ಹೊರಗೆ ಸ್ಪಾ, ಒಳಗೆ ವೇಶ್ಯಾವಾಟಿಕೆ; ಮೈಸೂರಿನಲ್ಲಿ ಮತ್ತೂ ಒಂದು ಪ್ರಕರಣ ಬೆಳಕಿಗೆ
ಮೈಸೂರು, ಜುಲೈ 18: ಸಾಂಸ್ಕೃತಿಕ ನಗರಿ ಮೈಸೂರಿನ ಹೋಟೆಲ್ಗಳಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಹೊಸ ಬೆಳವಣಿಗೆಯಾಗಿದ್ದು, ಮೇಲಿಂದ ಮೇಲೆ ಇಂಥ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ದುರಂತದ ಸಂಗತಿ.
ಮೈಸೂರಿನ ಖಾಸಗಿ ಬಸ್ ನಿಲ್ದಾಣ, ಸಯ್ಯಾಜಿರಾವ್ ರಸ್ತೆಗಳ ಬೀದಿ ಬದಿಗಳಲ್ಲೇ ರಾಜಾರೋಷವಾಗಿ ದಂಧೆ ನಡೆಯುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಮನೆಗಳಲ್ಲೇ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಆಗೊಮ್ಮೆ ಈಗೊಮ್ಮೆ ಪೊಲೀಸರು ಕದ ತಟ್ಟಿದಾಗ ಮಾತ್ರ ಪ್ರಕರಣಗಳು ಬೆಳಕಿಗೆ ಬರುತ್ತವೆ. ಉಳಿದಂತೆ ಎಲ್ಲವೂ ಗಪ್ ಚುಪ್ ಆಗಿಯೇ ನಡೆಯುತ್ತಿರುತ್ತವೆ.
ಈಗಾಗಲೇ ಯೋಗ ಕೇಂದ್ರಗಳ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸಿ ಸಿಕ್ಕಿ ಬಿದ್ದ ಪ್ರಕರಣಗಳು ಸಾಕಷ್ಟಿವೆ. ಇದೀಗ ದೊಡ್ಡ ಹೋಟೆಲ್ಗಳಲ್ಲಿ ರೂಂ ಪಡೆದು ಮೇಲ್ನೋಟಕ್ಕೆ ಸ್ಪಾ, ಮಸಾಜ್ ನಡೆಸುವಂತೆ ನಾಟಕವಾಡುತ್ತಾ ಒಳಗೊಳಗೆ ವೇಶ್ಯಾವಾಟಿಕೆ ನಡೆಸುತ್ತಿರುವ ಎರಡು ಪ್ರಕರಣವನ್ನು ಸಿಸಿಬಿ ಪೊಲೀಸರು ಒಂದೇ ವಾರದಲ್ಲಿ ಪತ್ತೆ ಹಚ್ಚಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ನಗರದ ಬೆಂಗಳೂರು ರಸ್ತೆಯಲ್ಲಿರುವ ಹೋಟೆಲ್ ಸಮುದ್ರದಲ್ಲಿ ಮಸಾಜ್ ಹೆಸರಿನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಂಡಿದ್ದರು. ಇದೀಗ ಮತ್ತೊಂದು ಹೋಟೆಲ್ ಮೇಲೆ ದಾಳಿ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಇಬ್ಬರು ಕೊಲ್ಕತ್ತಾ ಮೂಲದ ಮಹಿಳೆಯರನ್ನು ರಕ್ಷಿಸಿದ್ದಾರೆ.
ನಗರದ ಗೋಕುಲಂನಲ್ಲಿರುವ ದಿ ಆಲೀವ್ ಶೈನ್ ಎಂಬ ಹೋಟೆಲ್ ನಲ್ಲಿ ಸ್ಪಾ ಹೆಸರಿನಲ್ಲಿ ಶ್ವೇತಾ ಮತ್ತು ರಘುನಂದನ್ ಎಂಬುವರು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಇವರಿಬ್ಬರು ಕಳೆದ ಕೆಲವು ವರ್ಷಗಳಿಂದ ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸಿ ಸಿಕ್ಕಿ ಬಿದ್ದಿದ್ದು, ಪ್ರಕರಣಗಳು ದಾಖಲಾಗಿವೆ. ಇದೀಗ ಇವರು ಹೋಟೆಲ್ ನಲ್ಲಿ ಸ್ಪಾ ನಡೆಸುವ ನೆಪದಲ್ಲಿ ಕೊಲ್ಕತ್ತಾ ಮೂಲದ ಇಬ್ಬರು ಯುವತಿಯರನ್ನಿಟ್ಟುಕೊಂಡು ದಂಧೆ ನಡೆಸುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮೈಸೂರು ನಗರ ಡಿ.ಸಿ.ಪಿ. ಮುತ್ತುರಾಜು ಅವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ. ಘಟಕದ ಎ.ಸಿ.ಪಿ. ಬಿ.ಆರ್.ಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ನಡೆಸುತ್ತಿದ್ದ ಶ್ವೇತಾ ಮತ್ತು ರಘುನಂದನ್ ಹಾಗೂ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಪ್ರದೀಪ್, ಸತೀಶ್, ಮೋಹನ್ ಕುಮಾರ್ ಅವರನ್ನು ಬಂಧಿಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ವೇಶ್ಯಾವಾಟಿಕೆಗೆ ಬಳಕೆಯಾಗಿದ್ದ 11, 720 ನಗದು ಹಣ ಹಾಗೂ 6 ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications