ಮೈಸೂರು: ಅಮಾವಾಸ್ಯೆ ದಿನವೇ ಆಸ್ಪತ್ರೆಯಲ್ಲಿ ವಾಮಾಚಾರ

ಮೈಸೂರು, ಆಗಸ್ಟ್ 21 : ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹೊಸೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಮಾವಾಸ್ಯೆ ದಿನವೇ ವಾಮಾಚಾರ ಮಾಡಲಾಗಿದ್ದು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಬೆಚ್ಚಿ ಬಿದ್ದಿದ್ದಾರೆ.

ಹೊಸೂರು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಹೆಚ್.ಡಿ.ಶರತ್ ಬಾಬು ಅವರ ಕಚೇರಿಯ ಮೇಜಿನ ಮೇಲೆ ನಿಂಬೆಹಣ್ಣು, ಅರಿಶಿಣ-ಕುಂಕುಮ ಹಾಗೂ ಮೊಟ್ಟೆ ಕಂಡುಬಂದಿದೆ. ಶನಿವಾರ ಕರ್ತವ್ಯ ಮುಗಿಸಿ ತೆರಳಿದ್ದ ಡಾ.ಶರತ್ ಅವರಿಗೆ ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಬಂದಾಗ ಬೆಳಕಿಗೆ ಬಂದಿದೆ.

Black magic in Hosur govt hospital at Mysuru district

ಈ ಪ್ರಕರಣದಿಂದ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ಮನೆ ಮಾಡಿದ್ದು, ನಿರ್ಭಯದಿಂದ ಕರ್ತವ್ಯ ನಿರ್ವಹಿಸಲು ಸಿಬ್ಬಂದಿ ಹಿಂದೇಟು ಹಾಕುವಂತಾಗಿದೆ. ಮತ್ತೊಂದೆಡೆ ರೋಗಿಗಳು ಭಯದಿಂದಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ

ದಿನದ 24 ತಾಸು ತೆರೆದಿರುವ ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ರಾತ್ರಿ ಒಬ್ಬ ನರ್ಸ್ ಹಾಗೂ ಡಿ ಗ್ರೂಫ್ ನೌಕರ ಕರ್ತವ್ಯದಲ್ಲಿದ್ದರು. ಆದರೆ ಆ ವೇಳೆಯಲ್ಲೆ ಈ ಪ್ರಸಂಗ ನಡೆದಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ಈ ವಾಮಾಚಾರವನ್ನು ಯಾರು? ಯಾರ ಮೇಲೆ ಮಾಡಿಸಿದ್ದಾರೆ ಎಂಬುದು ಮಾತ್ರ ಕುತೂಹಲಕಾರಿಯಾಗಿದೆ. ಘಟನೆ ಕುರಿತು ಟಿಹೆಚ್ ಓ ಹಾಗೂ ಡಿಹೆಚ್ ಓಗೆ ಮಾಹಿತಿ ನೀಡಿದ್ದು, ಈ ಸಂಬಂಧ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶರತ್ ಬಾಬು ಕೆ.ಆರ್.ನಗರ ಪೊಲೀಸರಿಗೆ ದೂರು ನೀಡಿದ್ದಾರೆ.

. ಘಟನೆಯ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಚೇತನ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+