ಸಂಚಾರಿ ನಿಯಮ ಉಲ್ಲಂಘನೆ ದಂಡ ತಪ್ಪಿಸಲು ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದ ಬುಲೆಟ್ ಸವಾರ
ಮೈಸೂರು, ಡಿಸೆಂಬರ್ 9: ಪದೇ ಪದೇ ಸಂಚಾರ ಉಲ್ಲಂಘನೆಯ ದಂಡವನ್ನು ತಪ್ಪಿಸಿಕೊಳ್ಳಲು ಬುಲೆಟ್ ಬೈಕ್ ಸವಾರನೊಬ್ಬ ಭಾರೀ ತಂತ್ರ ಮಾಡಿದ್ದು, ಕೊನೆಗೂ ಮೈಸೂರು ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.
ಕಳೆದ 8 ತಿಂಗಳ ಅವಧಿಯಲ್ಲಿ ಆರೋಪಿಯು 38 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಾನೆ. ಸಿಗ್ನಲ್ ಜಂಪ್, ಅತಿ ವೇಗದ ಚಾಲನೆ, ಅಜಾಗರೂಕತೆಯ ಚಾಲನೆ ಪ್ರಕರಣವೇ ಇದರಲ್ಲಿ ಹೆಚ್ಚಾಗಿತ್ತು.
ದಂಡದಿಂದ ತಪ್ಪಿಸಿಕೊಳ್ಳಲು ನಕಲಿ ನಂಬರ್ ಅಳವಡಿಸಿಕೊಂಡಿದ್ದ ಈ ಬೈಕ್ ಸವಾರನನ್ನು ನರಸಿಂಹರಾಜ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಕನ್ನೇಗೌಡನ ಕೊಪ್ಪಲಿನ ನಿವಾಸಿ ರವಿ ಎಂಬಾತನ ಬುಲೆಟ್ ಬೈಕ್ ಅಸಲಿ ನೋಂದಣಿ ಸಂಖ್ಯೆ ಬೇರೆಯಿದ್ದು, ವಾಹನ ಸವಾರ ತನ್ನ ಬೈಕ್ ನ ನಂಬರ್ ಪ್ಲೇಟ್ ತಿದ್ದುಪಡಿ ಮಾಡಿ ಬೇರೆ ನೋಂದಣಿ ಸಂಖ್ಯೆ ಹಾಕಿಕೊಂಡಿದ್ದ. ಸಿಸಿ ಟಿವಿಗಳ ಫುಟೇಜ್ ಮೂಲಕ ಪೊಲೀಸರು ಒಟ್ಟು 38 ನೋಟೀಸ್ ಗಳನ್ನು ಸವಾರನ ಮನೆ ವಿಳಾಸಕ್ಕೆ ಕಳಿಸಿದ್ದರು. ಆದರೆ ಆರೋಪಿಯು ಅಳವಡಿಸಿಕೊಂಡಿದ್ದ ನೋಂದಣಿ ಸಂಖ್ಯೆಯು ಕುವೆಂಪುನಗರದ ನಿವಾಸಿ ಚಂದ್ರ ಅವರ ಹೋಂಡಾ ಡಿಯೋ ಸ್ಕೂಟರ್ ನದಾಗಿತ್ತು.

ಪೊಲೀಸರು ಕಳಿಸಿದ್ದ 38 ನೋಟೀಸ್ ಗಳ ಬಗ್ಗೆ ತಲೆ ಕೆಡಿಸಿಕೊಂಡಿದ್ದ ಚಂದ್ರ ಅವರು ಟ್ರಾಫಿಕ್ ಮ್ಯಾನೇಜ್ ಮೆಂಟ್ ವಿಭಾಗದಲ್ಲಿ ಪರಿಶೀಲಿಸಿದಾಗ ಬುಲೆಟ್ ಸವಾರನೊಬ್ಬ ಈ ಸಂಖ್ಯೆ ಬಳಸುತ್ತಿರುವುದು ಕಂಡುಬಂದಿತ್ತು. ಕೂಡಲೇ ಚಂದ್ರ ಅವರು ಜಯಲಕ್ಷ್ಮಿ ಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದರು. ದೂರಿನ ಮೇರೆಗೆ 2 ಗಂಟೆಯೊಳಗೇ ಎನ್.ಆರ್. ಸಂಚಾರ ಠಾಣಾ ಆರಕ್ಷಕ ನಿರೀಕ್ಷಕರು ಇರ್ವಿನ್ ರಸ್ತೆಯಲ್ಲಿ ಬುಲೆಟ್ ಮೋಟಾರ್ ಸೈಕಲನ್ನು ಪತ್ತೆ ಮಾಡಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆಗಳ ದಂಡವನ್ನು ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ರೀತಿ ವಾಹನ ಸಂಖ್ಯೆ ಬದಲಾವಣೆ ಮಾಡಿಕೊಂಡಿರುವುದಾಗಿ ಆರೋಪಿ ರವಿ ತಿಳಿಸಿದ್ದಾನೆ.
ವಾಹನಗಳ ನೋಂದಣಿ ಸಂಖ್ಯೆಯನ್ನು ನಕಲಿಯಾಗಿ ಉಪಯೋಗಿಸುವುದು ಕಾನೂನು ಬಾಹಿರವಾಗಿದ್ದು, ಕ್ರಿಮಿನಲ್ ಸ್ವರೂಪದ ಅಪರಾಧ ಎಂದು ಪೊಲೀಸರು ತಿಳಿಸಿದ್ದಾರೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications