ವಲಸೆ ಹಕ್ಕಿಗಳು ಹೋಗುವವರೆಗೆ ಕುಕ್ಕರಹಳ್ಳಿ ಕೆರೆಯಲ್ಲಿ ಮೀನುಗಾರಿಕೆ ನಡೆಸಬೇಡಿ:ಆಕ್ಷೇಪ
ಮೈಸೂರು, ಫೆಬ್ರವರಿ 8: ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಆರಂಭವಾಗಿರುವ ಮೀನುಗಾರಿಕೆಗೆ ಪರಿಸರ ಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕನಿಷ್ಠ ಪಕ್ಷ ವಲಸೆ ಬಂದಿರುವ ಹಕ್ಕಿಗಳು ಹೋಗುವವರೆಗೆ ಇಲ್ಲಿ ಮೀನುಗಾರಿಕೆ ನಡೆಯಬಾರದು ಎಂದು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ದನಿ ಎತ್ತಿದ್ದಾರೆ.
ಹೌದು, ಕುಕ್ಕರಹಳ್ಳಿ ಕೆರೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ತೆಪ್ಪ ಬಳಸಿ ಮೀನುಗಾರಿಕೆ ನಡೆಸಿ ದಿನಕ್ಕೆ ನೂರಾರು ಮೀನುಗಳನ್ನು ಹಿಡಿದು ಮಾರಾಟ ಮಾಡಲಾಗುತ್ತಿದೆ. ಈಗ ದೇಶ - ವಿದೇಶದ ಅಪರೂಪದ ಪಕ್ಷಿಗಳು ವಲಸೆ ಬರುವ ಕಾಲವಾಗಿದೆ. ಮೀನುಗಾರಿಕೆಯಿಂದ ವಲಸೆ ಪಕ್ಷಿಗಳು ಹೆದರುತ್ತಿದೆ. ವಲಸೆ ಪಕ್ಷಿಗಳು ಸಂತಾನೋತ್ಪತ್ತಿ ಕೊನೆಗೊಳ್ಳುವವರೆಗೂ ಮೀನು ಹಿಡಿಯಬಾರದು ಎಂಬುದು ಪಕ್ಷಿ ಪ್ರೇಮಿಗಳ ಕೂಗು.
ಮೀನುಗಾರಿಕೆ ಮಹಾಮಂಡಳಕ್ಕೆ ಎಲ್ಲ ಕೆರೆಗಳು ಒಳಪಡುವಂತೆ ಕುಕ್ಕರಳ್ಳಿ ಕೆರೆಯೂ ಸೇರುತ್ತದೆ. ಹಲವು ವರ್ಷಗಳಿಂದ ಕೆರೆಗೆ ಮಹಾಮಂಡಲ ಮೀನು ಮರಿಗಳನ್ನು ಬಿಟ್ಟು, ಗುತ್ತಿಗೆ ಪಡೆದು ಮೀನುಗಾರಿಕೆ ನಡೆಸುತ್ತಾ ಬಂದಿದೆ. ಆದರೆ ಯಾವ ವರ್ಷವೂ ಮೀನುಗಾರಿಕೆಯಿಂದ ಪಕ್ಷಿಗೆ ತೊಂದರೆಯಾಗಿಲ್ಲ.

ಈಗಾಗಲೇ ಹಲವು ವರ್ಷಗಳ ಕಾಲ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿದೆ. ಈ ನೀರು ಬೇರೆಲ್ಲೂ ಹರಿದು ಹೋಗಿಲ್ಲ. ಈಗಲೂ ಶುದ್ಧ ನೀರಿನ ಜತೆ ಕಲುಷಿತ ನೀರು ಸೇರಿದೆ. ಕೆರೆಯ ಮಾಲಿನ್ಯದ ಕುರಿತು ಹಲವು ಬಾರಿ ಚರ್ಚೆಗಳೂ ನಡೆದಿವೆ.
ಇಂತಹ ಕೆರೆಯ ನೀರಿನಲ್ಲಿ ಬೆಳೆದ ಮೀನುಗಳನ್ನು ತಿನ್ನುವುದು ಆರೋಗ್ಯದ ದೃಷ್ಟಿಯಿಂದ ಎಷ್ಟು ಸರಿ ಎಂಬ ಚರ್ಚೆಯೂ ಆರಂಭವಾಗಿವೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಈ ನಿಟ್ಟಿನಲ್ಲಿ ಪರಿಶೀಲಿಸಲಿ ಎಂಬ ಆಗ್ರಹವೂ ವ್ಯಕ್ತವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications