ಈ ಬಾರಿ ಮೈಸೂರು ದಸರಾ ಅಂಬಾರಿ 'ಭೀಮ'ನ ಹೆಗಲಿಗೆ?
ಮೈಸೂರು, ಆಗಸ್ಟ್ 8 : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಇದೇ ಮೊದಲ ಬಾರಿಗೆ ಆಗಮಿಸುತ್ತಿರುವ 17 ವರುಷದ ಆನೆ ಭೀಮನಿಗೆ ಅಂಬಾರಿ ತರಬೇತಿ ನೀಡಲು ತೀರ್ಮಾನಿಸಲಾಗಿದೆ.
ಮುಂದಿನ ವರುಷಗಳಲ್ಲಿ ಜಂಬೂ ಸವಾರಿಯಲ್ಲಿ 750 ಕೆ ಜಿ ತೂಕದ ಚಿನ್ನದ ಸಾಮರ್ಥ್ಯ ಭೀಮನಿಗೆ ಇರುವುದರಿಂದ ಅರಣ್ಯ ಲಾಖೆ ಈತನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ದಸರಾ ವೇಳೆ ಪ್ರತಿ ವರುಷ 12 ಆನೆಗಳನ್ನು ಮಾತ್ರ ವಿವಿಧ ಆನೆ ಶಿಬಿರಗಳಿಂದ ಕರೆತರಲಾಗುತ್ತಿತ್ತು. ಆದರೆ ಈ ಬಾರಿ ಹೆಚ್ಚುವರಿಯಾಗಿ 3 ಆನೆಗಳನ್ನುಕರೆತರಲಾಗುತ್ತಿದೆ. ಸೆಪ್ಟಂಬರ್ 21 ರಿಂದ 30ರವರಗೆ ನಡೆಯುವ ವಿಶ್ವ ವಿಖ್ಯಾತ ನಾಡಹಬ್ಬದಲ್ಲಿ ಈ ಅಂಬಾರಿಯೇ ಆಕರ್ಷಕವಾಗಿದ್ದಾಗಿದೆ.

ಮುಂದಿನ 10 ರಿಂದ 15 ವರುಷದ ಅವಧಿಯಲ್ಲಿ ಅಂಬಾರಿ ಹೊರುವ ಆನೆಯನ್ನು ಸಜ್ಜುಗೊಳಿಸುವ ಮುಂದಾಲೋಕಚೆಯಲ್ಲಿರುವ ಅರಣ್ಯ ಲಾಖೆ ಅಧಿಕಾರಿಗಳು ನಾಗರಹೊಳೆ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ಮತ್ತಿಗೆ ಗೂಡು ಆನೆ ಶಿಬಿರಲ್ಲಿ ಪಳಗಿರುವ 17 ವರುಷದ ಭೀಮನಿಗೆ ತರಬೇತಿ ನೀಡಲು ಸಮ್ಮತಿಸಿದ್ದಾರೆ. ಆತನ ಸಾಮರ್ಥ್ಯವನ್ನು ಕಂಡು ಅರಣ್ಯಾಧಿಕಾರಿಗಳೇ ಮೂಕ ವಿಸ್ಮಿತರಾಗಿದ್ದಾರೆ.
ಯಾರಿದು ಭೀಮ..?
ನಾಗರಹೊಳೆ ಅಭಯಾರಣ್ಯದ ಮತ್ತಿಗೆ ಗೂಡು ವಲಯದ ಭೀಮನಕಟ್ಟೆ ಎಂಬಲ್ಲಿ 2002ರಲ್ಲಿ ತಾಯಿಯಿಂದ ಬೇರ್ಪಟ್ಟು ಎರಡು ವರುಷದ ಗಂಡಾನೆ ಮರಿ ಕಂಗೆಟ್ಟು ರೋದಿಸುತ್ತಿತ್ತು. ಮರಿಯನ್ನು ಅದರ ತಾಯಿ ಆನೆ ಕರೆದೊಯ್ಯಬಹುದೆಂದು ಅರಣ್ಯ ಸಿಬ್ಬಂದಿ ನಿರೀಕ್ಷಿಸಿದ್ದರು. ಆದರೆ, 2 ದಿನವಾದರೂ ತಾಯಿ ಆನೆ ಮರಿಯನ್ನು ಕರೆದೊಯ್ಯದ ಕಾರಣ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಗಂಡಾನೆ ಮರಿಯನ್ನು ಮತ್ತಿಗೆ ಗೂಡು ಕ್ಯಾಂಪ್ ಗೆ ಕರೆತಂದು ಬಾಟಲಿಯಲ್ಲಿ ಹಾಲುಣಿಸಿ ಪೋಷಿಸಿ ಭೀಮ ಎಂದು ಹೆಸರಿಟ್ಟು ಸಾಕಲಾಯಿತು.

ಈ ಆನೆಗೆ ಇದೀಗ 17 ವರುಷ. ಆನೆ ಶಿಬಿರದಲ್ಲಿದ್ದ ದಸರಾ ಆನೆಗಳು ಸೇರಿದಂತೆ ವಿವಿಧ ಸಾಕಾನೆಗಳ ಸಖ್ಯದಲ್ಲಿ ಬೆಳೆದ ಭೀಮ ಮಾವುತ ರಾಧಾಕೃಷ್ಣನ ಗರಡಿಯಲ್ಲಿ ಪರಿಪೂರ್ಣವಾಗಿ ಪಳಗಿದ್ದು, ಮಾವುತನ ಆಜ್ಞೆಯನ್ನು ಚಾಚೂ ತಪ್ಪದೆ ಪಾಲಿಸುವ ಮೂಲಕ ಭರವಸೆ ಆನೆಯಾಗಿ ಹೊರಹೊಮ್ಮಿದ್ದಾನೆ.
ಭೀಮ 17 ವರುಷದಲ್ಲಿ ಹಲವು ಖೆಡ್ಡಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಸೈ ಎನಿಸಿಕೊಂಡಿದೆ. ಕಾಡಿನಿಂದ ನಾಡಿಗೆ ಬಂದು ಪುಂಡಾಟ ಮೆರೆಯುತ್ತಿದ್ದ ಕಡಾನೆಗಳನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಅಭಿಮನ್ಯು, ಪ್ರಶಾಂತ, ಹರ್ಷ ಆನೆಯೊಂದಿಗೆ ಮುಂಚೂಣಿಯಲ್ಲಿ ಪಾಲ್ಗೊಂಡಿದ್ದ ಭೀಮ ಅರಣ್ಯಇಲಾಖೆಗೆ ಆಸ್ತಿಯಂತಾಗಿದ್ದಾನೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications