ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ: ಸಚಿವ ಎಸ್.ಟಿ ಸೋಮಶೇಖರ್
ಮೈಸೂರು, ನವೆಂಬರ್ 8: ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ತಳಮಟ್ಟದಿಂದ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೆ ನಾವು ಶ್ರಮ ಹಾಕುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬೆಟ್ಟದಪುರದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿ, ಶೀಘ್ರದಲ್ಲೇ ಗ್ರಾಮ ಪಂಚಾಯತಿ ಚುನಾವಣೆಯನ್ನು ಘೋಷಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಾವು ತ್ವರಿತವಾಗಿ ಸಂಘಟನೆ ಮಾಡಿ ಕಾರ್ಯಕರ್ತರು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು. ನಿಮ್ಮ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಹೇಗೆ ನಮ್ಮ ಚುನಾವಣೆಗಳಿಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೆವೋ, ಹಾಗೇ ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೂ ನಾವು ಅದೇ ರೀತಿ ದುಡಿಯಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ಜಿಲ್ಲಾ ಪ್ರವಾಸ ಕೈಗೊಂಡಿದ್ದೇನೆ ಎಂದು ಹೇಳಿದರು.

ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರವಧಿ 5 ವರ್ಷಕ್ಕೆ
ಕಳೆದ ಸರ್ಕಾರದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರವಧಿ 5 ವರ್ಷಕ್ಕೆ ಹಾಗೂ ಮೀಸಲಾತಿಯನ್ನು 10 ವರ್ಷಕ್ಕೆ ಬದಲಾವಣೆ ಮಾಡುವ ನಿಯಮವನ್ನು ತರಲಾಗಿತ್ತು. ಆದರೆ, ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಅದನ್ನು ಬದಲಾಯಿಸಿ, ಅಧಿಕಾರಾವಧಿಯನ್ನು ತಲಾ ಎರಡೂವರೆ ವರ್ಷ ಹಾಗೂ ಮೀಸಲಾತಿಯನ್ನು 5 ವರ್ಷಕ್ಕೆ ನಿಗದಿಪಡಿಸಿದ್ದಾರೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಈ ಕಾನೂನು ತೊಡಕನ್ನು ನಿವಾರಿಸಿದೆ
ನಾವು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದರಿಂದ ರೈತರಿಗೆ ಈಗ ತಮ್ಮ ಬೆಳೆಯನ್ನು ರಾಜ್ಯದಲ್ಲಿ ಬೇಕಾದರೂ ಮಾರಾಟ ಮಾಡುವ ಅಧಿಕಾರವನ್ನು ನೀಡಿದಂತಾಗಿದೆ. ಜೊತೆಗೆ ಎಪಿಎಂಸಿ ಪರವಾನಗಿ ಹೊಂದಿ ಬೇರೆಡೆ ಮಾರಾಟ ಮಾಡಿದರೆ ದಂಡ ವಿಧಿಸುವುದಲ್ಲದೆ, ಪರವಾನಗಿಯನ್ನೇ ರದ್ದುಪಡಿಸಲಾಗುತ್ತಿತ್ತು. ಈಗ ನಮ್ಮ ಸರ್ಕಾರ ಈ ಕಾನೂನು ತೊಡಕನ್ನು ನಿವಾರಿಸಿದೆ ಎಂದು ತಿಳಿಸಿದರು.
ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಸಹ ರೈತರಿಗೆ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲಗಳು ಆಗುತ್ತಿದೆ ಎಂದು ಸಚಿವರು ತಿಳಿಸಿದರು.

ಬಿಜೆಪಿ ಸೇರ್ಪಡೆಗೊಂಡ ಯುವ ಸಮೂಹ
ದಸರಾಕ್ಕೆ ಸಂಬಂಧಿಸಿದಂತೆ ಲೆಕ್ಕ ಕೊಡುವುದಿಲ್ಲ ಎಂಬ ಆರೋಪ ಪ್ರತಿವರ್ಷ ಕೇಳಿ ಬರುತ್ತಿತ್ತು. ಹಾಗಾಗಿ ದಸರಾ ಮುಗಿದ ತಕ್ಷಣ ಲೆಕ್ಕ ಕೊಟ್ಟಿದ್ದೇವೆ. ಒಂದೂವರೆ ಕೋಟಿಯಲ್ಲಿ 10 ದಿನದ ದಸರಾ ಆಚರಣೆ ಮಾಡಿ ಸರಳವಾಗಿ ಮಾಡಿ ತೋರಿಸಲಾಗಿದೆ. ಒಟ್ಟಾರೆಯಾಗಿ 7.8 ಕೋಟಿ ರುಪಾಯಿ ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡ ಯುವಕರಿಗೆ, ಪಕ್ಷದ ಶಾಲು ನೀಡುವ ಮೂಲಕ ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು. ಮಾಜಿ ಶಾಸಕರಾದ ಬಸವರಾಜಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕರ್ತರ ಬೆನ್ನಿಗೆ ಪಕ್ಷ ಇದೆ
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಹುಣಸವಾಡಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್ ಮಾತನಾಡಿ, ಕಾರ್ಯಕರ್ತರ ಬೆನ್ನಿಗೆ ಪಕ್ಷ ಹಾಗೂ ಉಸ್ತುವಾರಿ ಸಚಿವರಾಗಿ ತಾವು ಬೆಂಬಲವಾಗಿ ನಿಲ್ಲುವುದಲ್ಲದೆ, ಕಾನೂನುಬದ್ಧವಾದ ಎಲ್ಲ ರೀತಿಯ ಕೆಲಸಗಳನ್ನು ಮಾಡಿಕೊಡುತ್ತೇನೆ.
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವ ಮೂಲಕ ಮುಂದಿನ ತಾಲೂಕು, ಜಿಲ್ಲಾ ಮಟ್ಟದ ಚುನಾವಣೆಗಳಲ್ಲಿಯೂ ಗೆಲುವಿನ ಚುಕ್ಕಾಣಿಯನ್ನು ಹಿಡಿಯಬೇಕು ಎಂದು ಕರೆ ನೀಡಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications