ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು; ಬಿಜೆಪಿ ಮುಖಂಡನನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

|
Google Oneindia Kannada News

ಮೈಸೂರು, ಮಾರ್ಚ್ 06 : ಮೈಸೂರು ನಗರದಲ್ಲಿ ಬಿಜೆಪಿ ಮುಖಂಡನ ಹತ್ಯೆಯಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಕೊಲೆಯಾದ ಬಿಜೆಪಿ ಮುಖಂಡ ಎಸ್. ಆನಂದ್ ಮೈಸೂರು ನಗರ ಬಿಜೆಪಿ ಸ್ಲಂ ಮೋರ್ಚಾ ಉಪಾಧ್ಯಕ್ಷರಾಗಿದ್ದರು. ಶುಕ್ರವಾರ ಬೆಳಗ್ಗೆ ಕುವೆಂಪು ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಶವ ಪತ್ತೆಯಾಗಿದೆ.

ಪೊಲೀಸರ ಕೈ ಸೇರಿದ ಡಾ. ರೇವಂತ್ ಕೊನೆ ಪೋನ್ ಕರೆ ವಿವರ!ಪೊಲೀಸರ ಕೈ ಸೇರಿದ ಡಾ. ರೇವಂತ್ ಕೊನೆ ಪೋನ್ ಕರೆ ವಿವರ!

ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಎಸ್. ಆನಂದ್ ಹತ್ಯೆ ಮಾಡಲಾಗಿದೆ. ಮೂರು ಅಥವ ನಾಲ್ಕು ಜನರ ತಂಡ ಈ ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ದಾಬೋಲ್ಕರ್ ಹತ್ಯೆ; ಸಮುದ್ರದಿಂದ ಪಿಸ್ತೂಲ್ ವಶಕ್ಕೆ ಪಡೆದ ಸಿಬಿಐ ದಾಬೋಲ್ಕರ್ ಹತ್ಯೆ; ಸಮುದ್ರದಿಂದ ಪಿಸ್ತೂಲ್ ವಶಕ್ಕೆ ಪಡೆದ ಸಿಬಿಐ

BJP

ಗುರುವಾರ ರಾತ್ರಿ ಎಸ್. ಆನಂದ್ ಮನೆಯಲ್ಲಿ ಸ್ನೇಹಿತನ ಹುಟ್ಟು ಹಬ್ಬದ ಅಂಗವಾಗಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಯಾವುದೋ ವಿಚಾರಕ್ಕೆ ಜಗಳ ನಡೆದು ಆನಂದ್ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಒಂದು ಕೊಲೆ, ಎರಡು ಆತ್ಮಹತ್ಯೆ; ಡಾಕ್ಟರ್ ಜೀವನದ ದುರಂತ ಕಥೆ! ಒಂದು ಕೊಲೆ, ಎರಡು ಆತ್ಮಹತ್ಯೆ; ಡಾಕ್ಟರ್ ಜೀವನದ ದುರಂತ ಕಥೆ!

ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. "ಬಿಯರ್ ಬಾಟಲ್‌ನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ಪ್ರಕರಣದ ಸಂಬಂಧ ಒಬ್ಬನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ" ಎಂದು ಹೇಳಿದರು.

English summary
Bharatiya Janata Party leader and Mysuru city slum morcha vice president S. Anand was hacked to death by unknown. Body found in Kuvempu Nagar apartment on Friday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X