"ಕಾದು ನೋಡಿ" ಎಂದು ಮಾರ್ಮಿಕವಾಗಿ ನುಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್
ಮೈಸೂರು, ಫೆಬ್ರವರಿ 18: "ನಾವು ಆಪರೇಷನ್ ಕಮಲ ಮಾಡೋದಿಲ್ಲ. ಬಿಜೆಪಿಯ ಬಾಗಿಲು ಯಾವಾಗಲೂ ತೆರೆದಿರುತ್ತದೆ" ಎಂದು ಪರೋಕ್ಷವಾಗಿ ತಮ್ಮ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್.
ವಿಧಾನ ಪರಿಷತ್ ಚುನಾವಣೆಯಲ್ಲಿ ಜಿ.ಟಿ ದೇವೇಗೌಡ ಬಿಜೆಪಿಗೆ ವೋಟ್ ಹಾಕಿದ ವಿಚಾರವಾಗಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, "ಮುಂದೆ ನೀವೇ ಕಾದು ನೋಡಿ ರಾಜಕೀಯದಲ್ಲಿ ಏನಾಗಲಿದೆ ಎಂದು" ಎಂದು ಮಾರ್ಮಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಹುಬ್ಬಳ್ಳಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಕಾಲೇಜು ವಿದ್ಯಾರ್ಥಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, "ಈ ದೇಶದಲ್ಲಿದ್ದು ಬೇರೆ ರಾಷ್ಟ್ರಕ್ಕೆ ಜೈಕಾರ ಹಾಕೋದು ರಾಷ್ಟ್ರ ವಿರೋಧಿ. ರಾಷ್ಟ್ರ ವಿರೋಧಿ ಕೆಲಸ ಯಾರೇ ಮಾಡಿದರೂ ಅದು ತಪ್ಪು" ಎಂದರು.

ಪಾಕ್ ಪರ ಘೋಷಣೆ ಕೂಗಿದವರ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ ವಿಚಾರವಾಗಿ ಮಾತನಾಡಿ, "ದೇಶದ್ರೋಹಿಗಳಿಗೆ ಹಿಂದೂ ಅಥವಾ ಬೇರೆ ಧರ್ಮದವರು ಅಂತೇನಿಲ್ಲ. ದೇಶದ್ರೋಹಿಗಳ ಮೇಲಿನ ಕೋಪ ಅಷ್ಟೆ" ಎಂದು ಹಿಂದೂ ಕಾರ್ಯಕರ್ತರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.












Click it and Unblock the Notifications