ನಾಗರಹೊಳೆಯಲ್ಲಿ ಮತ್ತೆ ಕಾಣಿಸಿಕೊಂಡ ಭಗೀರ: ಪ್ರವಾಸಿಗರ ಮುಖದಲ್ಲಿ ಮಂದಹಾಸ
ಮೂರು ತಿಂಗಳಿನಿಂದ ಕಣ್ಮರೆಯಾಗಿದ್ದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಐಕಾನ್ ಭಗೀರ ಮತ್ತೆ ಇದೀಗ ಪ್ರತ್ಯಕ್ಷನಾಗಿದ್ದಾನೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೈಸೂರು, ಫೆಬ್ರವರಿ, 27: ಮೂರು ತಿಂಗಳಿನಿಂದ ಕಣ್ಮರೆಯಾಗಿದ್ದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಐಕಾನ್ ಭಗೀರ ಮತ್ತೆ ಪ್ರತ್ಯಕ್ಷನಾಗಿದ್ದಾನೆ. ಭಗೀರನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆಗಳಿಗೆ ನಾಗರಹೊಳೆ ಅಭಯಾರಣ್ಯ ನೆಚ್ಚಿನ ತಾಣವಾಗಿದೆ. ಸಾಮಾನ್ಯವಾಗಿ ಭಗೀರಗಳು ಹೆಚ್ಚು ಮಳೆ ಸುರಿಯುವ, ಕಡಿಮೆ ಸೂರ್ಯನ ಬೆಳಕಿರುವ, ದಟ್ಟಾರಣ್ಯದಲ್ಲಿ ವಾಸಿಸಲು ಇಷ್ಟಪಡುತ್ತವೆ. ಇಂತಹ ತಾಣಗಳಲ್ಲಿ ಸಾಕಷ್ಟು ಆಹಾರ ಸಿಗುವುದರಿಂದ ಮತ್ತು ಸುರಕ್ಷತೆಯ ದೃಷ್ಟಿಯಿಂದ ಅವುಗಳು ಇಲ್ಲಿಯೇ ನೆಲೆಯೂರುತ್ತವೆ.

ಪ್ರವಾಸಿಗರಿಗೆ ಅಚ್ಚುಮೆಚ್ಚಾದ ಭಗೀರ
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕಬಿನಿ ಹಿನ್ನೀರಿನ ದಮ್ಮನಕಟ್ಟೆಗೆ ತೆರಳುವ ವನ್ಯಜೀವಿ ಪ್ರಿಯರಿಗೆ ನಿರಂತರವಾಗಿ ದರ್ಶನ ನೀಡುವ ಮೂಲಕ ಸದಾ ಪ್ರೀತಿಪಾತ್ರನಾಗಿದ್ದ. ಆದರೆ ಕಳೆದ ಮೂರು ತಿಂಗಳಿಂದ ಆ ಭಾಗದಲ್ಲಿ ಯಾರ ಕಣ್ಣಿಗೂ ಕಾಣಿಸಿರಲಿಲ್ಲ. ಅರಣ್ಯ ಅಧಿಕಾರಿಗಳು ವಾಚ್ ಟವರ್ ಹಾಗೂ ಫೈರ್ಲೈನ್ ಕಾಮಗಾರಿ ಪರಿಶೀಲನೆ ಮಾಡುವಾಗ ಅಪರೂಪದ ಹಾಗೂ ಸಾಯಾ ಮಾಯಾ, ಕರಿಯಾ, ಭಗೀರ ಎಂದು ಕರೆಸಿಕೊಳ್ಳುವ ಕಪ್ಪು ಚಿರತೆ ಮತ್ತೆ ಅದೇ ಜಾಗದಲ್ಲಿ ಕಾಣಿಸಿಕೊಂಡಿದೆ.
ಕಪ್ಪು ಚಿರತೆಯ ವಿಡಿಯೋ ವೈರಲ್
ಕಪ್ಪು ಚಿತರತೆಯ ವಿಡಿಯೋ ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಗಮನಿಸಿದ ಜನತೆ ಭಗೀರನಿಗೆ ಯಾವುದೇ ಅಪಾಯವಾಗಿಲ್ಲ. ಆತನನ್ನು ಮತ್ತೊಮ್ಮೆ ನೋಡುವ ಅವಕಾಶವಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಕೆಲವು ದಿನಗಳ ಕಾಲ ಭಗೀರ ಎಂದು ಕರೆಸಿಕೊಲ್ಳುತ್ತಿದ್ದ ಕರಿ ಚಿರತೆ ಕಾಣೆಯಾಗಿತ್ತು. ಇದು ಈ ಮೊದಲು ಪ್ರವಾಸಿಗರಿಗೆ ಹಾಗಾಗ ದರ್ಶನ ಕೊಡುತ್ತಿತ್ತು.

ಕೆಲವು ದಿನಗಳ ಹಿಂದೆಯಷ್ಟೇ ಇದು ನಾಪತ್ತೆಯಾಗಿದ್ದು, ಪ್ರವಾಸಿಗರಿಗೆ ಅದನ್ನು ನೋಡುವ ಭಾಗ್ಯವೇ ಸಿಗದಂತಾಗಿತ್ತು. ಇದೀಗ ಈ ಚಿರತೆ ಪ್ರತ್ಯಕ್ಷ ಆಗಿದ್ದು, ಅಲ್ಲಿನ ಸುತ್ತಮುತ್ತಲಿನ ಜನರ ಮುಖದಲ್ಲಿ ಸಂತಸ ತರಿಸಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications