ಮೈಸೂರಿನಲ್ಲಿ ವ್ಯಂಗ್ಯಚಿತ್ರಕಾರ ಆರ್.ಕೆ. ಲಕ್ಷ್ಮಣ್ ಜನ್ಮಶತಮಾನೋತ್ಸವ
ಮೈಸೂರು, ಅಕ್ಟೋಬರ್ 31: "ಸಾವಿರ ಪದಗಳಲ್ಲಿ ಹೇಳಬಹುದಾದ್ದನ್ನು ಕೇವಲ ಒಂದು ವ್ಯಂಗ್ಯ ಚಿತ್ರದ ಮೂಲಕ ಜನಸಾಮಾನ್ಯನಿಗೂ ತಲುಪಿಸಿದವರು ಖ್ಯಾತ ವ್ಯಂಗ್ಯ ಚಿತ್ರಕಾರ ಆರ್ ಕೆ.ಲಕ್ಷ್ಮಣ್" ಎಂದರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ.
ಶನಿವಾರ ರಾಮಾನುಜ ರಸ್ತೆಯಲ್ಲಿರುವ ಮೈಸೂರು ಆರ್ಟ್ ಗ್ಯಾಲರಿಯಲ್ಲಿ ಕರ್ನಾಟಕ ವ್ಯಂಗ್ಯ ಚಿತ್ರಕಾರರ ಸಂಘ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ವಿಶ್ವವಿಖ್ಯಾತ ವ್ಯಂಗ್ಯಚಿತ್ರಕಾರ ದಿ.ಆರ್.ಕೆ.ಲಕ್ಷ್ಮಣ್ ಅವರ ಜನ್ಮಶತಮಾನೋತ್ಸವ ಆಚರಣೆ ಹಾಗೂ ಖ್ಯಾಯ ವ್ಯಂಗ್ಯ ಚಿತ್ರಕಾರ ಹಾಗೂ ಫುಲ್ ಬ್ರೈಟರ್ ಎಂ.ವಿ.ನಾಗೇಂದ್ರಬಾಬು ಅವರ ಆರ್.ಕೆ.ಲಕ್ಷ್ಮಣ್ ಅವರೊಂದಿಗಿನ ಒಡನಾಟದ ಭಾವಚಿತ್ರ ಹಾಗೂ ಲೇಖನಗಳ ಪ್ರದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದರು.
ಪದ್ಮಭೂಷಣ, ಪದ್ಮವಿಭೂಷಣ ಎರಡೂ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದ ಮಹಾನ್ ವ್ಯಂಗ್ಯಚಿತ್ರಕಾರ ಆರ್.ಕೆ. ಲಕ್ಷ್ಮಣ್. ಭಾರತದ ಆಡಳಿತವನ್ನು ಪ್ರಶ್ನೆ ಮಾಡುತ್ತ ಹೋಗುವ ಇಡೀ ನಲ್ವತ್ತು ವರ್ಷಗಳ ಜರ್ನಿ ಇದೆಯಲ್ಲ ಅದೇ ವಿಶೇಷ. ಇಡೀ ಭಾರತದ ಪತ್ರಿಕಾ ಲೋಕಕ್ಕೆ ಹೊಸ ಹುರುಪು ನೀಡಿದವರು ಎಂದು ಬಣ್ಣಿಸಿದರು.

"ಆರ್ ಕೆ.ಲಕ್ಷ್ಮಣ್. ಅವರ ವ್ಯಂಗ್ಯಚಿತ್ರದಲ್ಲಿ ತೀಕ್ಷ್ಣತೆ ಪ್ರಖರವಾಗಿರುತ್ತಿತ್ತು. ಒಂದು ಲೇಖನದಲ್ಲಿ ಹೇಳಬಹುದಾದ್ದನ್ನು ಕೇವಲ ಒಂದೇ ಒಂದು ವ್ಯಂಗ್ಯ ಚಿತ್ರದಲ್ಲಿ ಹೇಗೆ ಪ್ರಭಾವಶಾಲಿಯಾಗಿ ಜನರಿಗೆ ದಾಟಿಸುತ್ತಿದ್ದರು ಎಂಬುದೇ ಅವರ ವಿಶೇಷತೆ. ಆ ಕಲೆಯನ್ನು ವರ್ಣಿಸಲು ಸಾಧ್ಯವಿಲ್ಲ" ಎಂದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications