ಕಣಜ ವೆಬ್ ಸೈಟ್ ನಿಂದ ಹೊಸ ಮಾಸ್ಟರ್ ಪ್ಲಾನ್ ಗೆ ಸಹಿ
ಮೈಸೂರು, ಏಪ್ರಿಲ್ 24 : ಇನ್ಮುಂದೆ ಕೇಂದ್ರ ಸರ್ಕಾರದ ಮಾರ್ಗದರ್ಶನದಲ್ಲಿ ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಸ್ಥಾನ ಹಾಗೂ ಕಣಜ ಅಂತರ್ಜಾಲ ಕನ್ನಡ ಜ್ಞಾನಕೋಶ ನೂತನ ಒಡಂಬಡಿಕೆ ಮೂಲಕ ಭಾರತವಾಣಿ ಎಂಬ ಯೋಜನೆ ಜಾರಿಗೆ ತಂದು ಕನ್ನಡದ ಘಮಲನ್ನು ಮತ್ತಷ್ಟು ವಿಸ್ತರಿಸಲಿದೆ.
ಹೌದು, ಕನ್ನಡವನ್ನು ತಾಂತ್ರಿಕವಾಗಿ ಅಭಿವೃದ್ಧಿಗೊಳಿಸಿ, ಏಕರೂಪದ ಉದ್ದೇಶ ಮತ್ತು ಕಾರ್ಯಚಟುವಟಿಕೆಯನ್ನು ತಪ್ಪಿಸುವ ಸಲುವಾಗಿ ಕಣಜ ಅಂತರ್ಜಾಲ ಕನ್ನಡ ಜ್ಞಾನಕೋಶ ಮತ್ತು ಭಾರತವಾಣಿ ಸಹಯೋಗದಲ್ಲಿ ಹೊಸ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ರಂಗಾಯಣ ನಿರ್ದೇಶಕ ದಯಾನಂದ್ ತಿಳಿಸಿದ್ದಾರೆ.

ಈ ಹಿಂದೆ ಕನ್ನಡ ಮಾಹಿತಿಯನ್ನು ಹುಡುಕಬೇಕಾದರೆ ಅನೇಕ ಜಾಲತಾಣಗಳನ್ನು ಜಾಲಾಡಬೇಕಿತ್ತು. ಕಣಜ ಪೋರ್ಟಲ್ ನಲ್ಲಿದ್ದ ಮಾಹಿತಿ ಭಾರತವಾಣಿಯಲ್ಲಿ ಸಿಗುತ್ತಿರಲಿಲ್ಲ.
ಅಂತಹ ವೇಳೆಯಲ್ಲಿ ಒಂದೇ ವಿಷಯದ ಮೇಲೆ ಎರಡು ಜ್ಞಾನಕೋಶಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಮಾಹಿತಿ ನೀಡಲು ಕಷ್ಟವಾಗುತ್ತಿತ್ತು. ಅಲ್ಲದೇ ಇದರಿಂದ ಸಮಯ, ಹಣ ಹಾಗೂ ಕೆಲಸಗಳಿಗೆ ಅಡಚಣೆ ಉಂಟಾಗುತ್ತಿತ್ತು.
ಇದನ್ನು ತಪ್ಪಿಸಿ ಓದುಗರಿಗೆ ಒಂದೇ ವೇದಿಕೆ ಸಿಗಲಿ ಎಂಬ ಉದ್ದೇಶದಿಂದ ಕಣಜ ಹಾಗೂ ಭಾರತವಾಣಿಯಲ್ಲಿ ಕನ್ನಡದ ಭರಪೂರ ಮಾಹಿತಿಗಳು ಸಿಗುವಂತೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ,ಕರ್ನಾಟಕ ಜನಪದ ವಿಶ್ವವಿದ್ಯಾನಿಲಯ, ಕರ್ನಾಟಕ ಕೊಂಕಣಿ, ಕರ್ನಾಟಕ ಸಂಸ್ಕೃತ ವಿವಿ, ಮೈಸೂರು ವಿವಿ, ಗುಲ್ಬರ್ಗಾ ವಿವಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಪುಸ್ತಕ ಪ್ರಾಧಿಕಾರ ಸೇರಿದಂತೆ ಒಟ್ಟು 11 ವಿವಿಧ ಸಂಸ್ಥೆಗಳು ಯೋಜನೆಗೆ ಸಾಥ್ ನೀಡಿವೆ.
ಈ ಒಡಂಬಡಿಕೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ದಯಾನಂದ್ ಹಾಗೂ ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕ ಪ್ರೊ. ಡಿ.ಜಿ.ರಾವ್ ಸಹಿ ಹಾಕಿದರು. ಕನ್ನಡದ ಮತ್ತಷ್ಟು ಮಾಹಿತಿ ನೀಡಲು ಕಣಜದೊಂದಿಗೆ kannada.bharatavani.in ಈ ವೈಬ್ ಸೈಟಿಗೆ ಭೇಟಿ ನೀಡಬಹುದಾಗಿದೆ.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications