ಅವಹೇಳನಕಾರಿ ಹೇಳಿಕೆ: ಪ್ರಕಾಶ್ ರಾಜ್ಗೆ ಸ್ಸಾರಿ ಎಂದ ಪ್ರತಾಪ್ ಸಿಂಹ
Recommended Video
"ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದ ಪ್ರತಾಪ ಸಿಂಹ, ಟ್ವೀಟರ್, ಫೇಸ್ ಬುಕ್ ನಂಥ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದ್ದಲ್ಲದೆ ಟ್ರೋಲ್ ಗೂಂಡಾಗಿರಿ ನಡೆಸಿದ್ದಾರೆ" ಎಂದು ನಟ, ರಾಜಕಾರಣಿ ಪ್ರಕಾಶ್ ರೈ ಅವರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಹೂಡಿದ್ದ 1 ರೂಪಾಯಿ ಮೌಲ್ಯದ ಮಾನನಷ್ಟ ಮೊಕದ್ದಮೆ ಪ್ರಕರಣ ಬಹುತೇಕ ಸುಖಾಂತ್ಯ ಕಂಡಿದೆ.
"ಪ್ರತಾಪ್ ಸಿಂಹ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು" ಎಂದು ಆಗ್ರಹಿಸಿ ಲೀಗಲ್ ನೋಟಿಸ್ ಜಾರಿ ಮಾಡಿದ್ದರು. ಆದರೆ ಅದಕ್ಕೆ ಸಮರ್ಪಕ ಉತ್ತರ ಬಾರದ ಹಿನ್ನೆಲೆಯಲ್ಲಿ ಕಾನೂನು ಸಮರಕ್ಕೆ ಈಗ ಮುಂದಾಗಿದ್ದರು. ಪ್ರತಾಪ್ ಸಿಂಹ ಅವರು ಜನಪ್ರತಿನಿಧಿ ಕೋರ್ಟಿಗೆ ಹಾಜರಾಗಿ ಐದು ಗಂಟೆಗಳ ಕಾಲ ಕುಳಿತು ಬಂದಿದ್ದರು.
ವರ್ಷಗಳ ಹಿಂದಿನ ಈ ಪ್ರಕರಣಕ್ಕೆ ತೆರೆ ಎಳೆಯುವ ಸಲುವಾಗಿ,ಸಾಮಾಜಿಕ ಜಾಲತಾಣಗಳಲ್ಲಿ ಶುರುವಾರ ಈ ಯುದ್ಧಕ್ಕೆ ಪ್ರತಾಪ್ ಸಿಂಹ ಅವರು ಟ್ವೀಟ್ ಮೂಲಕವೇ ಅಂತ್ಯ ಹಾಡಿದ್ದಾರೆ.

ಟ್ವೀಟರ್ನಲ್ಲಿ ಬಹಿರಂಗವಾಗಿ ಕ್ಷಮೆ ಕೋರಿದ್ದಾರೆ.
ಅಂದು ಪ್ರಕಾಶ್ ರೈ ಹಾಗೂ ಅವರ ಕೌಟುಂಬಿಕ ವಿಚಾರದ ಬಗ್ಗೆ ಅವಹೇಳನಕಾರಿಯಾದ ಬರಹವನ್ನು ಪ್ರಕಟಿಸಿದ್ದರು. ಇಂದು ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಇಂದು ಟ್ವೀಟರ್ನಲ್ಲಿ ಬಹಿರಂಗವಾಗಿ ಕ್ಷಮೆ ಕೋರಿದ್ದಾರೆ.
| Array |
ಪ್ರತಾಪ್ ಸಿಂಹ ಟ್ವೀಟ್
"ಆತ್ಮೀಯ ಪ್ರಕಾಶ್ ರೈ ಅವರೆ, ನಿಮ್ಮ ಹಾಗೂ ನಿಮ್ಮ ಕುಟುಂಬದ ಮಾನ ಹಾನಿಯಾಗುವಂತಹ ಬರಹವನ್ನು ನಾನು 2017 ಆಕ್ಟೋಬರ್ 2 ಮತ್ತು 3 ರಂದು ಬರೆದಿದ್ದೆ. ಆದರೆ, ಇದು ಅನಗತ್ಯ ಮತ್ತು ಮನಸ್ಸಿಗೆ ನೋವು ತರುವ ವಿಚಾರ ಎಂದು ಈಗ ಅರ್ಥಮಾಡಿಕೊಂಡಿದ್ದೇನೆ. ಹೀಗಾಗಿ ಈ ಟ್ವಿಟರ್ ಮತ್ತು ಎಫ್ಬಿಯಲ್ಲಿ ಬರೆಯಲಾಗಿರುವ ಬರಹದ ಕುರಿತು ವಿಷಾಧಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
|
ಪ್ರಕಾಶ್ ರೈ ನೀಡಿದ ಉತ್ತರ
ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಕಾಶ್ ರೈ, "ಧನ್ಯವಾದಗಳು ಪ್ರತಾಪ್ ಸಿಂಹ. ನಮ್ಮ ನಡುವೆ ವೈಚಾರಿಕ ಭಿನ್ನಾಭಿಪ್ರಾಯ ಇರಬಹುದು. ಆದರೆ, ವ್ಯಯಕ್ತಿಕ ಜೀವನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡುವುದು ತಪ್ಪು. ನಾವು ಇಬ್ಬರೂ ಅವರವರ ಕ್ಷೇತ್ರದಲ್ಲಿ ವ್ಯಯಕ್ತಿಕವಾಗಿ ಉನ್ನತ ಮಟ್ಟಕ್ಕೆ ಏರಿದ್ದೇವೆ. ಹೀಗಾಗಿ ನಾವು ಮತ್ತೊಬ್ಬರಿಗೆ ಮಾದರಿಯಾಗುವಂತೆ ಬದುಕುವುದು ನಮ್ಮ ಕರ್ತವ್ಯ, ನಿಮಗೆ ಶುಭವಾಗಲಿ" ಎಂದಿದ್ದಾರೆ.
**
|
ಪ್ರತಾಪ್ ಸಿಂಹ ಕ್ರಮಕ್ಕೆ ಬೆಂಬಲ
ಪ್ರತಾಪ್ ಸಿಂಹ ಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ, ಅನೇಕರು ಟ್ವೀಟ್ ಮಾಡಿದ್ದಾರೆ, ಕೆಲವರು ಪ್ರತಾಪ್ ಅವರನ್ನು ಎರಡನೇ ಸಾವರ್ಕರ್ ಎಂದು ಮೂದಲಿಸಿದ್ದಾರೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications