ಮೈಸೂರು: 74 ಗೋವುಗಳಿಗೆ ಪೂಜೆ ಮಾಡಿ ಬಿಎಸ್ವೈ ಹುಟ್ಟು ಹಬ್ಬ ಆಚರಣೆ
ಮೈಸೂರಿನ ಕನಕಗಿರಿಯ ಸೂಯೇಜ್ ಫಾರಂ ನಲ್ಲಿ ಮಾಜಿ ಸಚಿವ ರಾಮದಾಸ್ ಹಾಗೂ ಸ್ವಾಮೀಜಿಗಳ ನೇತೃತ್ವದಲ್ಲಿ 74 ಗೋವುಗಳಿಗೆ ಪೂಜೆ ಮಾಡಿ, ಉಚಿತ ಮೇವು ನೀಡುವುದರ ಮೂಲಕ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಲಾಯಿತು.
ಮೈಸೂರು, ಫೆಬ್ರವರಿ 27: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ 74ನೇ ಹುಟ್ಟುಹಬ್ಬವನ್ನು ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ವಿಭಿನ್ನವಾಗಿ ಆಚರಿಸಿದರು.
ಮೈಸೂರಿನ ಕನಕಗಿರಿಯ ಸೂಯೇಜ್ ಫಾರಂ ನಲ್ಲಿ ಮಾಜಿ ಸಚಿವ ರಾಮದಾಸ್ ಸೇರಿದಂತೆ ಸ್ವಾಮೀಜಿಗಳ ನೇತೃತ್ವದಲ್ಲಿ 74 ಗೋವುಗಳಿಗೆ ಪೂಜೆ ಮಾಡಿ, ಗೋವುಗಳಿಗೆ ಉಚಿತ ಮೇವು ನೀಡುವುದರ ಮೂಲಕ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಲಾಯಿತು.['ಕೈ' ಬಿಟ್ಟು 'ಕಮಲ' ಅಪ್ಪಿಕೊಳ್ಳಲು ಹೊರಟಿದ್ದಾರೆ ಕುಮಾರ್ ಬಂಗಾರಪ್ಪ!]

ಕಾರ್ಯಕ್ರಮದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಒತ್ತಾಯ ಹಾಗೂ ಸೂಯೇಜ್ ಫಾರಂ ಉಳಿಸಿ ಹೋರಾಟ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ರಾಮದಾಸ್, ವಿಶೇಷವಾಗಿ ರೈತ ಪರವಾದ ಹುಲ್ಲನ್ನು ಗೋಮಾತೆಗೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ. ಯಡಿಯೂರಪ್ಪ ಅವರು ಸಿಎಂ ಆಗಿದ್ದ ವೇಳೆ ಗೋ ಹತ್ಯೆ ನಿಷೇಧಿಸಲು ಮುಂದಾದೆವು. ಆದರೆ ಇಂದು ಸಿಎಂ ಸಿದ್ದರಾಮಯ್ಯ ಗೋ ಹತ್ಯೆ ನಿಷೇಧ ಇಲ್ಲ ಎಂದಿದ್ದಾರೆ. ಇದು ಗೋವುಗಳ ಬಗ್ಗೆ ಸಿಎಂ ಅವರಿಗೆ ಕಾಳಜಿ ಇಲ್ಲದಿರುವುದನ್ನು ಸೂಚಿಸುತ್ತದೆ ಎಂದರು.[ಸಿಟ್ಟು, ಪಟ್ಟು ಎರಡರ ಕಾಂಬೋ ಬಿಎಸ್ ವೈಗೆ 74ನೇ ಜನ್ಮದಿನ]
"ಈಗಷ್ಟೆ ಹೋರಾಟ ಪ್ರಾರಂಭ ಮಾಡುತ್ತಿದ್ದೇವೆ. ಗೋವುಗಳ ರಕ್ಷಣೆಗೆ ಮತ್ತು ಸ್ಥಳ ಅಭಿವೃದ್ಧಿ ದೃಷ್ಟಿಯಿಂದ ಸುಯೇಜ್ ಫಾರಂ ಉಳಿಸಿ ಅಭಿಯಾನ ಕೈಗೊಂಡಿದ್ದೇವೆ. ಇಂದೇ ಕಾರ್ಯಕ್ರಮದಲ್ಲಿ ಉಪಮೇಯರ್ ಅವರಿಗೆ ಮನವಿ ಸಲ್ಲಿಸುತ್ತಿದ್ದೇವೆ. ನಾಳೆ ಪಾಲಿಕೆ ಆಯುಕ್ತರು ಮೇಯರ್ ಅವರನ್ನ ಕಂಡು ಗೋ ಅಭಿವೃದ್ಧಿ ಹಾಗೂ ಉಳಿವಿಗಾಗಿ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications