ಖಾಸಗೀಕರಣ ವಿರೋಧಿಸಿ ಮೈಸೂರಿನಲ್ಲಿ ಬಿಇಎಂಎಲ್ ಕಾರ್ಮಿಕರ ತಮಟೆ ಚಳವಳಿ
ಮೈಸೂರು, ಅಕ್ಟೋಬರ್ 15: ಖಾಸಗೀಕರಣವನ್ನು ವಿರೋಧಿಸಿ ಸರ್ಕಾರಿ ಸ್ವಾಮ್ಯದ ಬಿಇಎಂಎಲ್ ಕಾರ್ಖಾನೆಯ ಕಾರ್ಮಿಕರು ಇಂದು ಮೈಸೂರಿನಲ್ಲಿ ತಮಟೆ ಚಳವಳಿ ನಡೆಸಿದರು. ಕಾರ್ಮಿಕರು ನಿನ್ನೆಯಿಂದ ಪ್ರತಿಭಟನೆ ಪ್ರಾರಂಭಿಸಿದ್ದು, ತಮ್ಮ ಕೂಗು ಕೇಂದ್ರಕ್ಕೆ ಮುಟ್ಟುವ ತನಕ ವಿವಿಧ ರೀತಿಯ ಚಳವಳಿ ನಡೆಸುವುದಾಗಿ ತಿಳಿಸಿದ್ದಾರೆ.
ತಮಟೆ ಆಂದೋಲನ, ಒಂದು ವಾರ ಧರಣಿ, ಬೈಕ್ rally, ಮೇಣದಬತ್ತಿ ಮೆರವಣಿಗೆ, ಮಾನವ ಸರಪಳಿ ಹೀಗೆ ವಿವಿಧ ಹಂತದಲ್ಲಿ ಹೋರಾಟ ನಡೆಸಲು ತೀರ್ಮಾನಿಸಿರುವ ಬಿಇಎಂಎಲ್ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ಕಾರ್ಮಿಕರು ಇದರ ಅಂಗವಾಗಿ ಇಂದು ಬೆಳವಾಡಿಯಲ್ಲಿರುವ ಕಾರ್ಖಾನೆಯ ಎದುರು ತಮಟೆ ಚಳವಳಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು, "ಖಾಸಗಿಯವರಿಗೆ ಈ ಉದ್ಯಮದ ಶೇ.26ರಷ್ಟು ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿತ್ತು. ಆದರೀಗ ಸರ್ಕಾರದ ಬಳಿ ಇರುವ ಎಲ್ಲ ಶೇ.54ರಷ್ಟು ಷೇರುಗಳನ್ನೂ ಮಾರಾಟ ಮಾಡಲು ಮುಂದಾಗಿದೆ. ಇಡೀ ಸಂಸ್ಥೆಯನ್ನು ಖಾಸಗಿಯವರಿಗೆ ವಹಿಸಲು ಹುನ್ನಾರ ನಡೆಸಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದ ಬಿಇಎಂಎಲ್ ಮೈಸೂರು ಸೇರಿ ಬೆಂಗಳೂರು, ಕೆಜಿಎಫ್, ಪಾಲಕ್ಕಾಡ್ ನಲ್ಲಿ ಉತ್ಪಾದನಾ ಘಟಕ ಹೊಂದಿದೆ. 4 ಪ್ರಾದೇಶಿಕ, 20 ಸೇವಾ ಕಚೇರಿ ಹೊಂದಿರುವ ಬೃಹತ್ ಸಂಸ್ಥೆಯಾಗಿದ್ದು, ಇಲ್ಲಿ ರೈಲು, ಮೆಟ್ರೋ ರೈಲಿನ ಬಿಡಿಭಾಗಗಳನ್ನು ತಯಾರಿಸಲಾಗುತ್ತದೆ. ರಕ್ಷಣಾ ಇಲಾಖೆಗೆ ಬೇಕಾದ ಟೆಟ್ರಾ ಟ್ರಕ್ಕುಗಳು, ಸರ್ವೋತ್ತರ ಬ್ರಿಡ್ಜ್, ಮಿಸೈಲ್ ಲಾಂಚರ್, ಬುಲ್ಡೋಜರ್, ಯುದ್ಧಕ್ಕೆ ಸಂಬಂಧಿಸಿದ ವಾಹನಗಳನ್ನು ಸರಬರಾಜು ಮಾಡುವ ದೇಶದ ಏಕೈಕ ಸಂಸ್ಥೆಯಾಗಿದೆ. ಗಣಿಗಾರಿಕೆ ಮತ್ತು ನಿರ್ಮಾಣ ಕ್ಷೇತ್ರ, ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದ ಯಂತ್ರಗಳನ್ನೂ ಇಲ್ಲಿ ತಯಾರಿಸಲಾಗುತ್ತಿದೆ. ಇದು ಏಷ್ಯಾದಲ್ಲೇ ಅತಿ ದೊಡ್ಡ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವಾಗಿದೆ. ವಾರ್ಷಿಕವಾಗಿ ಸುಮಾರು 3,500 ಕೋಟಿ ರೂ.ಗಿಂತಲೂ ಮಿಗಿಲಾದ ವಹಿವಾಟು ನಡೆಯುತ್ತಿದೆ. 1964ರಿಂದ ಈವರೆಗೂ ಲಾಭ ಗಳಿಸುತ್ತಿದ್ದು, ಇಂತಹ ಸಂಸ್ಥೆಯನ್ನು ಖಾಸಗೀಕರಣ ಮಾಡುತ್ತಿರುವುದು ಖಂಡನೀಯ ಎಂದು ಕಾರ್ಮಿಕರು ಕಿಡಿಕಾರಿದರು.
ದೇಶದ ಸಂಪತ್ತಾಗಿರುವ ಈ ಸಂಸ್ಥೆಯನ್ನು ಬಹಳ ಕಡಿಮೆ ಮೊತ್ತಕ್ಕೆ ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ಸಂಸ್ಥೆಯ 8,500 ಕಾಯಂ ಉದ್ಯೋಗಿಗಳು, 4500 ಗುತ್ತಿಗೆ ಕಾರ್ಮಿಕರ ಕೆಲಸಕ್ಕೆ ಅಭದ್ರತೆ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications