ಬಿಜೆಪಿಗರು ಜೆಡಿಎಸ್ ಅನುಮೋದಿತ ಕಾಮಗಾರಿ ರದ್ದುಗೊಳಿಸಿದ್ದೇಕೆ: ಸಾ ರಾ ಮಹೇಶ್ ಆರೋಪ
ಮೈಸೂರು, ಸೆಪ್ಟೆಂಬರ್ 9: "ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ 9 ತಿಂಗಳ ಹಿಂದೆ ಸುಮಾರು 80 ಕೋಟಿ ವೆಚ್ಚದಲ್ಲಿ ಮಂಜೂರಾಗಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಬಿಜೆಪಿ ಸರ್ಕಾರ ಏಕಾಏಕಿ ತಡೆಹಿಡಿದು ಸೇಡಿನ ರಾಜಕಾರಣ ನಡೆಸುತ್ತಿದೆ" ಎಂದು ಶಾಸಕ ಸಾ.ರಾ.ಮಹೇಶ್ ದೂರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಸರಾ ಮಹೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ನಮ್ಮ ಸಹಕಾರ ಕೋರಿದ್ದಾರೆ. ಆದರೆ, ಆಡಳಿತ ಪಕ್ಷದವರು ಈ ರೀತಿ ವರ್ತಿಸಿದರೆ ನಾವು ಸಹಕಾರ ಕೊಡುವುದಾದರೂ ಹೇಗೆ? ತಡೆ ತೆರವುಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಅವಕಾಶ ನೀಡಬೇಕು. ಇಲ್ಲವಾದರೆ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ" ಎಂದು ಎಚ್ಚರಿಸಿದರು.

"ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಿದೆ. ಹೆಚ್ಚು ಅನುದಾನ ಬಿಡುಗಡೆ ಮಾಡಬೇಕಿತ್ತು. ಆದರೆ, ಜಿಲ್ಲೆಯ ಕೆ.ಆರ್.ನಗರ, ಪಿರಿಯಾಪಟ್ಟಣ, ತಿ.ನರಸೀಪುರ ಸೇರಿದಂತೆ ಎಂಟು ಕ್ಷೇತ್ರಗಳ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿಗೆಂದು ಲೋಕೋಪಯೋಗಿ ಇಲಾಖೆ ಕರೆದಿದ್ದ ಟೆಂಡರ್ ರದ್ದುಪಡಿಸಲಾಗಿದೆ. ಇದ್ಯಾವ ನ್ಯಾಯ?, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆಂದು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಒಂದೊಂದು ಕ್ಷೇತ್ರಕ್ಕೆ 8ರಿಂದ 10 ಕೋಟಿ ಅನುದಾನ ನೀಡಿದ್ದರು. ಆಡಳಿತಾತ್ಮಕ ಮಂಜೂರಾತಿ ಲಭಿಸಿ ಇನ್ನೇನು ಕೆಲಸ ಆರಂಭಿಸಬೇಕು ಎನ್ನುವಷ್ಟರಲ್ಲಿ ಕಾಮಗಾರಿ ತಡೆ ಹಿಡಿದಿದ್ದಾರೆ" ಎಂದು ದೂರಿದ್ದಾರೆ.
ತಮ್ಮ ವಿರುದ್ಧ ವೈಯಕ್ತಿವಾಗಿ ಜಿಟಿಡಿ ಟೀಕೆ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿ, "ಜಿಟಿಡಿ ನಮ್ಮ ನಾಯಕರು. ಅವರು ಪಕ್ಷದಲ್ಲಿ ಇರುವವರೆಗೆ ನನ್ನನ್ನು ತಿದ್ದುವ ಹಕ್ಕು ಹೊಂದಿದ್ದಾರೆ. ಅವರ ಜತೆ ಕುಳಿತು ಒಮ್ಮೆ ಮಾತುಕತೆ ಮಾಡುತ್ತೇನೆ. ನಿನ್ನೆ ನಗರ ಪಾಲಿಕೆ ಜೆಡಿಎಸ್ ಸದಸ್ಯರು ಜಿ.ಟಿ. ದೇವೇಗೌಡ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಸ್ವಲ್ಪ ದಿನಗಳ ಕಾಲ ತಟಸ್ಥವಾಗಿ ಇರುತ್ತೇನೆ ಎಂದು ತಿಳಿಸಿದ್ದಾರೆ. ಅವರು ನನ್ನನು ಆಕ್ಟಿಂಗ್ ಸಿಎಂ ಅಂದಿದ್ದಾರೆ. ನಾನು ಬಹಳ ಬುದ್ಧಿವಂತ ಎಂದೂ ಹೇಳಿದ್ದಾರೆ. ಆದರೆ ನನ್ನ ಪ್ರಕಾರ ನಾನು ದಡ್ಡ" ಎಂದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications