ಮಳೆಯ ಹಿನ್ನೆಲೆಯಲ್ಲಿ ರಂಗನತಿಟ್ಟು ಪಕ್ಷಿಧಾಮದ ಬೋಟಿಂಗ್ ಸ್ಥಗಿತ
ರಂಗನತಿಟ್ಟು, ಜುಲೈ 22: "ನೀರಿನ ಹರಿವು ಹೆಚ್ಚಾದ ಕಾರಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಸಿಗರಾಗಿ ನಡೆಸಲಾಗುತ್ತಿದ್ದ ಬೋಟಿಂಗ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ಮಳೆ ಪ್ರಮಾಣ ಹೆಚ್ಚಳಗೊಂಡಿದ್ದು, ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಬೋಟಿಂಗ್ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ. ಮತ್ತೆ ಆರಂಭವಾಗುವ ದಿನಾಂಕವನ್ನು ಪ್ರಕಟಿಸಲಾಗುವುದು" ಎಂದು ಉಪ ವಲಯ ಅರಣ್ಯಾಧಿಕಾರಿ ಪುಟ್ಟಮಾದೇಗೌಡ ತಿಳಿಸಿದ್ದಾರೆ.
ಶ್ರೀರಂಗಪಟ್ಟಣದ ಬಳಿ ಇರುವ ಪಕ್ಷಿಧಾಮಕ್ಕೆ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ನದಿಯ ಎರಡೂ ಭಾಗದಲ್ಲಿ ಗೂಡು ಕಟ್ಟಿ ವಾಸಿಸುವ ಪಕ್ಷಿಗಳ ಫೋಟೋ ಕ್ಲಿಕ್ಕಿಸುವ ಎಷ್ಟೋ ಮಂದಿಗೆ ಇದು ಬಹು ನೆಚ್ಚಿನ ತಾಣ. ಇದೀಗ ಕೆಆರ್ ಎಸ್ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.
ರಂಗನತಿಟ್ಟು ಪಕ್ಷಿಧಾಮದ ಆವರಣಕ್ಕೆ ಪ್ರವಾಸಿಗರು ಭೇಟಿ ನೀಡಬಹುದು. ಇದಕ್ಕೆ ಯಾವುದೇ ಅಡ್ಡಿಯಿಲ್ಲ. ಆದರೆ ಬೋಟಿಂಗ್ ಹೋಗಲು ಆಗುವುದಿಲ್ಲ. ಅಲ್ಲಿನ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ಯಾವುದೇ ಅಡ್ಡಿ ಇಲ್ಲ. ಆದರೆ ಇದರಿಂದಾಗಿ ಪಕ್ಷಿಗಳಿಗೆ ಯಾವುದೇ ತೊಂದರೆ ಇಲ್ಲ.

ಕೆಆರ್ ಎಸ್ ನಿಂದ 1 ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ಪ್ರಮಾಣದ ನೀರು ಹೊರಬಂದಲ್ಲಿ ಮಾತ್ರ ಪಕ್ಷಿಗಳಿಗೆ ತೊಂದರೆಯಾಗುತ್ತದೆ. 1990ರ ದಶಕದಲ್ಲಿ ಈ ರೀತಿ ತೊಂದರೆಯಾಗಿತ್ತು. "ಪ್ರವಾಸಿಗರ ಸುರಕ್ಷತೆ ನಮಗೆ ಮುಖ್ಯ. ಈ ಹಿನ್ನೆಲೆಯಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ" ಎಂದು ಉಪ ವಲಯ ಅರಣ್ಯಾಧಿಕಾರಿ ಹೇಳಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications