ಬಿಜೆಪಿಯವರು ಹರಾಜು ಪ್ರಕ್ರಿಯೆ ನಡೆಸುತ್ತಿದ್ದಾರೆ:ಸಚಿವ ಜಿಟಿ ದೇವೇಗೌಡ
ಮೈಸೂರು, ಫೆಬ್ರವರಿ 5: 40, 50 ಕೋಟಿ ಕೊಟ್ಟು ನಮ್ಮ ನಾಯಕರನ್ನು ಬಿಡ್ ಮಾಡುವ ಮೂಲಕ ಬಿಜೆಪಿಯವರು ಹರಾಜು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸಚಿವ ಜಿಟಿ ದೇವೇಗೌಡ ಕಮಲ ಪಾಳಯದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ.
ತಿ. ನರಸೀಪುರದಲ್ಲಿ ನಡೆಯುತ್ತಿರುವ ಕುಂಭಮೇಳದ ಸಿದ್ಧತೆ ವೀಕ್ಷಣೆಗಾಗಿ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿಯವರು ಇಂದು ಪಕ್ಷದ ಸಭೆ ನಡೆಸುತ್ತಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಾಧ್ಯಮದವರೇ ಅವರ ಬೆನ್ನ ಹತ್ತಿದ್ದಾರೆ. ಆ ಸುದ್ದಿಗಳು ಮಾಧ್ಯಮಗಳಲ್ಲಿ ಬರಲೆಂದು ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರೆ. ರಾಜ್ಯದ ಜನ ಏನು ಮೂರ್ಖರಲ್ಲ. ನಾವು ಯಾವುದೇ ಕಾರಣಕ್ಕೂ ಆಪರೇಷನ್ ಗೆ ಮುಂದಾಗುವುದಿಲ್ಲ. ನಮಗೆ ಅದರ ಅವಶ್ಯಕತೆಯೂ ಇಲ್ಲ ಎಂದರು.
ಹಿಂದೆ ಮಾರುಕಟ್ಟೆಗಳಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಹರಾಜು ನಡೆಸುತ್ತಿದ್ದ ಹಾಗೆ, ಶಾಸಕರನ್ನು 40-50 ಕೋಟಿ ಅಂತ ಬಿಜೆಪಿ ಹರಾಜು ಮಾಡುತ್ತಿದೆ. ಈ ನಿರ್ಧಾರಕ್ಕೆ ಜನರೇ ಬುದ್ಧಿ ಕಲಿಸಲಿದ್ದಾರೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಕುಮಾರಸ್ವಾಮಿ ಅವರೇ ಬಜೆಟ್ ಮಂಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಇದೇ ವೇಳೆ ವಿಶ್ವಪ್ರಸಿದ್ಧ ಕುಂಭಮೇಳದ ಮಾದರಿಯಲ್ಲೇ ಟಿ ನರಸೀಪುರದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಯನ್ನು ನಡೆಸಿದರು.
ಸಚಿವರಿಗೆ ಶಾಸಕ ಎಂ.ಅಶ್ವಿನ್ ಕುಮಾರ್ ಮತ್ತು ವರುಣ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸಾಥ್ ನೀಡಿದರು. "ಉತ್ತರ ಭಾರತದಲ್ಲಿ ನಡೆಯುವ ಕುಂಭಮೇಳ ಮಾದರಿಯಲ್ಲೇ ಇಲ್ಲಿಯೂ ನಡೆಯಲಿದೆ. ಕಾವೇರಿ, ಕಪಿಲ, ನದಿಗಳು ಸಂಗಮಿಸುವ ಪುಣ್ಯ ಕ್ಷೇತ್ರದಲ್ಲಿ ನಡೆಯುವುದರಿಂದ ನಾವೇ ಧನ್ಯರು. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು" ಜಿಟಿಡಿ ತಿಳಿಸಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications