ಮಾಧ್ಯಮದವರೆದುರು ಮುಜುಗರಕ್ಕೀಡಾದ ಅರವಿಂದ ಲಿಂಬಾವಳಿ
ಸಭೆಯಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಪರಸ್ಪರ ಮುಖ ನೋಡದ, ಮಾತನಾಡದ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿ ಅರವಿಂದ ಲಿಂಬಾವಳಿ ಪತ್ರಿಕಾಗೋಷ್ಠಿಯಿಂದಲೇ ಹೊರನಡೆದರು.
ಮೈಸೂರು, ಮೇ 7 : ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ನಗರದ ರಾಜೇಂದ್ರ ಕಲಾಮಂದಿರದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮೊದಲ ದಿನದ ಗೋಷ್ಠಿ ಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಖಾಸಗಿ ಹೋಟೆಲ್ವೊಂದರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಅವರು, ಕಾಂಗ್ರೆಸ್ ಸರ್ಕಾರ 4 ವರ್ಷಗಳಿಂದ ಮರಳು ದಂಧೆ, ವರ್ಗಾವಣೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದೀಗ ವಿಧಾನಸಭಾ ಚುನಾವಣೆ ಇನ್ನೊಂದು ವರ್ಷ ಇರುವಾಗ ಮರಳಿ ಅಧಿಕಾರ ಗಳಿಸಲು ಗಿಮಿಕ್ಗಳನ್ನು ಆರಂಭಿಸಿದೆ ಎಂದು ದೂರಿದರು.[In Pics: ಮೈಸೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ]
ಹೊಸದಿಲ್ಲಿಯ ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ನಡೆಸಿರುವ ಸಮೀಕ್ಷೆಯಲ್ಲಿ ದೇಶದ 20 ರಾಜ್ಯಗಳ ಪೈಕಿ ಸರ್ಕಾರಿ ಸೇವೆ ಪಡೆಯಲು ಜನರು ಲಂಚ ನೀಡಬೇಕಾದ ಅನಿವಾರ್ಯತೆ ಇರುವ ಮೊದಲ ರಾಜ್ಯ ಕರ್ನಾಟಕ ಎಂಬ ಕುಖ್ಯಾತಿಗೆ ಪಾತ್ರವಾಗಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟು ಗಳನ್ನು ಅಮಾನ್ಯಗೊಳಿಸಿದಾಗ ರಾಜ್ಯದ ಕೆಲ ಸಚಿವರು, ಆಡಳಿತ ಪಕ್ಷದ ಹಲವು ಶಾಸಕರು, ಹಿರಿಯ ಅಧಿಕಾರಿಗಳ ನಿವಾಸಗಳಲ್ಲಿ ಭಾರೀ ಪ್ರಮಾಣದ 2000 ರೂ. ಮುಖಬೆಲೆಯ ಹೊಸ ನೋಟುಗಳು ಪತ್ತೆಯಾಗಿವೆ. ಕೇಂದ್ರ ಸರ್ಕಾರ ಕೆಜಿ ಅಕ್ಕಿಗೆ 32 ರೂ. ನೀಡಿ ರಾಜ್ಯ ಸರ್ಕಾರಕ್ಕೆ ಸಬ್ಸಿಡಿ ದರವೆಂದು ಕೇವಲು 3 ರೂ.ಗೆ ಪೂರೈಕೆ ಮಾಡಿತ್ತು. ಅದನ್ನು ರಾಜ್ಯ ಸರ್ಕಾರದ ಯೋಜನೆ ಎಂದು ಕಾಂಗೆಸ್ಸಿಗರು ಕೊಚ್ಚಿಕೊಳ್ಳುತ್ತಿದ್ದಾರೆ. ಇದು ಚುನಾವಣಾ ಗಿಮಿಕ್ ಅಲ್ಲದೆ ಬೇರೇನೂ ಅಲ್ಲ ಎಂದು ಅವರು ಲೇವಡಿ ಮಾಡಿದರು.
ಎಲ್ಇಡಿ ಬಲ್ಬ್ ಗಳ ಖರೀದಿಯಲ್ಲಿ ಗೋಲ್ಮಾಲ್, ಡೈರಿ ಹಗರಣ, ಬೆಂಗಳೂರು ಉಕ್ಕಿನ ಸೇತುವೆ ನಿರ್ಮಾಣ ಕೈಬಿಟ್ಟಿದ್ದು, ಇವೆಲ್ಲ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಮುಖವನ್ನುಅನಾವರಣಗೊಳಿಸಿವೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಬಿಜೆಪಿ ಶ್ರಮಿಸಲು ನಿರ್ಧಾರ ಕೈಗೊಂಡಿದೆ ಎಂದರು.
ಕಸಿವಿಸಿಗೊಂಡ ಲಿಂಬಾವಳಿ
ಬಿ.ಎಸ್.ಯಡಿಯೂರಪ್ಪ ಮತ್ತು ಕೆ.ಎಸ್.ಈಶ್ವರಪ್ಪ ನಡುವಿನ ಮುನಿಸು ಬಿಜೆಪಿ ಕಾರ್ಯಕಾರಿಣಿಯಲ್ಲೂ ಪ್ರದರ್ಶನಗೊಂಡ ಬಗ್ಗೆ ಉತ್ತರಿಸಲು ಮುಂದಾದ ಅರವಿಂದ ಲಿಂಬಾವಳಿ ಮುಜುಗರಕ್ಕೊಳಗಾದರು.
ಸಭೆಯಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರಿಬ್ಬರೂ ಪರಸ್ಪರ ಮುಖ ನೋಡದ, ಮಾತನಾಡದ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಲಿಂಬಾವಳಿ ಹೇಳಿದರು.
ಅಲ್ಲದೆ, ಕಾರ್ಯಕಾರಿಣಿ ಸಭೆ ನಡೆಯುತ್ತಿರುವ ರಾಜೇಂದ್ರ ಕಲಾಮಂದಿರದ ಆವರಣದಲ್ಲಿ ಈಶ್ವರಪ್ಪ ಅವರ ಎದುರೇ ಕೆಲವರು ಮುಂದಿನ ಮುಖ್ಯಮಂತ್ರಿ ಈಶ್ವರಪ್ಪ ಅವರಿಗೆ ಜೈ ಎಂದು ಕೂಗಿದ್ದಾರಲ್ಲ ಎಂದು ಮತ್ತೊಂದು ಪ್ರಶ್ನೆ ಎದುರಾಯಿತು. ಅಂಥದನ್ನೆಲ್ಲ ಸುದ್ದಿ ಮಾಡಬೇಡಿ ಎಂದರು.
ಈ ಸಂದರ್ಭ 'ಯಾವ ಸುದ್ದಿ ಮಾಡಬೇಕು, ಯಾವುದನ್ನು ಮಾಡಬಾರದು ಎಂಬುದನ್ನು ನೀವು ಹೇಳಬೇಕಿಲ್ಲ,' ಎಂದು ಮಾಧ್ಯಮದವರು ತಿರುಗಿಬಿದ್ದರು. ಪಕ್ಷದ ಆಂತರಿಕ ವಿಚಾರ ಬಿಟ್ಟು ಈಗ ನಾನು ಹೇಳಿದ್ದರ ಬಗ್ಗೆ ಕೇಳಿ, ಇಲ್ಲದಿದ್ದರೆ ಕೃತಜ್ಞತೆಗಳು ಎಂದರು. ಅದಕ್ಕೊಪ್ಪದ ಮಾಧ್ಯಮಗಳು ಗೋಷ್ಠಿ ಕರೆದು ನಮ್ಮ ಪ್ರಶ್ನೆಗಳಿಗೆ ಉತ್ತರಿಸದಿರುವುದು ಸಮಂಜಸವಲ್ಲ ಎಂದು ಅಸಹನೆ ವ್ಯಕ್ತಪಡಿಸಿದರು. ಆದರೆ, ಲಿಂಬಾವಳಿ ಮಾತ್ರ ಅಲ್ಲಿಂದ ಜಾಗ ಖಾಲಿ ಮಾಡಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications