ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುತೂಹಲ ಮೂಡಿಸಿದ ವಿಶ್ವನಾಥ್ – ಎ ಮಂಜು ಭೇಟಿ

|
Google Oneindia Kannada News

ಮೈಸೂರು, ಆಗಸ್ಟ್ 15: ಮೈಸೂರು ಭಾಗದ ರಾಜಕಾರಣದಲ್ಲಿ ಬದಲಾವಣೆಯ ಪರ್ವ ಶುರುವಾಗಿದೆ. ಅದಕ್ಕೆ ಪುಷ್ಟಿ ಕೊಡುವಂತೆ ಮಾಜಿ ಸಚಿವ, ಬಿಜೆಪಿ ಮುಖಂಡ ಎ.ಮಂಜು ಅವರು ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರನ್ನು ಮೈಸೂರಿನಲ್ಲಿ ಭೇಟಿಯಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಪೋನ್ ಕದ್ದಾಲಿಕೆ: ಕುಮಾರಸ್ವಾಮಿ ವಿರುದ್ಧ ವಿಶ್ವನಾಥ್ ಗರಂ
ನಗರದ ಜಲದರ್ಶಿನಿ ಅಥಿತಿ ಗೃಹದಲ್ಲಿ ಉಭಯ ನಾಯಕರಾದ ಎಚ್.ವಿಶ್ವನಾಥ್ ಮತ್ತು ಎ.ಮಂಜು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

BJP leader A Manju and H Vishwanth meets in Mysuru

ವಿಶ್ವನಾಥ್ ಅವರನ್ನ ಭೇಟಿಯಾದ ಬಳಿಕ ಪ್ರತಿಕ್ರಿಯಿಸಿದ ಮಾಜಿ ಸಚಿವ ಎ.ಮಂಜು, "ಇದು ಕೇವಲ ಉಭಯ ಕುಶಲೋಪರಿ ಭೇಟಿಯಷ್ಟೆ. ನಾನು ಆಕಸ್ಮಿಕವಾಗಿ ಮೈಸೂರಿನ ಜಲದರ್ಶಿನಿಗೆ ಬಂದೆ. ವಿಶ್ವನಾಥ್ ಅವರು ಬಿಜೆಪಿಗೆ ಬಂದಲ್ಲಿ ಖುಷಿ ಪಡುವವರಲ್ಲಿ ನಾನೇ ಮೊದಲಿಗ" ಎಂದರು.

ಹುಣಸೂರಿನಲ್ಲಿ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಎ.ಮಂಜು, "ಹುಣಸೂರಿಗೆ ಸಮರ್ಥ ಅಭ್ಯರ್ಥಿಗಳು ತುಂಬಾ ಜನ ಇದ್ದಾರೆ. ನಮ್ಮ ವಿಶ್ವಣ್ಣ ಅವ್ರೇ ಇಲ್ವಾ, ಪ್ರಬಲವಾದ ಮುಖಂಡರು. ಅವರೇ ಬೇಕಾದರೆ ನಿಲ್ಲಬಹುದು. ಆದರೆ ನಾನು ಮಾತ್ರ ಹುಣಸೂರಿನ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಹುಣಸೂರಿನಲ್ಲಿ ಪಕ್ಷ ಸಂಘಟನೆಯಲ್ಲಿ ಇರುತ್ತೇನೆ ಅಷ್ಟೇ" ಎಂದರು.

English summary
BJP leader A Manju and H Vishwanth meets in Mysuru. Both are discussed on present political developments
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X