Bhavani Revanna: ಸಾಮಾನ್ಯ ವ್ಯಕ್ತಿಗೆ ತೀರಾ ಕೀಳುಮಟ್ಟದ ಪದಗಳಿಂದ ನಿಂದಿಸಿದ ಭವಾನಿ ರೇವಣ್ಣ, ವಿಡಿಯೋ ವೈರಲ್
ಮೈಸೂರು, ಡಿಸೆಂಬರ್, 04: ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿಯಾಗಿದ್ದು, ಈ ವೇಳೆ ಭವಾನಿ ರೇವಣ್ಣ ಬೈಕ್ ಸವಾರನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದ ಬಳಿ ನಡೆದಿದೆ.
ಬೈಕ್ ಸವಾರ ಶಿವಣ್ಣ ಎಂಬಾತ ಭವಾನಿ ರೇವಣ್ಣ ಅವರ KA-03-NK-5 ನಂಬರ್ನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ರೋಷವೇಷಗೊಂಡ ಭವಾನಿ ರೇವಣ್ಣ ಅವರು, ಬೋರ್ಡು ಗೀರ್ಡು ಏನು ಎಲ್ಲಾ ಡ್ಯಾಮೇಜ್ ಆಗಿದೆ. ಎಲ್ಲಿಗೆ ನುಗ್ಗುಸ್ತಿಯಾ ಮಧ್ಯದಲ್ಲಿ, ತೆಗೆದು ಸುಟ್ಟು ಹಾಕ್ರೋ ಈ ಬೇವರ್ಸಿ ಸೂಳೆಮಗನ ಗಾಡಿನಾ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಭವಾನಿ ರೇವಣ್ಣ ಸಾಲಿಗ್ರಾಮದಿಂದ ಹೊಳೆನರಸೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ರಾಂಪುರ ಗ್ರಾಮದ ಗೇಟ್ನಲ್ಲಿ ಈ ಘಟನೆ ನಡೆಸಿದೆ. ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ, ರೆಡಿ ಮಾಡಿಸುವುದು ಹೇಗೆ? ಎಂದು ಕೇಳುವ ಮೂಲಕ ಅವಾಜ್ ಹಾಕಿದ್ದಾರೆ.
ಇದೇ ವೇಳೆ ಮಧ್ಯಪ್ರವೇಶಿಸಿದ ಸ್ಥಳೀಯರನ್ನು 1.50 ಕೋಟಿ ಕಾರ್ ಇದು, 50 ಲಕ್ಷ ರೂಪಾಯಿ ರಿಪೇರಿ ಮಾಡಿಸೋದಕ್ಕೇ ಕೊಡ್ತೀರಾ? ಹಣ ಕೊಡಂಗಿದ್ರೆ ನ್ಯಾಯದ ಬಗ್ಗೆ ಮಾತನಾಡುವುದಕ್ಕೆ ಬನ್ನಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಬೈಕ್ ಸವಾರನ ಮೊಬೈಲ್ ಫೋನ್ ಕಸಿದುಕೊಂಡು, ಗಾಡಿ ಸೀಜ್ ಮಾಡು. ಸಾಲಿಗ್ರಾಮ ಎಸ್ಐ ಬರೋಕೆ ಹೇಳಿ ಎಂದು ಸಹಾಯಕರಿಗೆ ತಿಳಿಸಿರುವ ವಿಡಿಯಯೋ ಭಾರೀ ವೈರಲ್ ಆಗಿದೆ.
ಸವಾರ ಹಾಗೂ ಜೊತೆಗಿದ್ದವರನ್ನು ಕಾರ್ ಹಾಗೂ ದ್ವಿಚಕ್ರವಾಹನದ ಬಳಿ ನಿಲ್ಲಿಸಿ ತಮ್ಮ ಮೊಬೈಲ್ ಫೋನ್ನಲ್ಲಿ ಫೋಟೋ ತೆಗೆದುಕೊಂಡಿದ್ದಾರೆ. ಇನ್ನು ಸಿಪಿಐ ಜಿ.ಕೃಷ್ಣರಾಜು ಸ್ಥಳಕ್ಕೆ ಭೇಟಿ ನೀಡಿದ್ದು, ಈ ವೇಳೆ ಬೈಕ್ ಸವಾರ ತಂದ್ರೆಕೊಪ್ಪಲು ಗ್ರಾಮದ ಶಿವಣ್ಣ ಅವರ ವಿರುದ್ಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications