ, ವನರಂಗ, ಕಿರುರಂಗಮಂದಿರ ಹಾಗೂ ಕಲಾಮಂದಿರಗಳಲ್ಲಿ ಸಿದ್ಧತೆಗಳು ಭರದಿಂದ ಸಾಗಿದೆ. ಭೂಮಿಗೀತದಲ್ಲಿ ಬೆಳಿಗ್ಗೆ 9ರಿಂದ ರಾತ್ರಿ 9 ರವರೆಗೂ ನಾಟಕಗಳ ತಾಲೀಮು ಶುರುವಿಟ್ಟುಕೊಂಡಿದೆ. ದೇಶವಿದೇಶಗಳಿಂದ ಬರುವ ಕಲಾವಿದರು ವಾಸ್ತವ್ಯ ಹೂಡಲು ಮುಕ್ತ ವಿವಿ, ಮೈಸೂರು ವಿವಿ ಅತಿಥಿ ಗೃಹ ಸೇರಿದಂತೆ ಹಲವು ಕಡೆ ಕೊಠಡಿಗಳನ್ನು ಕಾಯ್ದಿಸಲಾಗಿದೆ. ದಿನಕ್ಕೆ 150 ರಿಂದ 200 ಮಂದಿ ಕಲಾವಿದರ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ.

ಗಮನ ಸೆಳೆವ ಮಳಿಗೆಗಳು ಸಜ್ಜು
ಬಹುರೂಪಿ ನಾಟಕೋತ್ಸವದಲ್ಲಿ ಕೇವಲ ಮನರಂಜನೆ ಮಾತ್ರವಲ್ಲದೆ ಸಾಹಿತ್ಯ ಹಾಗೂ ಭೋಜನ ಪ್ರಿಯರಿಗೂ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ 60 ಮಳಿಗೆಗಳನ್ನು ಪ್ರತ್ಯೇಕವಾಗಿ ತೆರೆಯಲಾಗಿದೆ. ನಾಟಕ, ಜಾನಪದ ಹಾಡು ಕುಣಿತಗಳನ್ನು ನೋಡಿ ಆನಂದಿಸಿದವರಿಗೆ ಕಲಾಮಂದಿರದ ಬಿದಿರು ಮೆಳೆಯ ಸಮೀಪದಲ್ಲಿ ಬೇಕೆನಿಸುವಷ್ಟು ತಿನ್ನಲು ವಿಶೇಷ ಖಾದ್ಯಗಳನ್ನು ತಯಾರಿಸಲಾಗುವ ಕ್ಯಾಂಟಿನನ್ನು ತೆರೆಯಲಾಗಿದೆ. ಪುಸ್ತಕ, ಕಲಾಕೃತಿಗಳು, ಬಟ್ಟೆ ಅಂಗಡಿಗಳು, ಅಲಂಕಾರಿಕ ವಸ್ತುಗಳು ಹಾಗೂ ಸಾವಯವ ಪದಾರ್ಥಗಳ ಮಾರಾಟವನ್ನು ಮಾತ್ರ ರಂಗಾಯಣದ ಮುಂಭಾಗದಲ್ಲಿ ಆಯೋಜಿಸಲಾಗಿದೆ.

ನಾಟಕೋತ್ಸವದಲ್ಲಿ ಬಹುಭಾಷಾ ವಿಶೇಷ
ಬಹುರೂಪಿ ಅಂತರಾಷ್ಟ್ರೀಯ ನಾಟಕೋತ್ಸವಕ್ಕೆ ತಕ್ಕಂತೆ ಈ ಬಾರಿ ರಾಜ್ಯ ಅಂತಾರಾಜ್ಯ ಹಾಗೂ ವಿದೇಶಿ ನಾಟಕಗಳ ಸದ್ದು ಮೇಳೈಸಲಿದೆ. ಲಂಡನ್, ಬಾಂಗ್ಲಾ, ಶ್ರೀಲಂಕಾ ಹಾಗೂ ಪೋಲೆಂಡ್ ಕಲಾವಚಿದರು ಸದ್ಯ ರಂಗಾಸಕ್ತರ ಗಮನ ಸೆಳೆಯಲು ಲಗ್ಗೆ ಇಡುತ್ತಿದ್ದಾರೆ. ದೇಶದ ಕೆಲವು ರಾಜ್ಯಗಳ ಹೆಸರಾಂತ ತಂಡಗಳು ಹಾಗೂ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. ಮುಂಬೈ, ಹೈದರಾಬಾದ್, ಜಮ್ಮು ಮತ್ತು ಕಾಶ್ಮೀರ, ರಿಸ್ಸಾ, ಸಿಕ್ಕಿಂ, ತಿರುವನಂತಪುರಂ, ಪಾಟ್ನಾ, ಕೇರಳ ಅಲ್ಲದೆ ಬೆಂಗಳೂರಿನ ತಂಡಗಳು, ರಂಗಾಯಣದ ಕಲಾವಿದರ ನಾಟಕಗಳು ಈ ಬಾರಿ ವಿಶೇಷವನ್ನು ಉಣಬಡಿಲಿದೆ.

ಪ್ರತಿದಿನವೂ ವಿಶೇಷ ನಾಟಕಗಳು
ಜ.13ರ ನಾಳೆ ಚಿತ್ರಲೇಖೆ,
ಜ.14 ರಂದು ದಿ ಬಾಯ್ ಹು ಸ್ಟಾಪ್ಡ್ ಸ್ಲೈಲಿಂಗ್, ಮಧ್ಯಮ ವ್ಯಾಯೋಗಂ, ಸೆಕ್ಕುವಾ, ಹರಿಶ್ಚಂದ್ರ ಕಾವ್ಯ,
ಜ.15 ರಂದು ತುಮ್ಹಾರ ವಿನ್ಸೆಂಟ್, ಮಜ್ನು ಮ್ಯಾಡ್ ಇನ್ ಲವ್, ಅಬ್ ಔರ್ ನಹೀ, ಧಮಪುರಿಯ ದೇವದಾಸಿ,
ಜ.16 ರಂದು ಇಷ್ಕ್ ಮಲಂಗಿ, ಹರ್ ಸಿಂಗಾರ್, ಸಚ್ ಈಸ್ ಲೈಫ್
ಜ.17 ರಂದು ಘಿನುವ, ಚಂದ್ರ ಗಿರಿಯ ತೀರದಲ್ಲಿ ಅಮೀನ ಸುಂದೋರಿ,
ಜ.18 ರಂದು ರಸ್ತೆ ನಕ್ಷತ್ರಗಳು, ಚರಿತ್ರ ಪುಸ್ತಕತ್ತಿಲ್ಲೆಕ್ಕು ಒರೆಡು, ಬೀದಿಯೊಳಗಂದು ಮನೆಯ ಮಾಡಿ ಎಂಬ ನಾಟಕಗಳು ಒಂದೇ ಸೂರಿನಡಿ ಪ್ರದರ್ಶನವಾಗಲಿದೆ.

ಟಿಕೇಟ್ ಗಳಿಗಾಗಿ ಡಿಮ್ಯಾಂಡೋ ಡಿಮ್ಯಾಂಡು
ಬಹುರೂಪಿ ನಾಟಕೋತ್ಸವದ ವಿವಿಧ ಪ್ರದರ್ಶನಗಳಿಗಾಗಿ ಟಿಕೆಟ್ ಖರೀದಿಗಾಗಿ ರಂಗಾಸಕ್ತರು ಮುಗಿಬಿದ್ದಿದ್ದಾರೆ. ಅಲ್ಲದೆ ಅಂತರ್ಜಾಲದಲ್ಲಿಯೂ ರಂಗಪ್ರೇಮಿಗಳು ಟಿಕೆಟ್ ಬುಕು ಮಾಡಿಕೊಳ್ಳುತ್ತಿದ್ದಾರೆ. ಇನ್ನು ಉದ್ಘಾಟನೆಯ ದಿನವಾದ ನಾಳೆ ಪ್ರದರ್ಶನಗೊಳ್ಳಲಿರುವ ಮೈಸೂರು ರಂಗಾಯಣದ ಚಿತ್ರಲೇಖೆ ನಾಟಕದ ಟಿಕೆಟ್ಗಳು ಮೊದಲನೆಯ ದಿನವೇ ಸೋಲ್ಡ್ ಓಟ್ ಆಗಿವೆ.
ಜನವರಿ 10ರಿಂದಲೇ ಟಿಕೆಟ್ ಮಾರಾಟ ಆರಂಭವಾಗಿದೆ. ಆನ್ಲೈನಲ್ಲಿ ಮೂಲಕವೂ ಖರೀದಿಸಬಹುದಾಗಿದ್ದು, ಈಗಾಗಲೇ 6 ದಿನ ನಡೆಯುವ ನಾಟಕಗಳ ಶೇ.50ರಷ್ಟು ಮಾರಾಟವಾಗಿರುವುದು ಈ ಬಾರಿಯ ವಿಶೇಷ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications