ಮಹಿಷ ದಸರಾ ಆಚರಣೆಗೆ ಬಿಜೆಪಿ ಎಸ್ ಸಿ ಮೋರ್ಚಾ ವಿರೋಧ
ಮೈಸೂರು, ಸೆಪ್ಟೆಂಬರ್ 29: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವೇಳೆಯಲ್ಲಿ ಮಹಿಷ ದಸರಾ ಆಚರಣೆಗೆ ಕೆಲವರು ಮುಂದಾಗಿರುವುದಕ್ಕೆ ಬಿಜೆಪಿ ಎಸ್ ಸಿ ಮೋರ್ಚಾ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಮೈಸೂರು ದಸರಾ ಸಾಂಸ್ಕೃತಿಕ ಹಿರಿಮೆ- ಗರಿಮೆಯನ್ನು ವಿಶ್ವಕ್ಕೆ ಸಾರಿರುವ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಈ ಸಂದರ್ಭದಲ್ಲಿ ರಾಕ್ಷಸ ಗಣವನ್ನು ಪೂಜಿಸುವ ಮಹಿಷ ದಸರಾ ಆಚರಣೆಯನ್ನು ತೀವ್ರವಾಗಿ ವಿರೋಧಿಸುವುದಾಗಿ ಮೈಸೂರು ನಗರ ಬಿಜೆಪಿ ಎಸ್.ಸಿ.ಮೋರ್ಚಾ ಪದಾಧಿಕಾರಿಗಳು ತಿಳಿಸಿದರು. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿ.ಸೋಮಸುಂದರ್, ಭಾರತೀಯ ಸಂಸ್ಕೃತಿಯಲ್ಲಿ ದೈವೀ ಶಕ್ತಿಯನ್ನು ಪೂಜಿಸುತ್ತೇವೆಯೇ ಹೊರತು ಹಿಂಸೆಯ ಪ್ರತಿರೂಪವಾದ ಮಹಿಷ, ರಾವಣ, ಶೂರ್ಪನಕಿ ಮುಂತಾದ ರಾಕ್ಷಸ ಗಣವನ್ನು ಪೂಜಿಸುವ ಪರಿಪಾಠ ನಮ್ಮಲ್ಲಿ ಬೆಳೆದು ಬಂದಿಲ್ಲ ಎಂದರು.
ಮಹಿಷ ದಸರಾ ಆಚರಣೆಗೆ ದಲಿತ ಸಮುದಾಯವನ್ನು ಎಳೆದು ತರುವುದು ಸಮಂಜಸವಲ್ಲ. ಹಳೇ ಮೈಸೂರು ಭಾಗದಲ್ಲಿ ಯಾವುದೇ ದಲಿತ ಕೇರಿಗೆ ಹೋದರೂ ಚಾಮುಂಡೇಶ್ವರಿ ತಾಯಿಯ ದೇವಾಲಯವಿರುವುದು ಕಂಡು ಬರುತ್ತದೆ. ಪ್ರತಿಯೊಬ್ಬ ದಲಿತರ ಮನೆಗಳಲ್ಲಿ ಮಹಿಷಾಸುರನನ್ನು ವಧೆ ಮಾಡುತ್ತಿರುವ ಚಾಮುಂಡೇಶ್ವರಿಯ ಫೋಟೊಗೆ ಪೂಜಿಸುವುದನ್ನು ಕಾಣುತ್ತೇವೆ. ಹೀಗಿರುವಾಗ ದಲಿತ ಸಮುದಾಯವನ್ನು ದಸರಾ ಆಚರಣೆಗೆ ವಿರೋಧವಿದೆ ಎಂಬ ರೀತಿಯಲ್ಲಿ ಭಾವನೆ ಮೂಡಿಸುವ ಪ್ರಯತ್ನ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಹಿಂಸೆಯ ಪ್ರತಿರೂಪವಾದ ಮಹಿಷನನ್ನು ಆರಾಧಿಸುವುದು ಖಂಡನೀಯ. ಅಲ್ಲದೇ ಈ ಸಂಬಂಧ ಡಾ.ಪ್ರೊ.ಮಹೇಶ್ ಚಂದ್ರ ಗುರು ತಮ್ಮ ನಾಮಧೇಯದ ಬಗ್ಗೆ ನೀಡಿರುವ ಸೃಷ್ಟೀಕರಣ ಹಾಸ್ಯಾಸ್ಪದವಾಗಿದೆ ಎಂದ ಅವರು, 60 ವರ್ಷಗಳವರೆಗೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಪ್ರೊ.ಮಹೇಶ್ ಚಂದ್ರಗುರು ಅವರಿಗೆ ಕನಿಷ್ಠ ಜ್ಞಾನವೂ ಇಲ್ಲದಿರುವಂತೆ ವರ್ತಿಸುವುದು ಇವರ ಘನತೆಗೆ ಶೋಭೆ ತರುವಂಥದ್ದಲ್ಲ ಎಂದರು.
ಮಹಿಷ ರಾಜ ಎಂಬುದಕ್ಕೆ ಯಾವುದೇ ಶಾಸನ ಬದ್ಧ ಪುರಾವೆಗಳಿಲ್ಲ. ಸಂಶೋಧಿಸಿದ ಅಧ್ಯಯನ ಗ್ರಂಥಗಳಲ್ಲಿ ಇದರ ಉಲ್ಲೇಖವಿಲ್ಲ. ಯಾವುದೋ ಒಂದು ವಿಚಾರವನ್ನು ಇಟ್ಟುಕೊಂಡು ಅದೇ ಸತ್ಯ ಎಂದು ಬಿಂಬಿಸಲು ಪ್ರೊ.ಭಗವಾನ್ ಮತ್ತು ಮಹೇಶ್ ಚಂದ್ರಗುರು ಅವರು ಪ್ರಯತ್ನಿಸುತ್ತಿರುವುದು ಖಂಡನಾರ್ಹ. ಇನ್ನು ಮುಂದಿನ ದಿನಗಳಲ್ಲಿ ಅಸಂಬದ್ಧ ಹೇಳಿಕೆಗಳನ್ನು ನೀಡುವುದನ್ನು ಮುಂದುವರಿಸಿದಲ್ಲಿ ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications