ಬಿಜೆಪಿಗರು ಜೆಡಿಎಸ್ ಅನುಮೋದಿತ ಕಾಮಗಾರಿ ರದ್ದುಗೊಳಿಸಿದ್ದೇಕೆ: ಸಾ ರಾ ಮಹೇಶ್ ಆರೋಪ
ಮೈಸೂರು, ಸೆಪ್ಟೆಂಬರ್ 9: "ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ 9 ತಿಂಗಳ ಹಿಂದೆ ಸುಮಾರು 80 ಕೋಟಿ ವೆಚ್ಚದಲ್ಲಿ ಮಂಜೂರಾಗಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಬಿಜೆಪಿ ಸರ್ಕಾರ ಏಕಾಏಕಿ ತಡೆಹಿಡಿದು ಸೇಡಿನ ರಾಜಕಾರಣ ನಡೆಸುತ್ತಿದೆ" ಎಂದು ಶಾಸಕ ಸಾ.ರಾ.ಮಹೇಶ್ ದೂರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಸರಾ ಮಹೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ನಮ್ಮ ಸಹಕಾರ ಕೋರಿದ್ದಾರೆ. ಆದರೆ, ಆಡಳಿತ ಪಕ್ಷದವರು ಈ ರೀತಿ ವರ್ತಿಸಿದರೆ ನಾವು ಸಹಕಾರ ಕೊಡುವುದಾದರೂ ಹೇಗೆ? ತಡೆ ತೆರವುಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಅವಕಾಶ ನೀಡಬೇಕು. ಇಲ್ಲವಾದರೆ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ" ಎಂದು ಎಚ್ಚರಿಸಿದರು.

"ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಿದೆ. ಹೆಚ್ಚು ಅನುದಾನ ಬಿಡುಗಡೆ ಮಾಡಬೇಕಿತ್ತು. ಆದರೆ, ಜಿಲ್ಲೆಯ ಕೆ.ಆರ್.ನಗರ, ಪಿರಿಯಾಪಟ್ಟಣ, ತಿ.ನರಸೀಪುರ ಸೇರಿದಂತೆ ಎಂಟು ಕ್ಷೇತ್ರಗಳ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿಗೆಂದು ಲೋಕೋಪಯೋಗಿ ಇಲಾಖೆ ಕರೆದಿದ್ದ ಟೆಂಡರ್ ರದ್ದುಪಡಿಸಲಾಗಿದೆ. ಇದ್ಯಾವ ನ್ಯಾಯ?, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆಂದು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಒಂದೊಂದು ಕ್ಷೇತ್ರಕ್ಕೆ 8ರಿಂದ 10 ಕೋಟಿ ಅನುದಾನ ನೀಡಿದ್ದರು. ಆಡಳಿತಾತ್ಮಕ ಮಂಜೂರಾತಿ ಲಭಿಸಿ ಇನ್ನೇನು ಕೆಲಸ ಆರಂಭಿಸಬೇಕು ಎನ್ನುವಷ್ಟರಲ್ಲಿ ಕಾಮಗಾರಿ ತಡೆ ಹಿಡಿದಿದ್ದಾರೆ" ಎಂದು ದೂರಿದ್ದಾರೆ.
ತಮ್ಮ ವಿರುದ್ಧ ವೈಯಕ್ತಿವಾಗಿ ಜಿಟಿಡಿ ಟೀಕೆ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿ, "ಜಿಟಿಡಿ ನಮ್ಮ ನಾಯಕರು. ಅವರು ಪಕ್ಷದಲ್ಲಿ ಇರುವವರೆಗೆ ನನ್ನನ್ನು ತಿದ್ದುವ ಹಕ್ಕು ಹೊಂದಿದ್ದಾರೆ. ಅವರ ಜತೆ ಕುಳಿತು ಒಮ್ಮೆ ಮಾತುಕತೆ ಮಾಡುತ್ತೇನೆ. ನಿನ್ನೆ ನಗರ ಪಾಲಿಕೆ ಜೆಡಿಎಸ್ ಸದಸ್ಯರು ಜಿ.ಟಿ. ದೇವೇಗೌಡ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಸ್ವಲ್ಪ ದಿನಗಳ ಕಾಲ ತಟಸ್ಥವಾಗಿ ಇರುತ್ತೇನೆ ಎಂದು ತಿಳಿಸಿದ್ದಾರೆ. ಅವರು ನನ್ನನು ಆಕ್ಟಿಂಗ್ ಸಿಎಂ ಅಂದಿದ್ದಾರೆ. ನಾನು ಬಹಳ ಬುದ್ಧಿವಂತ ಎಂದೂ ಹೇಳಿದ್ದಾರೆ. ಆದರೆ ನನ್ನ ಪ್ರಕಾರ ನಾನು ದಡ್ಡ" ಎಂದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications