ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಎಂದು ನುಡಿದ ಬಿಎಸ್ ವೈ!
ಮೈಸೂರು, ಜೂನ್ 5 : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ಎಂದು ಎರಡೂ ಬಾರಿ ಸಂಭೋಧಿಸುವ ಮೂಲಕ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿಯನ್ನು ಹಾಲಿಯನ್ನಾಗಿಸಿ ಎಡವಟ್ಟು ಮಾಡಿಕೊಂಡ ಪ್ರಸಂಗ ನಡೆಯಿತು.
ನಗರದ ಕೆ.ಆರ್.ಕ್ಷೇತ್ರದ ಮತದಾರಿಗೆ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಕೃತಜ್ಞತಾ ಸಮಾರಂಭ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಸಂಗ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಎಸ್ವೈ, ನಾನು ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ ಎನ್ನುವ ಮೂಲಕ ಸಿದ್ದರಾಮಯ್ಯ ರಾಜ್ಯದ ಜನರಿಗೆ ಅಪಮಾನ ಮಾಡಿದ್ದಾರೆ.
ಅಷ್ಟೇ ಅಲ್ಲ, ರೈತರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ ಎಂದು ಬಾಯ್ತಪ್ಪಿ ಹೇಳಿದರು. ಆಗ ಕಾರ್ಯಕರ್ತರೊಬ್ಬರು ಚೀಟಿಯಲ್ಲಿ ಬರೆದುಕೊಟ್ಟು ಕುಮಾರಸ್ವಾಮಿ ಎನ್ನಿ ಎಂದ ಘಟನೆ ನಡೆಯಿತು.

ಮೊನ್ನೆ ನಡೆದ ಚುನಾವಣೆಯಲ್ಲಿ 130 ಸ್ಥಾನ ಗೆಲುತ್ತೇವೆ ಅಂದುಕೊಂಡಿದ್ದೆವು. ನಂತರದ ಬೆಳವಣಿಗೆಯಲ್ಲಿ 104 ಸ್ಥಾನ ಬಂದಿದೆ. ಕುಮಾರಸ್ವಾಮಿ ಸರ್ಕಾರ ಜನರಿಗೆ ಗೊಂದಲವನ್ನುಂಟು ಮಾಡುತ್ತಿದೆ. ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿಗಾಗಿ ಕಾಯುತ್ತಿರುವ ನೀವು ಮೊದಲು ಸಾಲಮನ್ನಾ ಮಾಡಿ.
ರಾಜ್ಯದ ಜನರಿಗೆ ಅಪಮಾನ ಮಾಡುವುದನ್ನು ನಿಲ್ಲಿಸಿ. ರೈತರ ಸಭೆ ಕರೆದು ದೊಂಬರಾಟ ಶುರು ಮಾಡಿ, ಅವರನ್ನು ಮೋಸ ಮಾಡಿದ್ದೀರಿ. ನಾವು ಬಂದ್ ಮಾಡದೆ ಇದ್ದಿದ್ದರೆ ಅವರು ರೈತರ ಸಭೆ ಕರೆಯುತ್ತಿರಲಿಲ್ಲ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಕುಮಾರಸ್ವಾಮಿ ಅಂಡ್ ಕಂಪನಿ ಏನಾಗಲಿದೆ ಅಂತ 15-20 ದಿನದಲ್ಲಿ ಗೊತ್ತಾಗಲಿದೆ. ಕುಮಾರಸ್ವಾಮಿ ನಿಮಗೆ ನೇರವಾಗಿ ಸವಾಲು ಹಾಕುತ್ತಿದ್ದೇನೆ. ನಿಮ್ಮ ಸರ್ಕಾರ ವಿಸರ್ಜಿಸಿ ಬನ್ನಿ, ಮತ್ತೇ ಚುನಾವಣೆಗೆ ಹೋಗೋಣ. ಯಾರು ಹೆಚ್ಚು ಸ್ಥಾನ ಬರ್ತಾರೆ ಅಂತ ಗೊತ್ತಾಗಲಿದೆ ಎಂದು ಸವಾಲೆಸೆದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications