ಪ್ರತಾಪ್ ಸಿಂಹ ಬಂಧನ ವಿರೋಧಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ
ಮೈಸೂರು, ಡಿಸೆಂಬರ್ 04: ಹುಣಸೂರು ಹನುಮ ಜಯಂತಿ ಗಲಭೆ ವೇಳೆ ಸಂಸದ ಪ್ರತಾಪ್ ಸಿಂಹ ಬಂಧನವನ್ನು ಖಂಡಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಣುಕು ತಿಥಿಮಾಡಿವ ಮೂಲಕ ಪ್ರತಿಭಟನೆ ನಡೆಸಿದರು.
ಮೈಸೂರಿನ ಗಾಂಧಿವೃತ್ತದ ಬಳಿ ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ಮುಖಂಡ ಹೆಚ್.ವಿ.ರಾಜೀವ್, ಬಿಜೆಪಿ ನಗರಾಧ್ಯಕ್ಷ ಡಾ.ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಧರಣಿನಿರತರು ಸಿಎಂ ಸಿದ್ದರಾಮಯ್ಯನ ಅಣುಕು ತಿಥಿಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಜತೆಗೆ ಸಿಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿ ವಿವಿಧ ಘೋಷಣೆಗಳನ್ನು ಕೂಗಿ ನೂರಾರು ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಹಿಂದೂಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಹನುಮ ಜಯಂತಿಗೆ ಹೊರಡುತ್ತಿದ್ದ ಪ್ರತಾಪ್ ಸಿಂಹರನ್ನು ತಡೆಯುವಂತಹ ಕೆಲಸವನ್ನು ಏಕೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ನಿನ್ನೆ ಚಿಕ್ಕಮಗಳೂರಿನಲ್ಲಿಯೂ ಕೂಡಾ ಹಿಂದುಗಳ ಮೇಲೆ ದೌರ್ಜನ್ಯವೆಸಗಿದ್ದಾರೆ. ಅಲ್ಲದೆ ಪ್ರತಾಪ್ ಸಿಂಹರನ್ನು ಬಂಧಿಸಿ ಅವರನ್ನು ತಡರಾತ್ರಿಯವರೆಗೂ ಸುತ್ತಾಡಿಸಿ ಚುನಾಯಿತ ಪ್ರತಿನಿಧಿಯನ್ನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತುಳಿಯುವ ಕೆಲಸ ಮಾಡ್ತಿದ್ದಾರೆ. ಹಿಂದುಗಳಿಗೊಂದು ನ್ಯಾಯ, ಮುಸಲ್ಮಾನರಿಗೊಂದು ನ್ಯಾಯ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಾಪ್ ಸಿಂಹ ಸುದ್ದಿಗೋಷ್ಠಿ
ಹನುಮ ಜಯಂತಿ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಬೆಳಿಗ್ಗೆ(ಡಿ.4) ಪತ್ರಿಕಾಗೋಷ್ಠಿ ನಡೆಸಿದ ಸಂಸದ ಪ್ರತಾಪ್ ಸಿಂಹ, "ಹುಣಸೂರಿನಲ್ಲಿ ನಿನ್ನೆ ನಡೆದ ಘಟನೆಗೆ ಜಿಲ್ಲಾಡಳಿತವೇ ನೇರ ಹೊಣೆ. ಮೈಸೂರು ಎಸ್ಪಿ ರವಿ ಡಿ ಚನ್ನಣ್ಣನವರ್ ಸರ್ಕಾರದ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಗೂಂಡಾ ಸಂಸ್ಕೃತಿ ನನ್ನದಲ್ಲ, ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್, ಅವರಪ್ಪ ಗುಂಡೂರಾವ್ ಅವರು ಗೂಂಡಾ ರಾಜಕೀಯ ಮಾಡಿದ್ದಾರೆ ಎಂದು ಕಿಡಿಕಾರಿದರು.

"ನಿನ್ನೆ ಪೊಲೀಸರು ನನ್ನ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿದ್ರು. ಹೀಗಾಗಿ ನಾನೇ ನನ್ನ ಕಾರಿನಲ್ಲಿ ತೆರಳಬೇಕಾಯ್ತು. ಮೈಸೂರು ಎಸ್ಪಿ ರವಿ ಡಿ ಚನ್ನಣ್ಣನವರ್ ಸರ್ಕಾರದ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಹನುಮ ಜಯಂತಿ ಆಚರಣೆ ವಿಚಾರ ಕಾನೂನು ಹೋರಾಟ ಮಾಡ್ತೇವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮೀತ್ ಶಾ ಅವರಿಗೂ ಈ ಘಟನೆಗೂ ಸಂಬಂಧ ಇಲ್ಲ" ಎಂದರು.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications