ಪುಷ್ಪಲೋಕದ ವಿಸ್ಮಯ ‘ಬ್ರಹ್ಮಕಮಲ’
ಗಿಡನೆಟ್ಟು ಪೋಷಿಸಿ ಹೂ ಬಿಡುವುದನ್ನೇ ಕಾಯುತ್ತಿದ್ದ ಪುಷ್ಪಪ್ರೇಮಿಗಳಿಗೆ ಗಿಡದಲ್ಲಿ ಗೊಂಚಲು ಗೊಂಚಲಾಗಿ ಹೂ ಬಿಟ್ಟು ಘಮ್ಮೆನ್ನುವ ಬ್ರಹ್ಮಕಮಲವನ್ನು ಕಂಡಾಗ ಎಲ್ಲಿಲ್ಲ ಸಂಭ್ರಮ ಜೊತೆಗೆ ಸಾರ್ಥಕ ಭಾವ ಮನೆ ಮಾಡುತ್ತಿದೆ.
ಒಂದಷ್ಟು ಮಂದಿ ತಮ್ಮ ಮನೆ ಮುಂದೆ ಅರಳಿ ಬ್ರಹ್ಮಕಮಲ ಗಿಡಗಳೊಂದಿಗೆ ಸೆಲ್ಫಿ ತೆಗೆದು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟು ಖುಷಿ ಪಡುತ್ತಾರೆ. ಮಳೆಗಾಲದ ಆರಂಭದ ದಿನವಾಗಿರುವುದರಿಂದ ಹುಲುಸಾಗಿ ಬೆಳೆದ ಬ್ರಹ್ಮಕಮಲ ಗಿಡಗಳಲ್ಲಿ ಮೊಗ್ಗಾಗಿ ಹೂವಾಗಿ ಅರಳುವ ಸಮಯವೂ ಹೌದು.[ಮನೆ ಸೊಬಗು ಹೆಚ್ಚಿಸುವ 'ಇಕ್ಸೋರ' ಶಿವನ ಇಷ್ಟ ಪುಷ್ಪ]
ಗಿಡನೆಟ್ಟ ಪ್ರತಿ ಪುಷ್ಪಪ್ರೇಮಿಯಲ್ಲೂ ಹೂ ಅರಳುವುದನ್ನು ನೋಡುವ ತವಕ ಇದ್ದೇ ಇರುತ್ತದೆ. ಏಕೆಂದರೆ ಇದು ಇತರೆ ಹೂಗಿಡಗಳಂತೆ ಆಗಾಗ್ಗೆ ಹೂ ಬಿಡುವುದಿಲ್ಲ. ವರ್ಷಕ್ಕೋ... ಎರಡು ವರ್ಷಕ್ಕೊಮ್ಮೆ ಹೂ ಬಿಡುತ್ತದೆ. ಅದೂ ಕೂಡ ನಡು ರಾತ್ರಿಯಲ್ಲಿ.
ಸಾಮಾನ್ಯವಾಗಿ ಮಳೆಗಾಲ ಪ್ರಾರಂಭವಾಗುತ್ತಿದ್ದಂತೆಯೇ ಬ್ರಹ್ಮಕಮಲ ಗಿಡಗಳಲ್ಲಿ ಹೂಗಳು ಬಿಡಲಾರಂಭಿಸುತ್ತವೆ. ಆಷಾಢದಲ್ಲಂತೂ ಗಿಡಗಳು ಒಂದಕ್ಕಿಂತ ಮತ್ತೊಂದು, ತನ್ನ ಸಾಮಥ್ರ್ಯಕ್ಕಿಂತಲೂ ಹೆಚ್ಚಿನ ಹೂಗಳನ್ನು ಬಿಟ್ಟು ಮನೆಯಂಗಳದಲ್ಲಿ ಶೋಭಿಸುತ್ತವೆ.

ಹಾಗೆ ನೋಡಿದರೆ ಬ್ರಹ್ಮಕಮಲ ಎನ್ನುವುದು ಪುಷ್ಪಲೋಕದ ಅಚ್ಚರಿ ಎಂದರೆ ತಪ್ಪಾಗಲಾರದು. ಕ್ಯಾಕ್ಟಸ್ ಜಾತಿಗೆ ಸೇರಿದ ಬ್ರಹ್ಮಕಮಲದ ವೈಜ್ಞಾನಿಕ ಹೆಸರು ಎಪಿಫಿಲ್ಲಂ ಅಕ್ಸಿಪೆಟಲಂ. ಹಿಂದಿಯಲ್ಲಿ ನಿಶಾಗಂಧಿ, ಅಮೇರಿಕಾದಲ್ಲಿ ಮಿಡ್ನೈಟ್ ಲಿಲ್ಲಿ, ಅರ್ಚಿಡ್ ಕ್ಯಾಕ್ಟಸ್, ಪೋಡ್ ಲಿಲ್ಲಿ, ಕ್ಯಾಕ್ಟಸ್ ಬೆಥ್ಲೆಹೆಮ್ ಲಿಲ್ಲಿ ಹೀಗೆ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ.
ದಕ್ಷಿಣ ಅಮೆರಿಕಾ ಇದರ ತವರೆಂದು ಅಲ್ಲಿಂದ ಸ್ಪೆಲಿಷ್ರು ಪೋರ್ಚ್ಗೀಸ್ ನಾವಿಕರ ಮೂಲಕ ವಿಶ್ವದ ಇತರ ಕಡೆಗೆ ಹರಡಿತೆಂದು ಹೇಳಲಾಗಿದೆ. ಆದರೆ ಬ್ರಹ್ಮಕಮಲ ಭಾರತದತ್ತ ಹದಿನೇಳನೇ ಶತಮಾನದಲ್ಲಿ ಬಂದಿತೆಂದು ಹೇಳಲಾಗುತ್ತಿದೆ.
ಹಿಮಾಚಲದ ಪ್ರದೇಶ, ಕಾಶ್ಮೀರ, ಹಿಮಾಚಲದ ಕೆಲವು ಪ್ರದೇಶಗಳಲ್ಲಿ ಭಾರತದ್ದೇ ಆದ ನೈಜ ಜಾತಿಯ ಗಿಡಗಳು ಇಂದಿಗೂ ಕಂಡುಬರುತ್ತವೆ ಎನ್ನಲಾಗಿದೆ. ಇತರೆ ಪುಷ್ಪಗಿಡಗಳಿಗೆ ವಿಭಿನ್ನವಾಗಿರುವ ಇದು ಸುಮಾರು ಹತ್ತರಿಂದ ಇಪ್ಪತ್ತು ಅಡಿಯಷ್ಟು ಎತ್ತರಕ್ಕೆ ಬೆಳೆಯುತ್ತದೆ. ಈ ಸಸ್ಯದಲ್ಲಿ ರೆಂಬೆ, ಕೊಂಬೆಗಳೇ ಇಡೀ ಸಸ್ಯದ ಜೀವಾಳವಾಗಿದೆ.[ಚಂದಿರನ ತಂಪಿನಲ್ಲಿ ಅರಳಿದ ಬ್ರಹ್ಮಕಮಲ]
ಪುಷ್ಪಲೋಕದ ವಿಸ್ಮಯ ‘ಬ್ರಹ್ಮಕಮಲ’
ಚಪ್ಪಟೆಯಾಗಿರುವ ಕಾಂಡ, ರೆಂಬೆಗಳು ಹಚ್ಚಹಸಿರಿನಿಂದ ಕೂಡಿದ್ದು, ಇವುಗಳೇ ಧ್ಯುತಿಸಂಶ್ಲೇಷಣಾ ಕ್ರಿಯೆ ನಡೆಸುತ್ತವೆ. ತುದಿಭಾಗ ನೀಳವಾಗಿ ಹಾಗೂ ಅಗಲವಾಗಿ ಹರಡಿಕೊಂಡಿರುವ ಎಲೆಯೇ ಕಾಂಡವಾಗಿದ್ದು, ಇದನ್ನು ಪರ್ಣಸ್ಥಂಭ ರಚನೆ ಎಂದು ಕರೆಯುತ್ತಾರೆ. ಇದರ ಸಸ್ಯಾಭಿವೃದ್ಧಿ ಅಷ್ಟೇನು ಕಷ್ಟವಲ್ಲ. ಬಲಿತ ಎಲೆಯನ್ನೇ ನೆಟ್ಟರೆ ಸಾಕು ಚಿಗುರು ಮೂಡಿ ಸಸ್ಯ ಬೆಳೆಯುತ್ತದೆ.
ಹೆಚ್ಚಿನ ನೀರು, ಗೊಬ್ಬರವನ್ನೂ ಇದು ಅಪೇಕ್ಷಿಸುವುದಿಲ್ಲ. ಹೀಗಾಗಿ ಇದನ್ನು ಮನೆಯ ಅಂಗಳದಲ್ಲಿ ಅಥವಾ ಹೂಕುಂಡಗಳಲ್ಲಿ ಸುಲಭವಾಗಿ ಬೆಳೆಸಬಹುದಾಗಿದೆ. ಮನೆಯ ಒಳಗೆ ಕುಂಡದಲ್ಲಿ ಬೆಳೆಸುವುದರಿಂದ ವಾಯು ಮಾಲಿನ್ಯವನ್ನು ತಡೆಗಟ್ಟಬಹುದು ಎಂದು ಹೇಳಲಾಗುತ್ತದೆ.[ಮೈಸೂರಿನ ಆಶ್ರಮದಲ್ಲಿ ಬೋನ್ಸಾಯ್ ಮರಗಳ ಲೋಕ]
ಸಾಮಾನ್ಯವಾಗಿ ಮುಂಗಾರು ಆರಂಭವಾಗುತ್ತಿದ್ದಂತೆಯೇ ಬಲಿತ ಗಿಡಗಳ ಎಲೆಗಳ ರಚನೆಯ ಅಂಚಿನಲ್ಲಿ ಪುಟ್ಟದಾಗಿ ನಸುಕೆಂಪು ಬಣ್ಣದ ಮೊಗ್ಗುಗಳು ಹೊರಬಂದು ಸುಮಾರು ಎರಡು ವಾರಗಳಲ್ಲಿ ಬೊಗಸೆಗಿಂತಲೂ ದೊಡ್ಡದಾಗಿ ಬೆಳೆದು ನೆಲದತ್ತ ಮುಖಮಾಡಿ ತೂಗಾಡುತ್ತವೆ. ಆದರೆ ಮೊಗ್ಗುಗಳು ಪಕ್ವಗೊಂಡು ಅರಳುವ ಸಮಯ ಮಾತ್ರ ರಾತ್ರಿಯೇ...
ಹೂಗಳು ರಾತ್ರಿ ಸುಮಾರು ಎಂಟು ಗಂಟೆಯಿಂದ ಅರಳಲು ಆರಂಭವಾಗಿ ಮಧ್ಯರಾತ್ರಿ ವೇಳೆಗೆಲ್ಲಾ ಪೂರ್ಣವಾಗಿ ಅರಳಿ ಸುವಾಸನೆಯನ್ನು ಬೀರಲಾರಂಭಿಸುತ್ತವೆ. ಕೆಂಪು ಪುಷ್ಪಪತ್ರೆಯಲ್ಲಿ ಅಚ್ಚ ಬಿಳಿಯ ದಳಗಳನ್ನೊಳಗೊಂಡ ಹೂಗಳು ಸುಂದರವಾಗಿಯೂ, ಮೋಹಕವಾಗಿಯೂ ನೋಡುಗರನ್ನು ತನ್ನತ್ತ ಸೆಳೆಯುತ್ತದೆ.
ವರ್ಷದಿಂದ ಕಾದು ಕುಳಿತ ಮನೆ ಮಂದಿಗೆ ಕೊನೆಗೂ ಮಧ್ಯರಾತ್ರಿಯಲ್ಲಿ ಅರಳಿ ತನ್ನ ಚೆಲುವನ್ನು ಪ್ರದರ್ಶಿಸುವ ಮೂಲಕ ತುಂಟ ನಗು ಬೀರುವ ಬ್ರಹ್ಮಕಮಲ ತನ್ನ ಸೌಂದರ್ಯವನ್ನು ಹೆಚ್ಚು ಸಮಯಗಳ ಕಾಲ ಸವಿಯಲು ಅವಕಾಶ ನೀಡುವುದಿಲ್ಲ. ರಾತ್ರಿ ಅರಳಿದ ಹೂ ಬೆಳಿಗ್ಗೆಯಾಗುತ್ತಿದ್ದಂತೆಯೇ ಮುದುಡಿ ಮೊಗ್ಗಿನಂತಾಗಿ ಕೊನೆಗೆ ಉದುರಿ ಬಿದ್ದು ಹೋಗಿ ಬಿಡುತ್ತದೆ.
ಒಂದು ಗಿಡ ಇಷ್ಟೇ ಹೂ ಬಿಡುತ್ತದೆ ಎಂದು ಹೇಳಲಾಗುವುದಿಲ್ಲ. ಗಿಡಗಳ ಬೆಳವಣಿಗೆ ಹಾಗೂ ಅವುಗಳ ಶಕ್ತಿಯಾನುಸಾರ ಹೂ ಬಿಡುತ್ತದೆ. ಗಿಡವೊಂದರಲ್ಲಿ ನಾಲ್ಕರಿಂದ ಪ್ರಾರಂಭವಾಗಿ ನೂರಾರು ಹೂಗಳನ್ನು ಬಿಡುತ್ತವೆ. ಗಿಡದ ತುಂಬಾ ಹೂವರಳಿದ ಸಂದರ್ಭ ಅದನ್ನು ನೋಡುವುದೇ ಮಜಾ...
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications