ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳಿಗೆ ಜೆಎಸ್ಎಸ್ ವೈದ್ಯಕೀಯ ಕಾಲೇಜಿನಲ್ಲಿ ಬ್ರಿಡ್ಜ್ ಕೋರ್ಸ್
ಮೈಸೂರು, ಮೇ 2 : ಯುದ್ಧದ ಕಾರಣದಿಂದಾಗಿ ಉಕ್ರೇನ್ನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಚೀನಾದಲ್ಲಿ ಕೊರೊನಾದಿಂದಾಗಿ ಭಾರತಕ್ಕೆ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜೆಎಸ್ಎಸ್ ವೈದ್ಯಕೀಯ ಕಾಲೇಜು ಬ್ರಿಡ್ಜ್ ಕೋರ್ಸ್ ಘೋಷಣೆ ಮಾಡಿತ್ತು. ಇದಕ್ಕೆ ಕಳೆದ 24 ಗಂಟೆಯಲ್ಲೇ ವಿದ್ಯಾರ್ಥಿಗಳಿಂದಲೇ ಆಗಾಧವಾಗ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 511 ವಿದ್ಯಾರ್ಥಿಗಳು ಈ ಕೋರ್ಸ್ಗೆ ಸೇರಲು ಉತ್ಸುಕರಾಗಿದ್ದಾರೆ.
ಭಾರತದಾದ್ಯಂತ 511 ವಿದ್ಯಾರ್ಥಿಗಳು ಅದರಲ್ಲಿ 321 ಕರ್ನಾಟಕದವರಾಗಿದ್ದು, ಈ ಕೋರ್ಸ್ ಸೇರಿಕೊಳ್ಳಲು ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಈ ಕೋರ್ಸ್ನ್ನು ಮೇ ಎರಡನೇ ವಾರದಿಂದ ಪ್ರಾರಂಭಿಸುವ ನಿರೀಕ್ಷೆಯಿದೆ.
ಭಾನುವಾರ ಈ ಕುರಿತು ಸುದ್ದಿಗೋಷ್ಟಿ ನಡೆಸಿದ ಕಾಲೇಜು ಆಡಳಿಯ ಮಂಡಳಿ, ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಅವಕಾಶ ನೀಡಲಾಗುವುದು ಮತ್ತು ಎಲ್ಲಾ ಪ್ರಯೋಗಾಲಯ ಸೌಲಭ್ಯಗಳು ಅವರಿಗೆ ಉಚಿತವಾಗಿ ತೆರೆದಿರುತ್ತವೆ ಎಂದು ತಿಳಿಸಿದೆ. ಇನ್ನು ಈ ಕೋರ್ಸ್ಗೆ ಸೇರಲು ಕರ್ನಾಟಕದ ಹೊರತಾಗಿ, ದೆಹಲಿ, ಮುಂಬೈ, ಗುಜರಾತ್ ಮತ್ತು ಇತರ ಸ್ಥಳಗಳಿಂದ ವಿದ್ಯಾರ್ಥಿಗಳು ಈ ಕೋರ್ಸ್ ಸೇರಲು ಆಸಕ್ತಿ ತೋರಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ಜೆಎಸ್ಎಸ್ ಆಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಪ್ರೋ ಚಾನ್ಸೆಲರ್ ಆದ ಡಾ. ಬಿ ಸುರೇಶ್ ಮಾತನಾಡಿ, ಬ್ರಿಡ್ಜ್ ಕೋರ್ಸ್ನಲ್ಲಿ ಉಕ್ರೇನ್ ಮತ್ತು ಚೀನಾದಲ್ಲಿ ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುತ್ತಿರುವ ತಲಾ 125 ವಿದ್ಯಾರ್ಥಿಗಳ ನಾಲ್ಕು ಬ್ಯಾಚ್ಗಳನ್ನು ಒಳಗೊಂಡಿರುತ್ತದೆ . ಕೋರ್ಸ್ ಮ್ಯಾಪಿಂಗ್ ಮಾಡಿದ ನಂತರ ತರಗತಿಗಳು ನಡೆಯುತ್ತವೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಸಂಸ್ಥೆಗಳಲ್ಲಿ ಅನುಸರಿಸುತ್ತಿರುವ ಪಠ್ಯಕ್ರಮಕ್ಕೆ ಸಂಬಂಧಿಸಿದ ವಿಷಯಗಳನ್ನು ಕಲಿಸಲಾಗುತ್ತದೆ ಎಂದು ತಿಳಿಸಿದರು.
ಕೋರ್ಸ್ನ ಕೊನೆಯಲ್ಲಿ ಪರಿಚಯಿಸಲಾಗುವ ವಿಷಯಗಳ ಆಧಾರದ ಮೇಲೆ ಅವಧಿಯು ನಾಲ್ಕು ವಾರಗಳಿಂದ ಆರು ಅಥವಾ ಎಂಟು ವಾರಗಳವರೆಗೆ ಬದಲಾಗಬಹುದು, ವಿದ್ಯಾರ್ಥಿಗಳು ಅಧ್ಯಯನ ಮಾಡಿದ ವಿಷಯಗಳ ವಿವರಗಳು ಮತ್ತು ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಪ್ರಾಧ್ಯಪಕರ ಮೌಲ್ಯಮಾಪನದೊಂದಿಗೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಇದು ವಿದ್ಯಾರ್ಥಿಗಳ ಮೌಲ್ಯಮಾಪನವನ್ನು ಆಧರಿಸಿ ಈ ಪ್ರಮಾಣಪತ್ರವನ್ನು ನೀಡಲಾಗುತ್ತದೆ ಎಂದು ಡಾ.ಬಿ ಸುರೇಶ್ ತಿಳಿಸಿದ್ದಾರೆ.

ಹವಮಾನ ಬದಲಾವಣೆ ಅಥವಾ ಯುದ್ಧದಂತಹ ಇತರ ಮಾನವ ನಿರ್ಮಿತ ಅಗತ್ಯತೆಗಳಿಂದ ನೈಸರ್ಗಿಕ ವಿಕೋಪಗಳಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಗೊಂಡ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಬೇರೆಡೆ ಮುಂದುವರೆಸುವ ಸನ್ನಿವೇಶ ಎದುರಾಗುತ್ತದೆ. ಹೀಗಾಗಿ ಜೆಎಸ್ಎಸ್ ವೈದ್ಯಕೀಯ ಕಾಲೇಜು ಕೂಡ ಇಂತಹ ಸನ್ನಿವೇಶವನ್ನು ನಿಭಾಯಿಸಲು ಸಿದ್ದವಾಗಿದೆ. ಅದಕ್ಕಾಗಿ ಜೆಎಸ್ಎಸ್ ಇಂಡಿಯಾ ಇಂಟರ್ ನ್ಯಾಷನಲ್ ಇನಿಶಿಯೇಟಿವ್ನ ಭಾಗವಾಗಿ ಬ್ರಿಡ್ಕ್ ಕೋರ್ಸ್ ಅನ್ನು ನೀಡುತ್ತಿದ್ದೇವೆ ಎಂದು ಬಿ.ಸುರೇಶ್ ತಿಳಿಸಿದ್ದಾರೆ.
ಇನ್ನು ಕಾಲೇಜಿನ ಉಪಕುಲಪತಿಗಳಾದ ಡಾ. ಸುರೇಂದ್ರ ಸಿಂಗ್ ಕೂಡ ಮಾತನಾಡಿ, ಕಾಲೇಜಿನಲ್ಲಿ ಶಿಕ್ಷಕರೊಂದಿಗೆ ಸಂಪರ್ಕದ ಕೊರತೆ ಮತ್ತು ಪ್ರಯೋಗಾಲಯಗಳಿಗೆ ಪ್ರವೇಶದ ಕೊರತೆಯಿಂದಾಗಿ ಸಂಭವಿಸುವ ಜ್ಞಾನ ಮತ್ತು ಕೌಶಲ್ಯದ ಅಂತರವನ್ನು ನಿವಾರಿಸಲು ಈ ಬ್ರಿಡ್ಜ್ ಕೋರ್ಸ್ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಗೋಷ್ಟಿಯಲ್ಲಿ ಡಾ. ಎಂ ಕುಲಸಚಿವ ಮಂಜುನಾಥ್, ಜೆಎಸ್ಎಸ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಬಸವಣ್ಣ ಗೌಡಪ್ಪ ಸೇರಿದಂತೆ ಇತರರಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications