ಲೈಟ್ ಕಂಬಕ್ಕೆ ಗುದ್ದಿದ ಬಸ್, ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ
ತಿ.ನರಸೀಪುರ, ಅಕ್ಟೋಬರ್ 2: ಬ್ರೇಕ್ ವಿಫಲಗೊಂಡ ಖಾಸಗಿ ಬಸ್ ರಸ್ತೆಯುದ್ದಕ್ಕೂ ಅಡ್ಡಾದಿಡ್ಡಿ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪಟ್ಟಣದ ಹೊಸ ತಿರುಮಕೂಡಲಿನ ಕೊಳ್ಳೇಗಾಲ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಇಬ್ಬರು ವೃದ್ಧರು ಗಾಯಗೊಂಡಿದ್ದು, ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಪಟ್ಟಣದ ಶ್ರೀ ವೀರಭದ್ರೇಶ್ವರ ಪೆಟ್ರೋಲ್ ಬಂಕ್ ಮುಂಭಾಗ ನಿಂತಿದ್ದ ಖಾಸಗಿ ಬಸ್ (ಕೆಎ 11, 9888) ಬ್ರೇಕ್ ವಿಫಲಗೊಂಡು ಹೊಸ ತಿರುಮಕೂಲಿನತ್ತ ಇಳಿಮುಖವಾಗಿ ಚಲಿಸಿದೆ. ಇದರಿಂದ ರಸ್ತೆ ಬದಿಯಲ್ಲಿ ನಿಂತಿದ್ದ ತಾಲೂಕಿನ ಕಾರ್ಗಳ್ಳಿ ಗ್ರಾಮದ ನಿವಾಸಿ ಮಹದೇವಯ್ಯ(55) ಹಾಗೂ ಕೊಳ್ಳೇಗಾಲದವರು ಎನ್ನಲಾದ ಪುಟ್ಟಮಾದಯ್ಯ(50) ಎಂಬುವರು ಗಾಯಗೊಂಡಿದ್ದಾರೆ. ಇದೀಗ ಇವರಿಬ್ಬರು ಮೈಸೂರಿನ ಕೆ.ಆರ್.ಆಸ್ಪತ್ರೆ ಹಾಗೂ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಬಸ್ಸಿನಲ್ಲಿದ್ದ ಕ್ಲೀನರ್ ಬಸ್ಸನ್ನು ನಿಯಂತ್ರಣಕ್ಕೆ ತರಲು ಹರಸಾಹಸಪಟ್ಟರು. ಆದರೆ, ಇಳಿಜಾರಿನಲ್ಲಿ ತೆರಳುತ್ತಿದ್ದ ಬಸ್ಸಿನ ವೇಗ ಹೆಚ್ಚಾಗಿ ಹೊಸ ತಿರುಮಕೂಡಲು ವೃತ್ತದಲ್ಲಿ ಬಲಭಾಗದ ಕೊಳ್ಳೇಗಾಲ ರಸ್ತೆಗೆ ತಿರುಗಿ ರಸ್ತೆಯ ಬಲಭಾಗದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಅರ್ಧಭಾಗ ಮುರಿದು ನೆಲಕ್ಕೆ ಬಾಗಿದೆ. ಬಸ್ ಡಿಕ್ಕಿ ಹೊಡೆದ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಅವಘಡದಿಂದ ಹೊಸ ತಿರುಮಕೂಡಲಿನ ವಿದ್ಯುತ್ ಸಂಕರ್ಪವೇ ಸ್ಥಗಿತಗೊಂಡಿತ್ತು. ಹೊಸ ಕಂಬಗಳನ್ನು ಹಾಕಿ ತಂತಿ ಎಳೆದ ಬಳಿಕ ಬಸ್ಸನ್ನು ತೆರವುಗೊಳಿಸಲಾಯಿತು. ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಎಎಸ್ಐ ದೊಡ್ಡೇಗೌಡ ಅವರು ಧಾವಿಸಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications