ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಹಂಚಲು ತಂದಿದ್ದ ತಿಂಡಿ ವಶಕ್ಕೆ
ಮೈಸೂರು, ಮಾರ್ಚ್ 23 : ನಂಜನಗೂಡಿನ ಯಾತ್ರಿ ಭವನದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಅನುಮತಿ ಪಡೆಯದೆ ಊಟದ ವ್ಯವಸ್ಥೆ ಮಾಡಿದ್ದರಿಂದ ಚುನಾವಣಾ ಸಿಬ್ಬಂದಿ ಖಾಲಿ ಪಾತ್ರೆಗಳು ಹಾಗೂ ಅಡುಗೆಗೆ ಉಪಯೋಗಿಸಿದ ಸಲಕರಣೆಗಳನ್ನು ವಶಪಡಿಸಿಕೊಂಡಿದ್ದಾರೆ.
ಚುನಾವಣಾ ಪೂರ್ವಭಾವಿಯಾಗಿ ಆಯೋಜಿಸಿದ್ದ ಬಿಜೆಪಿ ಪಕ್ಷದ ಮುಖಂಡರು ಕೇವಲ ಸಭೆಗೆ ಮಾತ್ರ ಅನುಮತಿ ಪಡೆದಿದ್ದು, ಊಟೋಪಚಾರಕ್ಕೆ ಅನುಮತಿ ಪಡೆದಿರಲಿಲ್ಲ. ಸಭೆಗೆ ಹಾಜರಾದ ಸಹಸ್ರಾರು ಕಾರ್ಯಕರ್ತರಿಗೆ ಇಲ್ಲಿ ಊಟ ಬಡಿಸಿದ್ದನ್ನು ತಿಳಿದ ಚುನಾವಣಾ ಸಿಬ್ಬಂದಿ ಯಾತ್ರಿ ಭವನಕ್ಕೆ ಹಾಜರಾಗಿ ಅಳಿದುಳಿದ ಊಟ ಖಾಲಿ ಪಾತ್ರೆಗಳು ಹಾಗೂ ಅಡುಗೆಗೆ ಉಪಯೋಗಿಸಿದ ಸಲಕರಣೆಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ನಂಜನಗೂಡಿನ ಕಲ್ಯಾಣ ಮಂಟಪದಲ್ಲಿ ಬಿಜೆಪಿಯಿಂದ ಪ್ರಥಮ ಬಾರಿಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದ್ದು, ಸಭೆಗೆ ಗ್ರಾಮೀಣ ಪ್ರದೇಶಗಳಿಂದ ನೂರಾರು ಕಾರ್ಯಕರ್ತರು ಸಹ ಆಗಮಿಸಿದ್ದರು.

ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಕಾರ್ಯಕರ್ತರು ಮುಖಂಡರಿಗೆ ಯಾತ್ರಿ ಭವನ ಕಲ್ಯಾಣ ಮಂಟಪದಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಆಯೋಜಕರು ಚುನಾವಣಾಧಿಕಾರಿಗಳಿಂದ ಪರವಾನಗಿ ಪಡೆಯದೇ ಉಪಹಾರ ನೀಡಿದ್ದನ್ನು ಆಕ್ಷೇಪಿಸಿ ಉಪಹಾರ ನೀಡದಂತೆ ತಡೆ ಹಿಡಿಯಲು ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ.
ಚುನಾವಣಾ ಸಭೆಗೆ ಅಧಿಕಾರಿಗಳ ಹಾಜರಿ ಸಾಮಾನ್ಯವಾಗಿದ್ದು, ಇಲ್ಲಿ ಕಾರ್ಯಕರ್ತರು ಉಪಾಹಾರ ಪೂರ್ಣಗೊಂಡ ನಂತರ ದಾಳಿ ನಡೆಸಿದ್ದು ನಾಗರಿಕರ ಆಶ್ಚರ್ಯಕ್ಕೆ ಕಾರಣವಾಗಿದೆ. ಸಭೆಗೆ ಮಾತ್ರ ಅನುಮತಿ ಪಡೆದಿದ್ದ ಬಿಜೆಪಿ ಉಪಾಹಾರಕ್ಕೆ ಅನುಮತಿ ಪಡೆದುಕೊಂಡಿರಲಿಲ್ಲ. ಅನುಮತಿ ಇಲ್ಲದೆ ಆಹಾರ ಸರಬರಾಜು ಮಾಡಿದ್ದ ಕುರಿತಂತೆ ಚುನಾವಣಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ತಾಲ್ಲೂಕು ದಂಡಾಧಿಕಾರಿ ಮಹೇಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications