ಸುತ್ತೂರು ಕ್ಷೇತ್ರದ ಸರಳ ಮದುವೆ ಮಾದರಿ ಕಾರ್ಯ : ಸಿಎಂ ಕುಮಾರಸ್ವಾಮಿ
ಮೈಸೂರು, ಫೆಬ್ರವರಿ 2 : ಸುತ್ತೂರು ಜಾತ್ರಾ ಮಹೋತ್ಸದ ಅಂಗವಾಗಿ ನಡೆದ ಸಾಮೂಹಿಕ ವಿವಾಹಕ್ಕೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಶನಿವಾರ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಂದಿನ ಬಜೆಟ್ ಹಿನ್ನೆಲೆ ನಾನು ನಿನ್ನೆಯ ಕಾರ್ಯಕ್ರಮಕ್ಕೆ ಬರಲಾಗಲಿಲ್ಲ. ಇಂದು ಈ ಕಾರ್ಯಕ್ರಮಕ್ಕೆ ಬರಲೇಬೇಕೆಂದು ಸ್ವಾಮೀಜಿಗಳು ಒತ್ತಾಯಿಸಿದರು. ಈ ಸುಸಂದರ್ಭದಲ್ಲಿ ನಾನು ಆಗಮಿಸಿರುವುದು ನನ್ನ ಸೌಭಾಗ್ಯವೇ ಸರಿ. ಸಾಮೂಹಿಕ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿರುವ ಜೋಡಿಗಳಿಗೆ ಶುಭವಾಗಲಿ. ತಾಯಿ ಚಾಮುಂಡೇಶ್ವರಿ ನಿಮಗೆ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.
ಸುತ್ತೂರು ಕ್ಷೇತ್ರ ಹಾಗೂ ದೇವೇಗೌಡರ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿದೆ. ಸರ್ಕಾರ ಮಾಡದೇ ಇರುವ ವಿಶೇಷ ಕಾರ್ಯಕ್ರಮವನ್ನು ಸುತ್ತೂರು ಕ್ಷೇತ್ರ ಮಾಡುತ್ತಿದೆ.

ಗ್ರಾಮೀಣ ಪ್ರದೇಶದ ರೈತರಿಗೆ ಕೃಷಿ ಮೇಳ ಆಯೋಜಿಸಿದೆ. ಗ್ರಾಮೀಣ ಸೊಗಡಿಗೆ ಜಾತ್ರೆಯಲ್ಲಿ ಅನಾವರಣಗೊಂಡಿದೆ. ಪ್ರಸ್ತುತ ಕಾಲಕ್ಕೆ ಈ ರೀತಿಯ ಸರಳ ಮದುವೆ ಅವಶ್ಯಕತೆಯಿದೆ.
ವಿಶ್ವಕ್ಕೆ ಮಾದರಿಯಾಗುವ ರೀತಿ ಶಿಕ್ಷಣ ನೀಡುತ್ತಿದೆ ಸುತ್ತೂರು ಕ್ಷೇತ್ರ. ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಎಂದರೆ, ಇದು ನನ್ನ ಪೂರ್ವ ಜನ್ಮದ ಪುಣ್ಯ. ಅಮ್ಮನ ಸಮನಾದ ಸುಂದರಮೂರ್ತಿ ಅವರು ಇಲ್ಲಿಯೇ ಇದ್ದರೆ ಮಹಿಳೆ ಹೇಗಿರಬೇಕೆಂಬುದು ಎಂಬ ಸರಳತೆ ತೋರಿಸಿಕೊಟ್ಟವರು ಸುಧಾಮೂರ್ತಿ. ಸುಧಾ ಮೂರ್ತಿಯವರು ಹಲವಾರು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರ ಆಶೀರ್ವಾದ ನಿಮ್ಮ ಮೇಲಿರಲಿ ಎಂದು ಪ್ರಾರ್ಥಿಸಿದರು.
ಇದೇ ವೇಳೆ ಪರಿಶಿಷ್ಟ ಪಂಗಡದ 16, ಪರಿಶಿಷ್ಟ ಜಾತಿಯ 119, ಹಿಂದುಳಿದ ವರ್ಗದ 23, ವೀರಶೈವ ಸಮಾಜದ 18, ಅಂಗವಿಕಲರು 4, ಅಂತರ್ಜಾತಿ 8, ಒಟ್ಟು 183 ಕ್ಕೂ ಅಧಿಕ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications