ಶನಿವಾರ ಮಾಜಿ ಪ್ರಧಾನಿ ದೇವೇಗೌಡರ ಸಾಧನೆ ಕುರಿತ ಪುಸ್ತಕ ಬಿಡುಗಡೆ
ಮೈಸೂರು, ಫೆಬ್ರವರಿ 9 : ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿಯಾಗಿದ್ದಾಗಿನ 10 ತಿಂಗಳ ಸಾಧನೆ ಕುರಿತಾದ ಕೃತಿ 'ಸಾಧನೆಯ ಶಿಖರಾರೋಹಣ' ಇದೇ ಫೆಬ್ರವರಿ 10 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಕೆ. ಎಸ್. ರಂಗಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಡಾ. ಪ್ರಧಾನ್ ಗುರುದತ್ತ ಹಾಗೂ ಡಾ ಸಿ.ನಾಗಣ್ಣ ಈ ಪುಸ್ತಕವನ್ನು ಬರೆದಿದ್ದಾರೆ. ನಾಳೆ ಸಂಜೆ 4:30ಕ್ಕೆ ಮೈಸೂರು ವಿವಿಯ ಸೆನೆಟ್ ಭವನದಲ್ಲಿ ಪುಸ್ತಕ ಬಿಡುಗಡೆಯಾಗಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಾಲಾನಂದ ಮಹಾಸ್ವಾಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ," ಎಂದು ಅವರು ಮಾಹಿತಿ ನೀಡಿದರು.
"ಪ್ರಧಾನ ಮಂತ್ರಿಯಾಗಿ ಎಚ್.ಡಿ. ದೇವೇಗೌಡರು ಮಾಡಿದ ಸಾಧನೆ ಹಾಗೂ ರಾಜತಾಂತ್ರಿಕ ನೀತಿ ಕುರಿತ ಪುಸ್ತಕ ಇದಾಗಿದೆ," ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

"ಮುಂದಿನ ತಿಂಗಳಲ್ಲಿ ಈ ಕೃತಿಯು ಹಿಂದಿ ಹಾಗೂ ಇಂಗ್ಲಿಷ್ ನಲ್ಲಿಯೂ ಹೊರಬರಲಿದೆ. ದೆಹಲಿಯಲ್ಲಿ ಈ ಕೃತಿಗಳ ಲೋಕಾರ್ಪಣೆಗೆ ಚಿಂತನೆ ನಡೆಸಲಾಗುತ್ತಿದೆ," ಎಂದ ಅವರು, "ದೇವೇಗೌಡರ ಪುಸ್ತಕದ ಜತೆ ಜತೆಗೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯ ಸಾಧನೆ ಕುರಿತು ಪುಸ್ತಕ ಶೀಘ್ರವೇ ಬಿಡುಗಡೆಯಾಗಲಿದೆ," ಎಂದು ಅವರು ಹೇಳಿದರು.
ಬಳಿಕ ಲೇಖಕ ಡಾ. ಪ್ರಧಾನ ಗುರುದತ್ತ ಅವರು ಮಾತನಾಡಿ, "ದೂರದೃಷ್ಟಿ ಇದ್ದ ಒಬ್ಬ ಅಪರೂಪದ ಆಡಳಿತಗಾರ ಹೆಚ್. ಡಿ. ದೇವೇಗೌಡರು. ಹೀಗಾಗಿ ಈ ಪುಸ್ತಕ ರಚಿಸಲು 40 ರಿಂದ 50 ಭಾರೀ ಸಂದರ್ಶನ ಮಾಡಿದ್ದೇವೆ. ಅವರಿಗೆ ನೆನಪಿನ ಶಕ್ತಿ ಆಗಾಧವಾಗಿದೆ," ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications