Bengaluru-Mysuru Expressway: ₹1,200 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಲಿರುವ ಗಡ್ಕರಿ-ಮಾಹಿತಿ, ವಿವರ
ಮೈಸೂರು, ಮಾರ್ಚ್, 08: ಈಗಾಗಲೇ ರಾಜ್ಯದಲ್ಲಿ ಹಲವೆಡೆ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಲಿವೆ. ಹಾಗೆಯೇ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಾರ್ಚ್ 10ರಂದು ಮೈಸೂರಿಗೆ ಆಗಮಿಸಲಿದ್ದು, ಈ ವೇಳೆ ಅವರು ಮಹಾರಾಜ ಕಾಲೇಜು ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಅವರು ಮಾಹಿತಿ ನೀಡಿದ್ದಾರೆ. ಹಾಗಾದರೆ ಎಷ್ಟು ಕೋಟಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿಯಲ್ಲಿ ಪ್ರಮುಖ ನಗರಗಳಿಗೆ 1,200 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ನಿರ್ಮಾಣ ಮಾಡುವ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮೈಸೂರು-ಕುಶಾಲನಗರ ಚುತುಷ್ಪಥ ನಿರ್ಮಾಣ ಕಾಮಗಾರಿಗೂ ಭೂಮಿಪೂಜೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ನಗರದ ಕ್ರಾಫರ್ಡ್ ಪಕ್ಕದಲ್ಲಿರುವ ಲೆವೆಲ್ ಕ್ರಾಸಿಂಗ್ 1 ಹಾಗೂ ರಾಯಲ್ ಇನ್ ಬಳಿಯ ಲೆವೆಲ್ ಕ್ರಾಸಿಂಗ್ 5ರಲ್ಲಿ ರೈಲು ಸೇತುವೆಗಳ ನಿರ್ಮಾಣ, ಮೈಸೂರು ರಿಂಗ್ ರಸ್ತೆಯಲ್ಲಿ ಏಳು ಕಡೆ ಗ್ರೇಡ್ ಸಪರೇಟರ್ಗಳ ನಿರ್ಮಾಣ, ವಿವಿಧ ರಸ್ತೆಗಳಲ್ಲಿನ ಅಪಘಾತ ವಲಯಗಳ ದುರಸ್ತಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಮೈಸೂರು-ನಂಜನಗೂಡು ರಸ್ತೆಯನ್ನು ಆರು ಪಥಗಳನ್ನಾಗಿ ನಿರ್ಮಿಸುವ ಯೋಜನೆಯನ್ನು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ತಿಳಸಿದರು.
ಒಟ್ಟಿನಲ್ಲಿ ನಿತಿನ್ ಗಡ್ಕರಿ ಅವರು ಈಗಾಗಲೇ ದೇಶದ ಹಲವೆಡೆ ದೊಡ್ಡ ದೊಡ್ಡ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ಧಾರೆ. ಮತ್ತೊಂದೆಡೆ ನಿರ್ಮಾಣವಾದ ಹೆದ್ದಾರಿಗಳ ಉದ್ಘಾಟನೆಯನ್ನು ಕೂಡ ನೆರವೇರಿಸಿದ್ದಾರೆ. ಅದರಲ್ಲೂ ಕರ್ನಾಟಕದಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ನಿರ್ಮಾಣವಾದಗಲೂ ಕೂಡ ಭೇಟಿ ನೀಡಿ ಉದ್ಘಾಟನೆ ಮಾಡಿದ್ದರು. ಇದೀಗ ಮತ್ತೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಬರಲಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಎಲ್ಲಾ ಪಕ್ಷಗಳ ನಾಯಕರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹಾಗೆಯೇ ಇದೀಗ ಹಲವು ಯೋಜನೆಗಳ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನಗಳು ಕೂಡ ನಡೆಯುತ್ತಿವೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications