ಹೆಲ್ಮೆಟ್ ಧರಿಸದೇ ದ್ವಿಚಕ್ರ ಚಾಲನೆ: ದಂಡದ ಜೊತೆಗೆ ಚಾಲನಾ ಪರವಾನಗಿ ರದ್ದು
ಮೈಸೂರು, ಅಕ್ಟೋಬರ್ 30: ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ ಮಾಡಿದ 13 ಮಂದಿಯ ವಿರುದ್ಧ ಮೈಸೂರಿನ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದು, ಅವರುಗಳ ವಾಹನ ಚಾಲನಾ ಪರವಾನಗಿ ಮೂರು ತಿಂಗಳ ಕಾಲ ಅಮಾನತ್ತಾಗಲಿದೆ.
ಹೆಲ್ಮೆಟ್ ಇಲ್ಲದೆ ವಾಹನ ಓಡಿಸಿದರೆ ಇಷ್ಟು ದಿನ ದಂಡ ಕಟ್ಟಬೇಕಿತ್ತು. ಆದರೆ, ಸರ್ಕಾರದ ಆದೇಶದಂತೆ ಮೂರು ತಿಂಗಳ ಅವಧಿಗೆ ಸವಾರರ ಚಾಲನಾ ಪರವಾನಗಿ ಅಮಾನತ್ತಾಗಲಿದೆ. ಸದ್ಯಕ್ಕೆ ಈ ನಿಯಮ ಬೆಂಗಳೂರು, ಮೈಸೂರು ಹಾಗೂ ಪ್ರಮುಖ ನಗರಗಳಲ್ಲಿ ಜಾರಿಗೆ ಬಂದಿದೆ.
ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಪ್ರಕಾರ ಬೈಕ್ ಓಡಿಸುವವರು, ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಆದರೆ, ಈ ನಿಯಮವನ್ನು ಜನರು ಉಲ್ಲಂಘನೆ ಮಾಡುತ್ತಿದ್ದಾರೆ. ಪೊಲೀಸರಿಗೆ ಹೆದರದವರು ಸಾಕಷ್ಟು ಮಂದಿ ಇದ್ದಾರೆ. ಇದನ್ನು ಮನಗಂಡ ಸರ್ಕಾರ ಇನ್ನು ಮುಂದೆ ಹೆಲ್ಮೆಟ್ ಧರಿಸದಿದ್ದರೆ ದಂಡ ಹಾಕುವುದು ಮಾತ್ರವಲ್ಲದೆ, ಚಾಲನಾ ಪರವಾನಗಿಯನ್ನು 3 ತಿಂಗಳ ಕಾಲ ರದ್ದುಗೊಳಿಸಿ ಎಂದು ಎಲ್ಲಾ ಆರ್ಟಿಓ ಕಚೇರಿಗಳಿಗೆ ಸೂಚನೆ ನೀಡಿತ್ತು.

ನಿಯಮ ಜಾರಿಗೆ ಬಂದಾಗಿನಿಂದ ನಗರದಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳು ಪ್ರತೀ ದಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸುವುದರ ಜೊತೆಗೆ ಹೆಲ್ಮೆಟ್ ಧರಿಸದ ಹೆಚ್ಚು ಪ್ರಕರಣಗಳು ದಾಖಲಾಗಿರುವವರ ವಿರುದ್ಧ ಪ್ರಕರಣ ದಾಖಲಿಸುವ ಕೆಲಸದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ.
ಇಷ್ಟು ದಿನ ಹೆಲ್ಮೆಟ್ ಧರಿಸದ ಸವಾರರ ವಿರುದ್ಧ ಪೊಲೀಸರು ಸಮರ ಸಾರುತ್ತಿದ್ದರು. ಆದರೀಗ ಸಾರಿಗೆ ಇಲಾಖೆ ಅಧಿಕಾರಿಗಳು ಕೂಡ ಪೊಲಿಸರೊಂದಿಗೆ ಕೈ ಜೋಡಿಸಿದ್ದಾರೆ. ನಿಯಮ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೆ ವಾಹನ ಸವಾರರ ತಪಾಸಣೆ ನಡೆಸುತ್ತಿರುವ ಸಾರಿಗೆ ಅಧಿಕಾರಿಗಳು 13 ಸವಾರರ ವಿರುದ್ಧ ಪ್ರಕರಣ ದಾಖಲಿಸಿ ಅವರುಗಳ ಚಾಲನಾ ಪರವಾನಗಿಯನ್ನು 3 ತಿಂಗಳು ಅವಾನತ್ತುಗೊಳಿಸಲು ಕ್ರಮ ಕೈಗೊಂಡಿದ್ದಾರೆ.

ಪೊಲೀಸ್ ಇಲಾಖೆ ಅಧಿಕಾರಿಗಳು ಕೂಡ ಪ್ರತಿ ದಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರದ ಸಂಚಾರ ಪೊಲೀಸರು ನಗರದ ಪ್ರಮುಖ ವೃತ್ತ, ಬಡಾವಣೆಗಳಲ್ಲಿ ವಾಹನ ತಪಾಸಣೆ ನಡೆಸುವ ಮೂಲಕ ಹೆಲ್ಮೆಟ್ ಧರಿಸದ ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದಸರಾ ಕಾರಣದಿಂದ ಸರ್ಕಾರದ ಆದೇಶ ಪಾಲನೆ ಸಾಧ್ಯವಾಗಿರಲಿಲ್ಲ.
ಹೆಲ್ಮೆಟ್ ರಹಿತ ವಾಹನ ಚಾಲನೆಗೆ ಚಲನಾ ಪರವಾನಗಿ ಅಮಾನತ್ತು ಮಾತ್ರ ಶಿಕ್ಷೆಯಲ್ಲ. ಜೊತೆಗೆ ಸರ್ಕಾರ ವಿಧಿಸಿರುವ ದಂಡವನ್ನು ಪಾವತಿಸಬೇಕು. ಹೀಗಾಗಿ ಸಾರಿಗೆ ಇಲಾಖೆ ವಾಹನ ಸವಾರರಿಂದ 7 ಸಾವಿರ ರೂ. ದಂಡ ವಸೂಲು ಮಾಡಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications