ಪ್ರೇಮಕ್ಕೆ ವಿರೋಧ: ಹಲ್ಲೆ, ಮೈಸೂರಿನಲ್ಲಿ ಮೂವರ ಬಂಧನ
ಮೈಸೂರು, ಜನವರಿ 10: ಮೈಸೂರಿನ ಕನಕಗಿರಿಯಲ್ಲಿ ತಂಗಿಯ ಪ್ರೀತಿಯನ್ನು ವಿರೋಧಿಸಿದ ಅಣ್ಣನ ಮೇಲೆ ಆಕೆಯ ಪ್ರಿಯತಮನ ಸ್ನೇಹಿತರ ಹಲ್ಲೆ ಮಾಡಿದ್ದು ಈ ವೇಳೆ ಬಿಡಿಸಲು ಬಂದ ವ್ಯಕ್ತಿ ಗಾಯಗೊಂಡಿದ್ದಾನೆ. ಈ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ವಿದ್ಯಾರಣ್ಯಪುರಂ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಮೈಸೂರು ಹಾಗೂ ಬೋಗಾದಿಯ ಮಹೇಶ್, ರಾಮ ಸೇರಿದಂತೆ ಮತ್ತೋಬ್ಬ ಆರೋಪಿ ಬಂಧಿತರು. ಆರೋಪಿಗಳು ಕೃತ್ಯಕ್ಕೆ ಬಳಸಲಾದ ಲಾಂಗು, ಮಚ್ಚು, ಹಾಕಿ ಸ್ಟಿಕ್, ಒಂದು ಬೈಕ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೂ ಕೆಲವು ಆರೋಪಿಗಳು ಇದರಲ್ಲಿ ಭಾಗವಹಿಸಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ.[ಆಸ್ತಿಗಾಗಿ ಅತ್ತಿಗೆಯನ್ನು ಕೊಲೆ ಮಾಡಿದ ನಾದಿನಿಯರು]

ಇನ್ನು ಗಾಯಗೊಂಡಿರುವ ಅವಿನಾಶ್ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ತೀರ್ವನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ.
ಗೃಹಿಣಿ ನೇಣಿಗೆ ಶರಣು
ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ಜರುಗಿದೆ.

ಮೃತರನ್ನು ಒಂಟಿಕೊಪ್ಪಲು ಆದಿಪಂಪಾ ರಸ್ತೆ ನಿವಾಸಿ ಗೀತಾ (48) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಅನಂತಪದ್ಮನಾಭ ಎಂಬವರನ್ನು ಗೀತಾ ವಿವಾಹವಾಗಿದ್ದರು. ಅನಂತಪದ್ಮನಾಭ ಅವರ ಮೊದಲ ಪತ್ನಿ ಹೃದಯ ಸಂಬಂಧಿ ಕಾಯಿಲೆಯಿಂದ ಮರಣಹೊಂದಿದ ಹಿನ್ನೆಲೆಯಲ್ಲಿ ಗೀತಾ ಎಂಬವರನ್ನು ಎರಡನೇ ಮದುವೆಯಾಗಿದ್ದರು ಎನ್ನಲಾಗಿದೆ. ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications