ಬೈಲಕುಪ್ಪೆ ಪೊಲೀಸ್ ಠಾಣೆಗೆ ಆಧುನಿಕ ವಾಹನ ಕೊಡಿ
ಮೈಸೂರು, ಜುಲೈ 04 : ಏನೇ ಘಟನೆ ನಡೆದರೂ, ಸಮಸ್ಯೆ ಆದರೂ ತಕ್ಷಣಕ್ಕೆ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದರೆ ಜನರ ಆಕ್ರೋಶ ಮುಗಿಲು ಮುಟ್ಟುತ್ತದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿರುವ ಪೊಲೀಸ್ ಠಾಣೆಗಳಿಗೆ ಉತ್ತಮ ಮತ್ತು ಸಮರ್ಪಕವಾದ ಸೌಲಭ್ಯವನ್ನು ಸರ್ಕಾರ ಕಲ್ಪಿಸಬೇಕು.
ಇವತ್ತು ಹಲವು ಠಾಣೆಗಳು ಇನ್ನೂ ಹಳೆಯ ಕಾಲದ ಕಟ್ಟಡಲ್ಲೇ ಕಾರ್ಯನಿರ್ವಹಿಸುತ್ತಿವೆ. ಇಲ್ಲಿ ಮೂಲ ಸೌಲಭ್ಯವೇ ಇಲ್ಲದಾಗಿದೆ. ಸಮಾಜದ ಸಮಸ್ಯೆ ಈಡೇರಿಸುವ ಪೊಲೀಸರಿಗೆ ತಮ್ಮ ಕಚೇರಿಯಲ್ಲೇ ಸಮರ್ಪಕವಾದ ಸೌಲಭ್ಯವಿಲ್ಲದಂತಾಗಿದೆ. [ಬೆಂಗಳೂರು ಪೊಲೀಸರ ಗಸ್ತಿಗೆ ಹೈಟೆಕ್ ವಾಹನಗಳು]

ಹಲವು ಠಾಣೆಗಳ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ. ಇನ್ನು ಠಾಣೆಗಳಿಗೆ ನೀಡುವ ವಾಹನಗಳ ಸ್ಥಿತಿ ದೇವರಿಗೇ ಪ್ರೀತಿ ಎಂಬಂತಾಗಿದೆ. ಆಗಾಗ್ಗೆ ಕೈಕೊಡುವ ಓಬಿರಾಯನ ಕಾಲದ ಜೀಪುಗಳಲ್ಲಿ ಯಾವ ರೀತಿಯ ಗಸ್ತು ತಿರುಗಬಹುದು?.[ಗಸ್ತು ತಿರುಗುವ ಪಿಸಿಆರ್ ವಾಹನಗಳಿಗೆ ಇಂಧನ ಕೊರತೆ]
ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಠಾಣೆಯ ಸ್ಥಿತಿ ಇದೇ ಆಗಿದೆ. ಠಾಣೆಗೆ ನೀಡಿರುವ ವಾಹನ ಹಳೆಯದಾಗಿದ್ದು ಅದನ್ನು ನಂಬಿ ಹೋದರೆ ಕಥೆ ಮುಗಿದಂತೆ. ಯಾವಾಗ? ಎಲ್ಲಿ ಕೆಟ್ಟು ನಿಲ್ಲುತ್ತದೆ ಎಂಬುದೇ ಗೊತ್ತಾಗುವುದಿಲ್ಲ.
ಇನ್ನು ಎಲ್ಲಾದರೂ ರಾತ್ರಿ ಸಮಯದಲ್ಲಿ ಗಸ್ತಿಗೆ ಇದೇ ವಾಹನದಲ್ಲಿ ತೆರಳಿದರೆ ಅವರ ಗೋಳು ಕೇಳುವವರೇ ಇಲ್ಲದಾಗಿದೆ. ಬೈಲಕುಪ್ಪೆ ಠಾಣೆ ಇವತ್ತು ನಿರ್ಮಾಣವಾದುದಲ್ಲ. ನೆಹರು ಕಾಲದಲ್ಲಿ ಟಿಬೆಟಿಯನ್ನರ ರಕ್ಷಣೆಗಾಗಿ ಇಲ್ಲಿ ಠಾಣೆ ಸ್ಥಾಪಿಸಲಾಗಿದೆ.
ಈ ಠಾಣೆ ವ್ಯಾಪ್ತಿಗೆ ಪ್ರಸಿದ್ಧ ಗೋಲ್ಡನ್ ಟೆಂಪಲ್ ಕೂಡಾ ಒಳಪಡುತ್ತದೆ. ಇಲ್ಲಿ ಏನಾದರೊಂದು ಘಟನೆಗಳು ನಡೆಯುತ್ತಲೇ ಇರುತ್ತದೆ. ಈ ಸಂದರ್ಭ ತಕ್ಷಣ ಸ್ಥಳಕ್ಕೆ ತೆರಳಲು ಸುಸಜ್ಜಿತ ವಾಹನ ಬೇಕಾಗಿದೆ. ಈಗಿರುವ ವಾಹನದ ಬದಲಿಗೆ ಆಧುನಿಕವಾಗಿರುವ ವಾಹನವನ್ನು ಠಾಣೆಗೆ ನೀಡಬೇಕಾಗಿದೆ.
ಇನ್ನಾದರೂ ಸಂಬಂಧಿಸಿದವರು ಇತ್ತ ಗಮನಹರಿಸಿ, ಆಧುನಿಕ ವಾಹನವನ್ನು ನೀಡಿದರೆ ಪೊಲೀಸರಿಗೂ ನೆಮ್ಮದಿಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications