'ಯಾತ್ರೆಯನ್ನು ತಡೆಯಲು ಯಾವುದರಿಂದಲೂ ಸಾಧ್ಯವಿಲ್ಲ'; ಮಳೆ ನಡುವೆ ರಾಹುಲ್ ಭಾಷಣ
ಮೈಸೂರು, ಅ.03: ರಾಜ್ಯದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಭಾನುವಾರ ಭಾರೀ ಮಳೆಯ ನಡುವೆಯೂ ನಡೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಳೆಯ ನಡುವೆಯೇ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.
"ಬಿಜೆಪಿ-ಆರ್ಎಸ್ಎಸ್ ಹರಡುವ ದ್ವೇಷ ಮತ್ತು ಹಿಂಸಾಚಾರವನ್ನು ತಡೆಯುವ ಉದ್ದೇಶದಿಂದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ತಡೆಯಲು ಯಾವುದರಿಂದಲೂ ಸಾಧ್ಯವಿಲ್ಲ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತವನ್ನು ಒಗ್ಗೂಡಿಸಲು ಎದೆಗುಂದದೆ ಮುನ್ನುಗುತ್ತಿರುವ ರಾಹುಲ್ ಗಾಂಧಿಯವರ
— Karnataka Congress (@INCKarnataka) October 2, 2022
ಈ ಪರಿಶ್ರಮ,
ಈ ಸದೃಡ ಸಂಕಲ್ಪ,
ಈ ಸರಿಸಾಟಿಯಿಲ್ಲದ ಇಚ್ಛಾಶಕ್ತಿ
ನಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ,
ದ್ವೇಷ ಮುಕ್ತ ಸಮಾಜಕ್ಕಾಗಿ &
ಜನರಿಂದ, ಜನರಿಗಾಗಿ ಹಾಗೂ ಜನರಿಗೋಸ್ಕರ ಮಾತ್ರವೇ.
ಇದು ಜನಪರ ಕಾಳಜಿಯ ರಾಜಕಾರಣದ ಅತ್ಯದ್ಭುತ ಅಧ್ಯಾಯ.#BharatJodoYatra pic.twitter.com/SALhdWVa4T
ಭಾನುವಾರದ ಪಾದಯಾತ್ರೆ ಬಳಿಕ ರಾಹುಲ್ ಗಾಂಧಿ ಸಾರ್ವಜನಿಕ ಸಭೆಗೆ ಆಗಮಿಸಿದ ತಕ್ಷಣ, ತುಂತುರು ಮಳೆ ಪ್ರಾರಂಭವಾಯಿತು. ಆದರೆ, ರಾಹುಲ್ ಗಾಂಧಿ ತಮ್ಮ ಭಾಷಣವನ್ನು ಮುಂದುವರಿಸಲು ನಿರ್ಧರಿಸಿದ್ದರು.

"ಈ ಯಾತ್ರೆಯು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮುಂದುವರಿಯುತ್ತದೆ. ಇದು ನಿಲ್ಲುವುದಿಲ್ಲ, ನೀವು ನೋಡುತ್ತಿರುವಂತೆ ಮಳೆಯಾಗುತ್ತಿದೆ, ಆದರೆ, ಮಳೆಯು ಕೂಡ ಈ ಯಾತ್ರೆಯನ್ನು ನಿಲ್ಲಿಸಿಲ್ಲ" ಎಂದು ಹೇಳಿದ್ದಾರೆ.
"ಬಿಸಿಲು, ಚಂಡಮಾರುತ ಅಥವಾ ಚಳಿ ಈ ಯಾತ್ರೆಯನ್ನು ತಡೆಯಲು ಸಾಧ್ಯವಿಲ್ಲ. ಈ ನದಿಯಂತಹ ಯಾತ್ರೆಯು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸಾಗುತ್ತದೆ ಮತ್ತು ಈ ನದಿಯಲ್ಲಿ ನೀವು ದ್ವೇಷ ಅಥವಾ ಹಿಂಸೆಯಂತಹ ವಿಷಯಗಳನ್ನು ನೋಡುವುದಿಲ್ಲ. ಇದು ಭಾರತದ್ದಾಗಿರುವುದರಿಂದ ಅದರ ಇತಿಹಾಸ ಮತ್ತು DNA ಹೇಳುವಂತೆ ಪ್ರೀತಿ ಮತ್ತು ಸಹೋದರತ್ವ ಮಾತ್ರ ಇರುತ್ತದೆ" ಎಂದು ತಿಳಿಸಿದ್ದಾರೆ.
ಬಿಜೆಪಿ ಯಾವುದೇ ದ್ವೇಷ ಮತ್ತು ಹಿಂಸಾಚಾರವನ್ನು ಹರಡಲಿ, ಈ ಯಾತ್ರೆ ಅದನ್ನು ನಿಲ್ಲಿಸುತ್ತದೆ ಮತ್ತು ಜನರನ್ನು ಒಗ್ಗೂಡಿಸಲು ಸಹಾಯ ಮಾಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ವೇಳೆ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಜ್ಯದ ಭ್ರಷ್ಟಾಚಾರದ ಬಗ್ಗೆ ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಮತ್ತು ರಣದೀಪ್ ಸುರ್ಜೆವಾಲಾ ಸೇರಿದಂತೆ ಪಕ್ಷದ ಹಲವಾರು ನಾಯಕರು ರಾಹುಲ್ ಗಾಂಧಿಯವರ ಭಾಷಣವನ್ನು ಟ್ವೀಟ್ ಮಾಡಿದ್ದಾರೆ. ಅವರು ಮಳೆಯಿಂದ ವಿಚಲಿತರಾಗಲಿಲ್ಲ ಮತ್ತು ದೇಶಕ್ಕಾಗಿ ಹೋರಾಡುವ ತಮ್ಮ ದೃಢ ಸಂಕಲ್ಪವನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, "ಭಾರತವನ್ನು ಒಗ್ಗೂಡಿಸಲು ಎದೆಗುಂದದೆ ಮುನ್ನುಗುತ್ತಿರುವ ರಾಹುಲ್ ಗಾಂಧಿಯವರ ಈ ಪರಿಶ್ರಮ, ಈ ಸದೃಡ ಸಂಕಲ್ಪ, ಈ ಸರಿಸಾಟಿಯಿಲ್ಲದ ಇಚ್ಛಾಶಕ್ತಿ, ನಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ, ದ್ವೇಷ ಮುಕ್ತ ಸಮಾಜಕ್ಕಾಗಿ & ಜನರಿಂದ, ಜನರಿಗಾಗಿ ಹಾಗೂ ಜನರಿಗೋಸ್ಕರ ಮಾತ್ರವೇ. ಇದು ಜನಪರ ಕಾಳಜಿಯ ರಾಜಕಾರಣದ ಅತ್ಯದ್ಭುತ ಅಧ್ಯಾಯ" ಎಂದಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral











Click it and Unblock the Notifications