ಮಹಿಷ ದಸರಾ ಆಚರಣೆಗೆ ಬಿಜೆಪಿ ಎಸ್ ಸಿ ಮೋರ್ಚಾ ವಿರೋಧ
ಮೈಸೂರು, ಸೆಪ್ಟೆಂಬರ್ 29: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವೇಳೆಯಲ್ಲಿ ಮಹಿಷ ದಸರಾ ಆಚರಣೆಗೆ ಕೆಲವರು ಮುಂದಾಗಿರುವುದಕ್ಕೆ ಬಿಜೆಪಿ ಎಸ್ ಸಿ ಮೋರ್ಚಾ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಮೈಸೂರು ದಸರಾ ಸಾಂಸ್ಕೃತಿಕ ಹಿರಿಮೆ- ಗರಿಮೆಯನ್ನು ವಿಶ್ವಕ್ಕೆ ಸಾರಿರುವ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಈ ಸಂದರ್ಭದಲ್ಲಿ ರಾಕ್ಷಸ ಗಣವನ್ನು ಪೂಜಿಸುವ ಮಹಿಷ ದಸರಾ ಆಚರಣೆಯನ್ನು ತೀವ್ರವಾಗಿ ವಿರೋಧಿಸುವುದಾಗಿ ಮೈಸೂರು ನಗರ ಬಿಜೆಪಿ ಎಸ್.ಸಿ.ಮೋರ್ಚಾ ಪದಾಧಿಕಾರಿಗಳು ತಿಳಿಸಿದರು. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿ.ಸೋಮಸುಂದರ್, ಭಾರತೀಯ ಸಂಸ್ಕೃತಿಯಲ್ಲಿ ದೈವೀ ಶಕ್ತಿಯನ್ನು ಪೂಜಿಸುತ್ತೇವೆಯೇ ಹೊರತು ಹಿಂಸೆಯ ಪ್ರತಿರೂಪವಾದ ಮಹಿಷ, ರಾವಣ, ಶೂರ್ಪನಕಿ ಮುಂತಾದ ರಾಕ್ಷಸ ಗಣವನ್ನು ಪೂಜಿಸುವ ಪರಿಪಾಠ ನಮ್ಮಲ್ಲಿ ಬೆಳೆದು ಬಂದಿಲ್ಲ ಎಂದರು.
ಮಹಿಷ ದಸರಾ ಆಚರಣೆಗೆ ದಲಿತ ಸಮುದಾಯವನ್ನು ಎಳೆದು ತರುವುದು ಸಮಂಜಸವಲ್ಲ. ಹಳೇ ಮೈಸೂರು ಭಾಗದಲ್ಲಿ ಯಾವುದೇ ದಲಿತ ಕೇರಿಗೆ ಹೋದರೂ ಚಾಮುಂಡೇಶ್ವರಿ ತಾಯಿಯ ದೇವಾಲಯವಿರುವುದು ಕಂಡು ಬರುತ್ತದೆ. ಪ್ರತಿಯೊಬ್ಬ ದಲಿತರ ಮನೆಗಳಲ್ಲಿ ಮಹಿಷಾಸುರನನ್ನು ವಧೆ ಮಾಡುತ್ತಿರುವ ಚಾಮುಂಡೇಶ್ವರಿಯ ಫೋಟೊಗೆ ಪೂಜಿಸುವುದನ್ನು ಕಾಣುತ್ತೇವೆ. ಹೀಗಿರುವಾಗ ದಲಿತ ಸಮುದಾಯವನ್ನು ದಸರಾ ಆಚರಣೆಗೆ ವಿರೋಧವಿದೆ ಎಂಬ ರೀತಿಯಲ್ಲಿ ಭಾವನೆ ಮೂಡಿಸುವ ಪ್ರಯತ್ನ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಹಿಂಸೆಯ ಪ್ರತಿರೂಪವಾದ ಮಹಿಷನನ್ನು ಆರಾಧಿಸುವುದು ಖಂಡನೀಯ. ಅಲ್ಲದೇ ಈ ಸಂಬಂಧ ಡಾ.ಪ್ರೊ.ಮಹೇಶ್ ಚಂದ್ರ ಗುರು ತಮ್ಮ ನಾಮಧೇಯದ ಬಗ್ಗೆ ನೀಡಿರುವ ಸೃಷ್ಟೀಕರಣ ಹಾಸ್ಯಾಸ್ಪದವಾಗಿದೆ ಎಂದ ಅವರು, 60 ವರ್ಷಗಳವರೆಗೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಪ್ರೊ.ಮಹೇಶ್ ಚಂದ್ರಗುರು ಅವರಿಗೆ ಕನಿಷ್ಠ ಜ್ಞಾನವೂ ಇಲ್ಲದಿರುವಂತೆ ವರ್ತಿಸುವುದು ಇವರ ಘನತೆಗೆ ಶೋಭೆ ತರುವಂಥದ್ದಲ್ಲ ಎಂದರು.
ಮಹಿಷ ರಾಜ ಎಂಬುದಕ್ಕೆ ಯಾವುದೇ ಶಾಸನ ಬದ್ಧ ಪುರಾವೆಗಳಿಲ್ಲ. ಸಂಶೋಧಿಸಿದ ಅಧ್ಯಯನ ಗ್ರಂಥಗಳಲ್ಲಿ ಇದರ ಉಲ್ಲೇಖವಿಲ್ಲ. ಯಾವುದೋ ಒಂದು ವಿಚಾರವನ್ನು ಇಟ್ಟುಕೊಂಡು ಅದೇ ಸತ್ಯ ಎಂದು ಬಿಂಬಿಸಲು ಪ್ರೊ.ಭಗವಾನ್ ಮತ್ತು ಮಹೇಶ್ ಚಂದ್ರಗುರು ಅವರು ಪ್ರಯತ್ನಿಸುತ್ತಿರುವುದು ಖಂಡನಾರ್ಹ. ಇನ್ನು ಮುಂದಿನ ದಿನಗಳಲ್ಲಿ ಅಸಂಬದ್ಧ ಹೇಳಿಕೆಗಳನ್ನು ನೀಡುವುದನ್ನು ಮುಂದುವರಿಸಿದಲ್ಲಿ ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications