ಫೆ.20 ರಂದು ಜಯಚಾಮರಾಜ ಒಡೆಯರ್ ಜನ್ಮಶತಮಾನೋತ್ಸವ ಸಮಾರಂಭ
ಮೈಸೂರು, ಫೆಬ್ರವರಿ 18: ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪ್ರತಿಷ್ಠಾನದ ವತಿಯಿಂದ ಶ್ರೀ ಜಯಚಾಮರಾಜ ಒಡೆಯರ್ ರವರ ಜನ್ಮ ಶತಮಾನೋತ್ಸವದ ಮೂರನೇ ಅವಧಿಯ ಕಾರ್ಯಕ್ರಮವನ್ನು ಫೆ.೨೦ರಂದು ಮೈಸೂರಿನಲ್ಲಿ ಆಯೋಜಿಸಲಾಗಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು.
ಮೈಸೂರು ಅರಮನೆಯಲ್ಲಿ ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.20 ರ ಮಧ್ಯಾಹ್ನ 3 ಗಂಟೆಗೆ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ನಡೆಯುವ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಖ್ಯಾತ ಸಂಗೀತಗಾರರಾದ ಡಾ.ರಾ.ಸತ್ಯನಾರಾಯಣ ಅವರಿಗೆ ಮರಣೋತ್ತರವಾಗಿ, ಬೆಂಗಳೂರಿನ ಡಾ.ಟಿ.ಎಸ್.ಸತ್ಯವತಿ ಹಾಗೂ ಡಾ.ಸುಕನ್ಯಾಪ್ರಭಾಕರ್ ಅವರಿಗೆ ಶ್ರೀ ಜಯಚಾಮರಾಜೇಂದ್ರ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಇದಕ್ಕೂ ಮುನ್ನ ಡಾ.ಸುಕನ್ಯಾಪ್ರಭಾಕರ್ ಅವರು ಜಯಚಾಮರಾಜ ಒಡೆಯರ್ ಅವರು ರಚಿಸಿರುವ ೯೪ ಕೃತಿಗಳನ್ನೂ ಸೇರಿಸಿ ಗಣರಾಜೇಂದ್ರ ಶ್ರೀ ಜಯಚಾಮರಾಜೇಂದ್ರ ಸಂಗೀತ ರೂಪಕ ಪ್ರಸ್ತುತ ಪಡಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಅವರು ಜಯಚಾಮರಾಜೇಂದ್ರ ಒಡೆಯರ್ ಮತ್ತು ಭಾರತೀಯ ವನ್ಯಜೀವಿ ಮಂಡಳಿ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು.

ಜಯಚಾಮರಾಜ ಒಡೆಯರ್ ಅವರ ಪುತ್ರಿಯರಾದ ಮಹಾರಾಜಕುಮಾರಿಯರಾದ ಕಾಮಾಕ್ಷಿ ದೇವಿ ಮತ್ತು ಇಂದ್ರಾಕ್ಷಿ ದೇವಿ ಅವರು ತಂದೆಯ ನೆನಪುಗಳನ್ನು ಮೆಲಕು ಹಾಕಲಿದ್ದಾರೆ ಎಂದರು.
ಶ್ರೀ ವಿದ್ಯಾ ಸಂಕೀರ್ತನ ಸುಧಾಲಹರೀ ಕೃತಿ ಮಾರಾಟ:
ರಾಜವಾಗ್ಗೇಯಕಾರರಾಗಿದ್ದ ಶ್ರೀ ಜಯಚಾಮರಾಜ ಒಡೆಯರ್ ಅವರು 1940 ರಿಂದ 1947 ರ ಅವಧಿಯಲ್ಲಿ ರಚಿಸಿದ್ದ ಕರ್ನಾಟಕ ಶಾಸ್ತ್ರೀಯ ಸಂಗೀತದ ಕೈ ಬರಹದ 94 ಹಸ್ತಪ್ರತಿಗಳು ಅರಮನೆಯಲ್ಲಿ ಲಭ್ಯವಿದ್ದವು.
ಚಿಂತಕ ರಾಜೇಂದ್ರ ಶಾಸ್ತ್ರೀಯವರ ಬಳಿ ಲಭ್ಯವಿದ್ದ ಮೂರು ಕೃತಿಗಳನ್ನು ಪಡೆದು ಒಟ್ಟು 97 ಸಂಗೀತ ಕೃತಿಗಳನ್ನು ಸೇರಿಸಿ ರಾಗ ಲಕ್ಷಣಗಳ ಕನ್ನಡ ಮತ್ತು ದೇವನಾಗರಿ ಲಿಪಿಯಲ್ಲಿ 528 ಪುಟಗಳ ಶ್ರೀಜಯಚಾಮರಾಜಕೃತ ಶ್ರೀ ವಿದ್ಯಾ ಸಂಕೀರ್ತನ ಸುಧಾಲಹರೀ ಕೃತಿಯನ್ನು ಅರಮನೆಯಿಂದಲೇ ಹೊರತಂದಿದ್ದು, ಅಂದಿನ ಕಾರ್ಯಕ್ರಮದಲ್ಲಿ 900 ರೂ. ಮುಖಬೆಲೆಯ ಈ ಕೃತಿ ಮಾರಾಟಕ್ಕೆ ಲಭ್ಯವಿರಲಿದೆ.

ಜತೆಗೆ ಮೈಸೂರು ಅರಮನೆ ಹಾಗೂ ಜಗನ್ಮೋಹನ ಅರಮನೆಯಲ್ಲೂ ಈ ಕೃತಿಯ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು.
ಜತೆಗೆ ಈ ಕೃತಿಯನ್ನು ಇ-ಬುಕ್ ಮಾಡುವ ಉದ್ದೇಶವಿದ್ದು, ಅದರ ಸಿದ್ಧತೆಯೂ ನಡೆದಿದೆ. ಇಂಗ್ಲೀಷ್ನಲ್ಲಿ ರಾಗಗಳನ್ನು ಮುದ್ರಿಸುವುದು ಕಷ್ಟ ಎಂಬ ಕಾರಣಕ್ಕೆ ಆಂಗ್ಲ ಭಾಷೆಯಲ್ಲಿ ಈ ಕೃತಿಯನ್ನು ಹೊರತಂದಿಲ್ಲವೆಂದರು.
ಮುಂದಿನ ದಿನಗಳಲ್ಲಿ ಜಯ ಚಾಮರಾಜ ಒಡೆಯರ್ ಅವರಿಗೆ ಸೇರಿದ ಬಹಳಷ್ಟು ಹಳೆಯ ದಾಖಲೆಗಳು ಅರಮನೆಯಲ್ಲಿದ್ದು, ಅವುಗಳನ್ನು ಪ್ರತಿಷ್ಠಾನದಿಂದ ಹೊರತರುವ ಕೆಲಸ ಮಾಡುವುದಾಗಿ ಹೇಳಿದ ಅವರು, ಇದರಿಂದ ಸಂಶೋಧನೆ ಮಾಡುವವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಜತೆಗೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಪ್ರವಾಸ ಹೋದಾಗಲೆಲ್ಲ ಅಪರೂಪದ ವಸ್ತುಗಳನ್ನು ಸಂಗ್ರಹಿಸಿ ತಂದಿದ್ದು, ಅವುಗಳನ್ನು ಪ್ರದರ್ಶನಕ್ಕೆ ಇಡಬೇಕೆಂಬ ಉದ್ದೇಶವಿದೆ. ಆದರೆ, ಸುರಕ್ಷತೆ ಕಾರಣದಿಂದ ಪ್ರದರ್ಶನ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.
ಅರಮನೆ ಕಾರ್ಯದರ್ಶಿ ಲಕ್ಷ್ಮೀನಾರಾಯಣ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪ್ರತಿಷ್ಠಾನದ ಕಾರ್ಯದರ್ಶಿ ರೆಜಿನಾಲ್ಡ್ ವೆಸ್ಲಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications