Krishnaraja: ಮೋದಿಯಿಂದ ಬೆನ್ನು ತಟ್ಟಿಸಿಕೊಂಡರೂ ರಾಮದಾಸ್ಗೆ ಸಿಗದ ಬಿಜೆಪಿ ಟಿಕೆಟ್
ಮೈಸೂರು, ಏಪ್ರಿಲ್ 17: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಬಾರಿ ಹತ್ತು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಹೈಮಾಂಡ್ ಅಂತಿಮ ಮಾಡಿದೆ. ಮೂರನೇ ಪಟ್ಟಿ ಬಿಡುಗಡೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದ್ದು, ಕೆ.ಆರ್ ಕ್ಷೇತ್ರದ ಶಾಸಕ ರಾಮದಾಸ್ ಈ ಬಾರಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದಾರೆ.
ರಾಮದಾಸ್ ಅವರ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದರೂ ಕೂಡ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಹೈಮಾಂಡ್ ಅವಕಾಶ ನೀಡಿಲ್ಲ ಬದಲಿಗೆ, ಆರ್ಎಸ್ಎಸ್ ಮುಖಂಡ ಬಿ.ಎಲ್. ಸಂತೋಷ್ ಆಪ್ತ ಮೈಸೂರು ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ್ ಅವರಿಗೆ ಬಿಜೆಪಿ ಮಣೆ ಹಾಕಿದೆ.

ಪ್ರಬಲ ವಿಪ್ರ ಸಮುದಾಯ ರಾಮದಾಸ್ ವಿರುದ್ಧ ತಿರುಗಿ ಬಿದ್ದಿತ್ತು ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಸಮುದಾಯದ ಮುಖಂಡರು ದೂರು ನೀಡಿದ್ದರು 'ರಾಮದಾಸ್ ಅವರಿಗೆ ಸಮುದಾಯದ ಬಗ್ಗೆ ಕಾಳಜಿ ಇಲ್ಲ. ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಹಾಗಾಗಿ ಈ ಬಾರಿ ಟಿಕೆಟ್ ನೀಡಬೇಡಿ' ಎಂಬ ಮನವಿಯನ್ನು ವಿಪ್ರ ಸಮುದಾಯ ಮುಖಂಡರು ದೆಹಲಿಯ ನಾಯಕರಲ್ಲಿ ಸಲ್ಲಿಸಿದ್ದರು. ಆದರೂ ಟಿಕೆಟ್ ನಿರೀಕ್ಷೆಯಲ್ಲಿದ್ದ ರಾಮದಾಸ್ ಕ್ಷೇತ್ರದ ಮನೆ ಮನೆಗೆ ತೆರಳಿ ಭರ್ಜರಿ ಪ್ರಚಾರ ನಡೆಸಿದ್ದರು.
ಕೆಆರ್ ಕ್ಷೇತ್ರ ಕಳೆದ 30 ವರ್ಷದಿಂದ ಬಿಜೆಪಿ ಭದ್ರಕೋಟೆ. ಬಹುಪಾಲು ಇಲ್ಲಿನ ಜನ ಬಿಜೆಪಿಗೆ ಜೈ ಅಂದಿದ್ದಾರೆ . ಆದರೆ, ಹಾಲಿ ಶಾಸಕ ರಾಮದಾಸ್ ಅವರಿಗೆ ಟಿಕೆಟ್ ನೀಡದಂತೆ ಬ್ರಾಹ್ಮಣ ಹಾಗೂ ಲಿಂಗಾಯತ ಸಮುದಾಯದ ಮುಖಂಡರು ಹೈ ಕಮಾಂಡ್ ಗೆ ಮನವಿ ಮಾಡಿದ್ದರು. ಈ ಕಾರಣದಿಂದಲೇ ಸಾಕಷ್ಟು ಅಳೆದು ತೂಗಿ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಈಗಾಗಲೇ ಶಾಸಕ ರಾಮದಾಸ್ ವಿರುದ್ಧ ಸಾಕಷ್ಟು ದೂರುಗಳು ಕೇಳಿಬಂದಿದೆ ಎನ್ನಲಾಗಿದೆ.
ಇನ್ನು ಬಿಜೆಪಿ ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿ ರಾಮದಾಸ್ ಹೆಸರು ಅಂತಿಮವಾಗದ ಹಿನ್ನೆಲೆಯಲ್ಲಿ ಈ ಹಿಂದೆ ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಬೆಂಬಲಿಗರು ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಕ್ಷೇತ್ರದಲ್ಲಿ ಒಂದು ಬಣ ರಾಮದಾಸ್ಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರೆ, ಇನ್ನೊಂದು ಬಣ ರಾಮದಾಸ್ಗೆ ವಿರುದ್ಧವಾಗಿತ್ತು. ಸದ್ಯ ಕೆ.ಆರ್. ಕ್ಷೇತ್ರದ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು, ಶ್ರೀವತ್ಸ್ಗೆ ಬಿಜೆಪಿ ಸ್ಪರ್ಧಿಸಲು ಅವಕಾಶ ನೀಡಿದೆ.
ರಾಮದಾಸ್ ಮುಂದಿನ ನಡೆ ಏನು?
ಬಿಜೆಪಿ ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ಎಸ್.ಎ.ರಾಮದಾಸ್ ಮುಂದಿನ ನಡೆ ಕುತೂಹಲ ಮೂಡಿಸಿದೆ. ರಾಮದಾಸ್ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ರಾಮದಾಸ್ ಬೆಂಬಲಿಗರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. ಆದರೆ ಟಿಕೆಟ್ ವಂಚಿತರಾಗಿರುವ ರಾಮದಾಸ್ ಈ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ರಾಮದಾಸ್ ಪಕ್ಷೇತರರಾಗಿ ಸ್ಪರ್ಧಿಸುತ್ತಾರೋ ಅಥವಾ ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎನ್ನುವ ತಮ್ಮ ಮಾತಿನ ಮೇಲೆ ನಿಲ್ಲುತ್ತಾರೋ, ಅಥವಾ ಪಕ್ಷದ ತೀರ್ಮಾಕ್ಕೆ ಬದ್ಧರಾಗಿರುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications