ಸಂಚಾರಿ ನಿಯಮ ಉಲ್ಲಂಘನೆ ದಂಡ ತಪ್ಪಿಸಲು ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ದ ಬುಲೆಟ್ ಸವಾರ
ಮೈಸೂರು, ಡಿಸೆಂಬರ್ 9: ಪದೇ ಪದೇ ಸಂಚಾರ ಉಲ್ಲಂಘನೆಯ ದಂಡವನ್ನು ತಪ್ಪಿಸಿಕೊಳ್ಳಲು ಬುಲೆಟ್ ಬೈಕ್ ಸವಾರನೊಬ್ಬ ಭಾರೀ ತಂತ್ರ ಮಾಡಿದ್ದು, ಕೊನೆಗೂ ಮೈಸೂರು ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.
ಕಳೆದ 8 ತಿಂಗಳ ಅವಧಿಯಲ್ಲಿ ಆರೋಪಿಯು 38 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಾನೆ. ಸಿಗ್ನಲ್ ಜಂಪ್, ಅತಿ ವೇಗದ ಚಾಲನೆ, ಅಜಾಗರೂಕತೆಯ ಚಾಲನೆ ಪ್ರಕರಣವೇ ಇದರಲ್ಲಿ ಹೆಚ್ಚಾಗಿತ್ತು.
ದಂಡದಿಂದ ತಪ್ಪಿಸಿಕೊಳ್ಳಲು ನಕಲಿ ನಂಬರ್ ಅಳವಡಿಸಿಕೊಂಡಿದ್ದ ಈ ಬೈಕ್ ಸವಾರನನ್ನು ನರಸಿಂಹರಾಜ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಕನ್ನೇಗೌಡನ ಕೊಪ್ಪಲಿನ ನಿವಾಸಿ ರವಿ ಎಂಬಾತನ ಬುಲೆಟ್ ಬೈಕ್ ಅಸಲಿ ನೋಂದಣಿ ಸಂಖ್ಯೆ ಬೇರೆಯಿದ್ದು, ವಾಹನ ಸವಾರ ತನ್ನ ಬೈಕ್ ನ ನಂಬರ್ ಪ್ಲೇಟ್ ತಿದ್ದುಪಡಿ ಮಾಡಿ ಬೇರೆ ನೋಂದಣಿ ಸಂಖ್ಯೆ ಹಾಕಿಕೊಂಡಿದ್ದ. ಸಿಸಿ ಟಿವಿಗಳ ಫುಟೇಜ್ ಮೂಲಕ ಪೊಲೀಸರು ಒಟ್ಟು 38 ನೋಟೀಸ್ ಗಳನ್ನು ಸವಾರನ ಮನೆ ವಿಳಾಸಕ್ಕೆ ಕಳಿಸಿದ್ದರು. ಆದರೆ ಆರೋಪಿಯು ಅಳವಡಿಸಿಕೊಂಡಿದ್ದ ನೋಂದಣಿ ಸಂಖ್ಯೆಯು ಕುವೆಂಪುನಗರದ ನಿವಾಸಿ ಚಂದ್ರ ಅವರ ಹೋಂಡಾ ಡಿಯೋ ಸ್ಕೂಟರ್ ನದಾಗಿತ್ತು.

ಪೊಲೀಸರು ಕಳಿಸಿದ್ದ 38 ನೋಟೀಸ್ ಗಳ ಬಗ್ಗೆ ತಲೆ ಕೆಡಿಸಿಕೊಂಡಿದ್ದ ಚಂದ್ರ ಅವರು ಟ್ರಾಫಿಕ್ ಮ್ಯಾನೇಜ್ ಮೆಂಟ್ ವಿಭಾಗದಲ್ಲಿ ಪರಿಶೀಲಿಸಿದಾಗ ಬುಲೆಟ್ ಸವಾರನೊಬ್ಬ ಈ ಸಂಖ್ಯೆ ಬಳಸುತ್ತಿರುವುದು ಕಂಡುಬಂದಿತ್ತು. ಕೂಡಲೇ ಚಂದ್ರ ಅವರು ಜಯಲಕ್ಷ್ಮಿ ಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದರು. ದೂರಿನ ಮೇರೆಗೆ 2 ಗಂಟೆಯೊಳಗೇ ಎನ್.ಆರ್. ಸಂಚಾರ ಠಾಣಾ ಆರಕ್ಷಕ ನಿರೀಕ್ಷಕರು ಇರ್ವಿನ್ ರಸ್ತೆಯಲ್ಲಿ ಬುಲೆಟ್ ಮೋಟಾರ್ ಸೈಕಲನ್ನು ಪತ್ತೆ ಮಾಡಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆಗಳ ದಂಡವನ್ನು ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ರೀತಿ ವಾಹನ ಸಂಖ್ಯೆ ಬದಲಾವಣೆ ಮಾಡಿಕೊಂಡಿರುವುದಾಗಿ ಆರೋಪಿ ರವಿ ತಿಳಿಸಿದ್ದಾನೆ.
ವಾಹನಗಳ ನೋಂದಣಿ ಸಂಖ್ಯೆಯನ್ನು ನಕಲಿಯಾಗಿ ಉಪಯೋಗಿಸುವುದು ಕಾನೂನು ಬಾಹಿರವಾಗಿದ್ದು, ಕ್ರಿಮಿನಲ್ ಸ್ವರೂಪದ ಅಪರಾಧ ಎಂದು ಪೊಲೀಸರು ತಿಳಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications