Honeytrap: ಹನಿಟ್ರ್ಯಾಪ್ ಇವರ ಮೇಲೂ ಆಗಿದೆ: ಹೊಸ ಬಾಂಬ್ ಸಿಡಿಸಿದ ಯತೀಂದ್ರ ಸಿದ್ದರಾಮಯ್ಯ
ರಾಜ್ಯ ರಾಜಕಾರಣವನ್ನೇ ಬೆಚ್ಚಿ ಬೀಳಿಸಿರುವ ಹನಿಟ್ರ್ಯಾಪ್ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ತಿದೆ. ಕಾಂಗ್ರೆಸ್ ಸಚಿವ ಕೆಎನ್ ರಾಜಣ್ಣ ಅವರೇ ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಹೇಳಿಕೆ ನೀಡಿ ಶಾಕ್ ಕೊಟ್ಟ ಬೆನ್ನಲ್ಲೇ ರಾಜಕೀಯವ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ನಿನ್ನೆಯಷ್ಟೇ ಹನಿಟ್ರ್ಯಾಪ್ ಬಗ್ಗೆ ಹಲವು ಮಹತ್ವದ ವಿಚಾರಗಳನ್ನು ಬಹಿರಂಗಪಡಿಸಿದ್ದ ಕೆಎನ್ ರಾಜಣ್ಣ ಅವರು ಯುವತಿಯೊಬ್ಬಳು ಹೈಕೋರ್ಟ್ ವಕೀಲೆ ಎಂದು ಹೇಳಿಕೊಂಡು ಬಂದಿದ್ದಾಗಿ ತಿಳಿಸಿದ್ದರು. ಈಗ ಸಿದ್ದರಾಮಯ್ಯ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಲವರು ಹನಿಟ್ರ್ಯಾಪ್ ಮಾಡಬೇಕು ಎಂಬ ಕಾರಣಕ್ಕೆ ಸಚಿವರ ಮನೆಗಳಿಗೆ ಬರ್ತಾರೆ. ಹಾಗಾಗಿ ಸಚಿವರ ಮನೆಗಳಿಗೆ ಸಿಸಿಟಿವಿ ಹಾಕಿಸಲೇಬೇಕು. ಇನ್ನು ಸಚಿವರ ಮನೆಗಳಲ್ಲಿ ಸಿಸಿಟಿವಿ ಇಲ್ಲ ಎನ್ನುವ ವಿಚಾರದ ಬಗ್ಗೆ ನನಗೆ ಅಷ್ಟಾಗಿ ಗೊತ್ತಿಲ್ಲ. ಆದರೆ ತಂದೆ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಿಸಿಟಿವಿ ಇದೆ. ನಾನು ಕೂಡ ಅಲ್ಲೇ ಇರುವುದರಿಂದ ಇದರ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಆದರೆ, ಬೇರೆಯವರ ಮನೆಗಳಲ್ಲಿ ಸಿಸಿಟಿವಿ ಇಲ್ಲದ ವಿಚಾರ ಗೊತ್ತಿಲ್ಲ ಎಂದು ಯತೀಂದ್ರ ಹೇಳಿದ್ದಾರೆ.

ಇನ್ನು ಬಿಜೆಪಿಯವರ ವಿಚಾರಕ್ಕೆ ಬಂದರೆ, ಬಿಜೆಪಿಯಲ್ಲೇ ಹಲವು ಹನಿಟ್ರ್ಯಾಪ್ಗಳು ನಡೆದಿವೆ. ಬಿಜೆಪಿಯ ನಾಯಕರ ವಿಡಿಯೋಗಳನ್ನ ಬಿಜೆಪಿ ಪಕ್ಷದವರೇ ಮಾಡಿಕೊಂಡು ಇಟ್ಟಿದ್ದಾರೆ. ವಿಡಿಯೋವನ್ನ ಬಿಜೆಪಿಯವರೇ ಮಾಡಿಕೊಂಡು ಇಟ್ಟಿದ್ದಾರೆ. ಈ ಕಾರಣಕ್ಕಾಗಿಯೇ ಕೆಲ ಬಿಜೆಪಿ ಶಾಸಕರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕೋರ್ಟ್ನಿಂದ ಸ್ಟೇ ತಂದಿದ್ದಾರೆ. ಅವರ ಕಥೆಯೇ ಹೀಗಿರುವಾಗ ಬಿಜೆಪಿಯವರಿಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಚಿವರ ಸರ್ಕಾರಿ ನಿವಾಸಗಳಲ್ಲಿ ಸಿಸಿಟಿವಿ ಇಲ್ಲ ಎನ್ನುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಪೊಲೀಸ್ ಬಂದೂಬಸ್ತ್ ಕೂಡ ಬಿಗಿಯಾಗಿದೆ. ಇಲ್ಲಿಗೆ ಯಾರೇ ಬಂದರೂ ವಿಡಿಯೋ ರೆಕಾರ್ಡ್ ಆಗು ತ್ತದೆ. ಹಾಗಾಗಿ ಉಳಿದ ಸಚಿವರ ಮನೆಗೂ ಸಿಸಿಟಿವಿ ಕ್ಯಾಮರಾ ಹಾಕಲೇಬೇಕು. ಏಕೆಂದರೆ, ಸಿಸಿಟಿವಿ ಇದ್ದರೆ ಹನಿಟ್ರ್ಯಾಪ್ ಮಾಡುವವರ ಮೇಲೆ ನಿಗಾ ಇಡಬಹುದು ಎಂದೂ ಯತೀಂದ್ರ ಹೇಳಿದ್ದಾರೆ.

ಇನ್ನು ಸದನದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕ ಬನಸಗೌಡ ಪಾಟೀಲ್ ಯತ್ನಾಳ್ ಅವರಿಗೆ ಚೀಟಿ ಕೊಟ್ಟ ವಿಚಾರ ಕುರಿತು ಮಾತನಾಡಿ, ನಮ್ಮ ಕಾಂಗ್ರೆಸ್ ನಾಯಕರು ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಮಾತನಾಡಿರುವುದು ಮಾತ್ರ ನನಗೆ ಗೊತ್ತಿದೆ. ಅದರ ಬಗ್ಗೆ ಮಾತ್ರ ನಾನು ಮಾತನಾಡಬಹುದು, ಆದರೆ ಯತ್ನಾಳ್ ಅವರಿಗೆ ಚೀಟಿ ಕೊಟ್ಟಿದ್ದು ಯಾರು ಎಂಬ ವಿಚಾರವೇ ನನಗೆ ಗೊತ್ತಿಲ್ಲ ಎಂದಿದ್ದಾರೆ. ಸದ್ಯ ಹನಿಟ್ರ್ಯಾಪ್ ವಿಚಾರವಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ, ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಆರೋಪಗಳನ್ನು ಮಾಡುತ್ತಿದ್ದು, ಈ ಜಾಲದಲ್ಲಿ ಯಾರೆಲ್ಲ ಸಿಲುಕಿದ್ದಾರೆ ಎಂಬುದು ತನಿಖೆಯಿಂದ ಮಾತ್ರ ಹೊರಬರಲಿದೆ.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications