ಕೆ.ಆರ್.ನಗರದಿಂದ ಮೈಸೂರಿಗೆ ಪ್ರತಿ ಅರ್ಧ ಗಂಟೆಗೊಂದು ಬಸ್
ಮೈಸೂರು, ಫೆಬ್ರವರಿ 06: ಪ್ರಯಾಣಿಕರ ಅನುಕೂಲಕ್ಕಾಗಿ ಕೆ.ಆರ್.ನಗರ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತಿ 30 ನಿಮಿಷಗಳಿಗೊಮ್ಮೆ ಬಸ್ ಸಂಚಾರ ಮಾಡಲಿದ್ದು, ಎಲ್ಲರೂ ಅದರ ಪ್ರಯೋಜನ ಪಡೆಯಬೇಕು ಎಂದು ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಹೊಸದಾಗಿ ಸೇವೆ ಆರಂಭಿಸಿದ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಿತ್ಯ ಬೆಳಗ್ಗೆ 6 ರಿಂದ 11 ಗಂಟೆಯವರೆಗೆ ಮೈಸೂರಿಗೆ ತೆರಳುವ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗುವುದನ್ನು ಮನಗಂಡು ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
6 ಸಾರಿಗೆ ಬಸ್ಗಳು ಬೆಳಿಗ್ಗೆ 6 ಗಂಟೆಯಿಂದ ಆರಂಭಿಸಿ, ರಾತ್ರಿ 9.15 ರವರೆಗೆ ಪ್ರತೀ 30 ನಿಮಿಷಕ್ಕೆ ಒಂದರಂತೆ ಸಂಚಾರ ಮಾಡಲಿದ್ದು ಇದರಿಂದ ಪ್ರಯಾಣದ ಒತ್ತಡ ಕಡಿಮೆಯಾಗಲಿದೆ ಎಂದ ಶಾಸಕರು ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಮತ್ತಷ್ಟು ಬಸ್ ಸಂಚಾರ ಆರಂಭಿಸುವುದಾಗಿ ತಿಳಿಸಿದರು.

ನಾನು ಶಾಸಕನಾಗಿ ಚುನಾಯಿತನಾದ ನಂತರ ರಸ್ತೆ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಇತರ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇನೆ. ಮುಂದೆಯೂ ಜನರಿಗೆ ಅಗತ್ಯ ಅನುಕೂಲ ಕಲ್ಪಿಸಲು ಕೆಲಸ ಮಾಡುತ್ತೇನೆ. ಸಾಲಿಗ್ರಾಮ ತಾಲೂಕು ಕೇಂದ್ರವಾದ ನಂತರ ಪ್ರತೀ ಸೋಮವಾರ ಅಲ್ಲಿಯೂ ಸಾರ್ವಜನಿಕರ ಸಮಸ್ಯೆ ಆಲಿಸುತ್ತಿದ್ದೇನೆ ಎಂದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications