ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈಗಲೂ ನಿಂತಿಲ್ಲ ಬಹಿಷ್ಕಾರ ಪದ್ಧತಿ; ಗೋಳೂರು ಗ್ರಾಮದಲ್ಲಿ ಗ್ರಾಪಂ ಸದಸ್ಯೆಗೆ ಬಹಿಷ್ಕಾರ

By ಮೈಸೂರು ಪ್ರತಿನಿಧಿ
|
Google Oneindia Kannada News

ನಂಜನಗೂಡು, ಅಕ್ಟೋಬರ್ 19: ಸಾಮಾಜಿಕ ಬಹಿಷ್ಕಾರಕ್ಕೆ ಬೇಸತ್ತು ಮನನೊಂದ ಕುಟುಂಬವೊಂದು ಗ್ರಾಮ ತೊರೆಯಲು ಮುಂದಾಗಿರುವ ಘಟನೆ ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಗ್ರಾಮವನ್ನು ಪ್ರತಿನಿಧಿಸಬೇಕಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯೆ, ಗೋಳೂರು ಗ್ರಾಮದ ನಿವಾಸಿ ದೊಡ್ಡಮ್ಮ ಎಂಬುವರೇ ಸಾಮಾಜಿಕ ಬಹಿಷ್ಕಾರಕ್ಕೊಳಪಟ್ಟವರಾಗಿದ್ದಾರೆ. ಇವರು ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯ ಸದಸ್ಯರಾಗಿದ್ದು, ಪಂಚಾಯಿತಿಯಲ್ಲಿ ಅಭಿವೃದ್ಧಿ ಬಗ್ಗೆ ನಡೆದ ಮಾತಿನ ವಿಚಾರಗಳನ್ನೇ ಗುರಿಯಾಗಿಸಿಕೊಂಡು ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.

ವಿಠಲಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮನೆ ಧ್ವಂಸ, ಸಾಮಾಜಿಕ ಬಹಿಷ್ಕಾರ!ವಿಠಲಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮನೆ ಧ್ವಂಸ, ಸಾಮಾಜಿಕ ಬಹಿಷ್ಕಾರ!

ಗ್ರಾಮದಲ್ಲಿ ನಡೆಯುವ ಗ್ರಾಮ ದೇವತೆ ಹಬ್ಬಕ್ಕೆ, ಇತರೆ ಯಾವುದೇ ಹಬ್ಬ ಹರಿದಿನಗಳಿಗೆ ಅವರಿಂದ ವಂತಿಗೆ ಹಣ ಪಡೆದುಕೊಳ್ಳಬಾರದು, ಅವರನ್ನು ಯಾರೂ ತಮ್ಮ ಮನೆಗಳಿಗೆ ಸೇರಿಸಿಕೊಳ್ಳಬಾರದು, ಬೆಂಕಿ ಬಿಸಿ ನೀರನ್ನು ಕೊಡಬಾರದೆಂದು ಕಟ್ಟಾಜ್ಞೆ ವಿಧಿಸಿದ್ದಾರೆ ಎನ್ನಲಾಗಿದೆ.

Boycott For Grama Panchayat Member In Goluru Village Of Nanjanagudu

ಇದರಿಂದ ಮನನೊಂದ ದೊಡ್ಡಮ್ಮ ಒಬ್ಬ ಜನಪ್ರತಿನಿಧಿಯಾದ ತಮಗೆ ಬಹಿಷ್ಕಾರ ಹಾಕಿ ತಮನಗೆ ಮತ್ತು ತಮ್ಮ ಕುಟುಂಬಕ್ಕೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿರುವುದರಿಂದ ತಾವು ಗ್ರಾಮ ತೊರೆಯಲು ನಿರ್ಧರಿಸಿದ್ದು ಈ ಸಂಬಂಧ ನ್ಯಾಯ ದೊರಕಿಸಿಕೊಡುವಂತೆ ತಾಲೂಕು ದಂಡಾಧಿಕಾರಿಯವರಿಗೆ ದೂರು ನೀಡಿದ್ದಾರೆ.

ಚಪ್ಪಲಿ ಹಾರ ಹಾಕಿ ಹರಿಯಾಣ ರಸ್ತೆಯಲ್ಲಿ ಪ್ರೇಮಿಗಳ ಮೆರವಣಿಗೆಚಪ್ಪಲಿ ಹಾರ ಹಾಕಿ ಹರಿಯಾಣ ರಸ್ತೆಯಲ್ಲಿ ಪ್ರೇಮಿಗಳ ಮೆರವಣಿಗೆ

ದೂರು ಸ್ವೀಕರಿಸಿರುವ ನಂಜನಗೂಡಿನ ತಹಶೀಲ್ದಾರ್ ಮಹೇಶ್ ಕುಮಾರ್ ಅವರು ಗ್ರಾಮದ ಯಜಮಾನರ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿ ಸತ್ಯಾಸತ್ಯತೆ ಪರಿಶೀಲಿಸಿ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

English summary
A member of Grama panchayat decided to leave the village because of social boycott. An incident happened in Goluru village of Nanjanagudu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X