ಮೈಸೂರಿನಲ್ಲಿ ಟೀ ವಿತರಿಸಿ ಗಿಡ ನೆಟ್ಟು ಮೋದಿ ಹುಟ್ಟುಹಬ್ಬದಾಚರಣೆ
ಮೈಸೂರು, ಸೆಪ್ಟೆಂಬರ್ 17: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಅದರಂತೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೋದಿ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಹುಟ್ಟು ಹಬ್ಬವನ್ನು ಆಚರಿಸಿದರು.
ಪರಿಸರ ಸ್ನೇಹಿ ತಂಡದ ವತಿಯಿಂದ ನಗರದ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಅಭಿಷೇಕ ಹಾಗೂ ಪೂಜೆ ಸಲ್ಲಿಸಿ ಚಾಯ್ ವಾಲಾನ ನೆನಪಿನಲ್ಲಿ ಸಾರ್ವಜನಿಕರಿಗೆ ಟೀ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮೇಯರ್ ಸಂದೇಶ್ ಸ್ವಾಮಿ, "ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದವರು ಚಾಯ್ ವಾಲಾ ಎಂದು ಟೀಕಿಸುತ್ತಿದ್ದರು. ಆದರೆ ಸಾಮಾನ್ಯ ಪ್ರಜೆ ಟೀ ಮಾರುವವನು ಕೂಡ ದೇಶದ ಪ್ರಧಾನಮಂತ್ರಿ ಆಗಬಹುದೆಂದು ತೋರಿಸಿದವರು ನಮ್ಮ ನರೇಂದ್ರ ಮೋದಿ ಜೀ. ಇಡೀ ಪ್ರಪಂಚ ನರೇಂದ್ರ ಮೋದಿ ಅವರ ಕಡೆ ತಿರುಗಿ ನೋಡುವಂತಹ ಕೆಲಸವನ್ನು ಮಾಡಿದ್ದಾರೆ" ಎಂದರು.

ಬಿಜೆಪಿಯ ಯಶಸ್ವಿನಿ ಸೋಮಶೇಖರ್, ಪಣೇಶ್, ಪಾರ್ಥ ಸಾರಥಿ, ಪರಿಸರ ಸ್ನೇಹಿ ತಂಡದವರು ಭಾಗವಹಿಸಿದ್ದರು. ಇನ್ನೊಂದೆಡೆ ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ಜಲದರ್ಶಿನಿ ಅತಿಥಿ ಗೃಹದಲ್ಲಿ ಗಿಡ ನೆಡುವ ಮೂಲಕ ಅರ್ಥಪೂರ್ಣವಾಗಿ ನರೇಂದ್ರ ಮೋದಿ ಹುಟ್ಟು ಹಬ್ಬ ಆಚರಿಸಲಾಯಿತು.
ಗಿಡನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಚಾಲನೆ ನೀಡಿದರು. ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಗರಾಧಕ್ಷ ಡಾ.ಮಂಜುನಾಥ್, ಮೋದಿ ಅಭಿಮಾನಿ ಬಳಗದ ಅಧ್ಯಕ್ಷರು, ಇನ್ನೂ ಇತರರು ಇದ್ದರು.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications