ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಳೆಯ ಹಿನ್ನೆಲೆಯಲ್ಲಿ ರಂಗನತಿಟ್ಟು ಪಕ್ಷಿಧಾಮದ ಬೋಟಿಂಗ್ ಸ್ಥಗಿತ

By ಮೈಸೂರು ಪ್ರತಿನಿಧಿ
|
Google Oneindia Kannada News

ರಂಗನತಿಟ್ಟು, ಜುಲೈ 22: "ನೀರಿನ ಹರಿವು ಹೆಚ್ಚಾದ ಕಾರಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಸಿಗರಾಗಿ ನಡೆಸಲಾಗುತ್ತಿದ್ದ ಬೋಟಿಂಗ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ಮಳೆ ಪ್ರಮಾಣ ಹೆಚ್ಚಳಗೊಂಡಿದ್ದು, ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಬೋಟಿಂಗ್ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ. ಮತ್ತೆ ಆರಂಭವಾಗುವ ದಿನಾಂಕವನ್ನು ಪ್ರಕಟಿಸಲಾಗುವುದು" ಎಂದು ಉಪ ವಲಯ ಅರಣ್ಯಾಧಿಕಾರಿ ಪುಟ್ಟಮಾದೇಗೌಡ ತಿಳಿಸಿದ್ದಾರೆ.

ಶ್ರೀರಂಗಪಟ್ಟಣದ ಬಳಿ ಇರುವ ಪಕ್ಷಿಧಾಮಕ್ಕೆ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ನದಿಯ ಎರಡೂ ಭಾಗದಲ್ಲಿ ಗೂಡು ಕಟ್ಟಿ ವಾಸಿಸುವ ಪಕ್ಷಿಗಳ ಫೋಟೋ ಕ್ಲಿಕ್ಕಿಸುವ ಎಷ್ಟೋ ಮಂದಿಗೆ ಇದು ಬಹು ನೆಚ್ಚಿನ ತಾಣ. ಇದೀಗ ಕೆಆರ್ ಎಸ್ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.

 ಇನ್ನು ಮುಂದೆ ರಂಗನತಿಟ್ಟಿನಲ್ಲಿ ವರ್ಷ ಪೂರ್ತಿ ಪ್ರವಾಸಿಗರಿಗೆ ಬೋಟಿಂಗ್ ಅನುಭವ ಇನ್ನು ಮುಂದೆ ರಂಗನತಿಟ್ಟಿನಲ್ಲಿ ವರ್ಷ ಪೂರ್ತಿ ಪ್ರವಾಸಿಗರಿಗೆ ಬೋಟಿಂಗ್ ಅನುಭವ

ರಂಗನತಿಟ್ಟು ಪಕ್ಷಿಧಾಮದ ಆವರಣಕ್ಕೆ ಪ್ರವಾಸಿಗರು ಭೇಟಿ ನೀಡಬಹುದು. ಇದಕ್ಕೆ ಯಾವುದೇ ಅಡ್ಡಿಯಿಲ್ಲ. ಆದರೆ ಬೋಟಿಂಗ್ ಹೋಗಲು ಆಗುವುದಿಲ್ಲ. ಅಲ್ಲಿನ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ಯಾವುದೇ ಅಡ್ಡಿ ಇಲ್ಲ. ಆದರೆ ಇದರಿಂದಾಗಿ ಪಕ್ಷಿಗಳಿಗೆ ಯಾವುದೇ ತೊಂದರೆ ಇಲ್ಲ.

Boating stopped in Ranganathittu Bird Sanctuary in the wake of rain

ರಂಗನತಿಟ್ಟು ಪಕ್ಷಿಧಾಮಕ್ಕೆ ಸಿಗಲಿದೆಯೇ ಅಂತರಾಷ್ಟ್ರೀಯ ಮಾನ್ಯತೆ? ರಂಗನತಿಟ್ಟು ಪಕ್ಷಿಧಾಮಕ್ಕೆ ಸಿಗಲಿದೆಯೇ ಅಂತರಾಷ್ಟ್ರೀಯ ಮಾನ್ಯತೆ?

ಕೆಆರ್ ಎಸ್ ನಿಂದ 1 ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ಪ್ರಮಾಣದ ನೀರು ಹೊರಬಂದಲ್ಲಿ ಮಾತ್ರ ಪಕ್ಷಿಗಳಿಗೆ ತೊಂದರೆಯಾಗುತ್ತದೆ. 1990ರ ದಶಕದಲ್ಲಿ ಈ ರೀತಿ ತೊಂದರೆಯಾಗಿತ್ತು. "ಪ್ರವಾಸಿಗರ ಸುರಕ್ಷತೆ ನಮಗೆ ಮುಖ್ಯ. ಈ ಹಿನ್ನೆಲೆಯಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ" ಎಂದು ಉಪ ವಲಯ ಅರಣ್ಯಾಧಿಕಾರಿ ಹೇಳಿದ್ದಾರೆ.

English summary
Boating has been stopped at Ranganathittu Bird Sanctuary. In the wake rain, the flow in Cauvery river has significantly increased. So boating is stopped in the concern of tourists.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X